Homeಅಂತರಾಷ್ಟ್ರೀಯಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇತಿಹಾಸದಲ್ಲಿಯೇ ಯಾವ ಟೆಕ್ನಾಲಜಿ ಕಂಪನಿಗೂ ಈ ಮಟ್ಟದ ಭಾರಿ ಮೊತ್ತದ ದಂಡವನ್ನು ವಿಧಿಸಿರಲಿಲ್ಲ. 2012ರಲ್ಲಿ ಸರ್ಚ್ ಇಂಜಿನ್ ದಿಗ್ಗಜ ಸಂಸ್ಥೆ ಗೂಗಲ್ 22 ಕೋಟಿ ಡಾಲರ್‍ಗಳಷ್ಟು ದಂಡ ಕಟ್ಟಿತ್ತು.

ಬಳಕೆದಾರರ ಮಾಹಿತಿ ರಕ್ಷಣೆ, ಗೌಪ್ಯತೆಯ ಕಾನೂನು ಉಲ್ಲಂಘನೆಯ ಆರೋಪಗಳ ಮೇಲಿನ ತನಿಖೆಗೆ ಸಂಬಂಧಿಸಿ ಅಮೆರಿಕಾ ನಿಯಂತ್ರಣ ಮಂಡಳಿ ‘ಫೆಡರಲ್ ಟ್ರೇಡ್ ಕಮಿಷನ್’ (ಎಫ್.ಟಿ.ಸಿ) ಜೊತೆ ಫೇಸ್ ಬುಕ್‍ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇರೆಗೆ ಎಪ್.ಟಿ.ಸಿಯಲ್ಲಿ ನಡೆದ ದಂಡ ಹಾಕಬೇಕೆ ಬೇಡವೇ ಎಂಬ ಮತ ಪ್ರಕ್ರಿಯೆಯಲ್ಲಿ 3-2 ಮತಗಳ ಅಂತರದಲ್ಲಿ ಅನುಮೋದನೆ ಲಭಿಸಿದೆ ಎಂದು ವಾಲ್‍ಸ್ಟ್ರೀಟ್ ಜರ್ನಲ್ ಈ ಕುರಿತು ಒಂದು ಲೇಖನ ಪ್ರಕಟಿಸಿದೆ.

ಈ ನಿಯಂತ್ರಣ ಮಂಡಳಿಯಲ್ಲಿ ಡೆಮಾಕ್ರಾಟ್ ಸದಸ್ಯರು ಒಪ್ಪಂದದ ಪ್ರತಿಪಾದವನ್ನು ವಿರೋಧಿಸಿದರೆ, ರಿಪಬ್ಲಿಕನ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇನ್ನು ಈ ಒಪ್ಪಂದಕ್ಕೆ ಜಸ್ಟೀಸ್ ಡಿಪಾರ್ಟ್‍ಮೆಂಟ್ ಸಿವಿಲ್ ಡಿವಿಜನ್ ಅನುಮೋದನೆ ಮಾಡಬೇಕಿದೆ. ಅಮೆರಿಕಾದ ಅಧ್ಯಕ್ಷ ಚುನಾವಣೆಯ ಪ್ರಚಾರದಲ್ಲಿ ಡೋನಾಲ್ಡ್ ಟ್ರಂಪ್‍ಗಾಗಿ ಕೆಲಸ ಮಾಡಿದ ಕೇಂಬ್ರಿಡ್ಜ್ ಅನಲಿಟಿಕಾ ಎನ್ನುವ ಕಂಪೆನಿ ಕೋಟ್ಯಾಂತರ ಜನ ಫೇಸ್ ಬುಕ್‍ ಬಳಕೆದಾರರ ವಯಕ್ತಿಕ ಡೇಟಾವನ್ನು ತೆಗೆದುಕೊಂಡಿದೆ. ಈ ವಿಷಯ ಹೊರ ಬಿದ್ದದ್ದರಿಂದ 2011ರಲ್ಲಿ ಫೇಸ್ ಬುಕ್‍ ಜೊತೆ ಮಾಡಿಕೊಂಡಿದ್ದ ಖಾಸಗಿ ಒಪ್ಪಂದದ ಕೇಸನ್ನು ಮತ್ತೆ ತೆರೆಯಲಾಗಿದೆ. ಹಳೆಯ ಕೇಸಿನಲ್ಲಿ ತನಿಖೆಯನ್ನು ಪನಃ ಪ್ರಾರಂಭಿಸಿರುವುದಾಗಿ ಕಳೆದ ವರ್ಷವೇ ಎಫ್.ಟಿ.ಸಿ ಪ್ರಕಟಿಸಿದೆ.

ಜಗತ್ತಿನಾದ್ಯಂತ 200 ಕೋಟಿಗಳಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್‍, ಬಳಕೆದಾರರ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿ ಅಮೆರಿಕದ ಜೊತೆಗೆ ಜಗತ್ತಿನಾದ್ಯಂತ ಕೆಲವು ದೇಶಗಳ ನಿಯಂತ್ರಣ ಮಂಡಳಿಗಳಿಂದ ವಿಚಾರಣೆಯನ್ನು ಎದುರಿಸುತ್ತಿದೆ. ಈ ಕೇಸಿನಲ್ಲಿ ಕಂಪನಿಯ ಮೇಲೆ 300 ರಿಂದ 500 ಕೋಟಿ ಡಾಲರ್ ದಂಡ ಬೀಳಬಹುದೆಂದು ಮುಂಚೆಯೇ ಅಂದಾಜು ಮಾಡಿದೆ.

ಫೇಸ್ ಬುಕ್‍ ಕಳೆದ ವರ್ಷ 5,600 ಕೋಟಿ ಡಾಲರ್ ಲಾಭ ಗಳಿಸಿಕೊಂಡಿದೆ. ಈ ವರ್ಷದಲ್ಲಿ ಇದು 6,900 ಕೋಟಿ ಡಾಲರ್ ಬೆಳೆಯಬಹುದೆಂದು ಅಂದಾಜು. ಭಾರೀ ಲಾಭ ಗಳಿಸಿರುವ ಕಂಪನಿಗೆ ಈ ದಂಡ ದೊಡ್ಡ ಮೊತ್ತವೇನು ಅಲ್ಲ .., ಸಂಸ್ಥೆಯ ಜೊತೆ ಮತ್ತಷ್ಟು ಕಠಿಣವಾಗಿ ವ್ಯವಹರಿಸಬೇಕೆಂದು ಫೇಸ್ ಬುಕ್‍ ವಿಮರ್ಶಕರು ಹೇಳುತ್ತಿದ್ದಾರೆ. ಮುಖ್ಯವಾಗಿ ಬಳಕೆದಾರರ ವ್ಯಕ್ತಿಗತ ಮಾಹಿತಿಗೆ ಸಂಬಂಧಿಸಿದಂತೆ ಕಂಪನಿ ಮೇಲೆ ಕಠಿಣವಾದ ನಿರ್ಬಂಧಗಳನ್ನು ವಿಧಿಸಬೇಕೆಂದು ಹೇಳುತ್ತಿದ್ಧಾರೆ.

ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ಕೃಪೆ -ಆಂದ್ರಜ್ಯೋತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...