Homeಅಂಕಣಗಳುಬಸವತತ್ವ ವಿರೋಧಿ ಮೋದಿಯ ಸಾನಿಧ್ಯ!, ಇಷ್ಟಲಿಂಗ ಪೂಜೆ ಹೆಸರಲ್ಲಿ ಬಿಜೆಪಿಯ ಧಗಲ್ಬಾಜಿ...

ಬಸವತತ್ವ ವಿರೋಧಿ ಮೋದಿಯ ಸಾನಿಧ್ಯ!, ಇಷ್ಟಲಿಂಗ ಪೂಜೆ ಹೆಸರಲ್ಲಿ ಬಿಜೆಪಿಯ ಧಗಲ್ಬಾಜಿ…

- Advertisement -
- Advertisement -

ವಿಶ್ವಾರಾಧ್ಯ ಸತ್ಯಂಪೇಟೆ |

ಹತಾಶಗೊಂಡಿರುವ ಸಂಘ ಪರಿವಾರ 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಮತ್ತೆ ಧರ್ಮದ ಹೆಸರಲ್ಲಿ ತನ್ನ ಕೊಳಕು ಚಟುವಟಿಕೆಗಳನ್ನು ಆರಂಭಿಸಿದೆ. ರಾಜ್ಯದಲ್ಲಿ ಇಷ್ಟಲಿಂಗ ಧಾರಣೆ ಹೆಸರಲ್ಲಿ ಬಿಜೆಪಿ ಮತ್ತು ಪಂಚ ಪೀಠಾಧಿಪತಿಗಳೆಂಬ ಪೀಡೆಗಳು ಈಗ ಕಾರ್ಯಾಚರಣೆಗೆ ಇಳಿದಿವೆ. ಬಸವತತ್ವದ ಪುಟ್ಟಾಪೂರಾ ವಿರೋಧಿಗಳಾದ ಈ ಜನ ಇವತ್ತು ಇಷ್ಟಲಿಂಗದ ಬಗ್ಗೆ ಮಾತನಾಡಲೂ ಆಯೋಗ್ಯರು. ಈ ಹುನ್ನಾರಗಳ ವಿರುದ್ಧ ಪ್ರಜಾಪ್ರಭುತ್ವವಾದಿಗಳೆಲ್ಲ ಈಗಲೇ ಧ್ವನಿ ಎತ್ತಬೇಕಿದೆ.

ರಾಜ್ಯದೆಲ್ಲೆಡೆ ಲಿಂಗಾಯತ ಧರ್ಮದ ಪ್ರಜ್ಞೆ ಮೊಳಗುತ್ತಿದೆ ಎಂದು ಸಾಮಾಜಿಕ ಕಳಕಳಿ ಉಳ್ಳ ಎಲ್ಲರೂ ಒಂದೆಡೆ ಬೀಗುತ್ತಿದ್ದರೆ ಇನ್ನೊಂದೆಡೆ ಅವರೆಲ್ಲರ ಗಮನಕ್ಕೆ ಬರದ ರೀತಿಯಲ್ಲಿ ಹಲವಾರು ಆಘಾತಕಾರಿ ಬೆಳವಣಿಗೆಗಳು ನಡೆದು ಹೋಗುತ್ತಿವೆ. ಇದೆ ತಿಂಗಳು 15 ರಿಂದ 19 ರವರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟಿ ಎಂಬ ಗ್ರಾಮದಲ್ಲಿ
ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನರ ಸಾಮೂಹಿಕ ಇಷ್ಟಲಿಂಗ ಪೂಜೆ ಎಂಬ ಹೆಸರಿನ ಧಗಲಬಾಜಿತನ ಯಾಗ ಎಗ್ಗಿಲ್ಲದೆ ನಡೆಯುತ್ತಿದೆ.

ಅಡವಿಸ್ವಾಮಿ

ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನ ಜಂಗಮರು ಎಂಬ ಪದ ಹನ್ನೆರಡನೆಯ ಶತಮಾನದಲ್ಲಿ ಬಳಕೆಯಾಗಿರುವಂತಹದ್ದು. ಅಂದು ಬಸವಣ್ಣನವರು ಕನಸಿದ ಸಮಾಜ ಕಟ್ಟಲು ಕಟಿಬದ್ಧರಾಗಿ ಲಕ್ಷದ ಮೇಲೆ ತೊಂಬತ್ತಾರು ಸಹಸ್ರ ಜನರನ್ನು ತರಬೇತಿ ನೀಡಿ ಸಿದ್ಧಗೊಳಿಸಿದ್ದರು. ಇವರೆಲ್ಲ ಭಿನ್ನ ಭಿನ್ನ ಜಾತಿ ಧರ್ಮಗಳಿಂದ ಎದ್ದು ಬಂದ ವಿವೇಕವಂತರಾಗಿದ್ದರು. ಇಷ್ಟಲಿಂಗ ಕುರುಹನ್ನು ಇಂಬಿಟ್ಟುಕೊಂಡು ಮಾಡಿದ ಕ್ರಾಂತಿ ಜಗತ್ತಿನ ಯಾವ ಪ್ರದೇಶದಲ್ಲೂ ಜರುಗಿಲ್ಲ. ಸ್ತ್ರೀ ಸಮಾನತೆ, ಮೇಲು ಕೀಳು, ಬಡವ-ಬಲ್ಲಿದ ಎಂಬ ಶಬ್ಧಗಳು ಬಸವಣ್ಣನವರ ಸಂದರ್ಭದಲ್ಲಿ ಅರ್ಥ ಕಳೆದುಕೊಂಡಿದ್ದವು. ಬಸವಣ್ಣನವರು ಪ್ರಧಾನಿಯಾಗಿದ್ದಾಗ ಅಲ್ಲಿನ ರಾಜ ಬಿಜ್ಜಳನನ್ನು ಭವಿಯೆಂದು ಕರೆದುದಲ್ಲದೆ ಆನೀ ಭವಿ ಬಿಜ್ಜಳಂಗೆ ಅಂಜುವೆನೆ ? ಎಂಬ ಸವಲನ್ನು ಹಾಕಿದ್ದರು. ಅಷ್ಟೇ ಅಲ್ಲ ಕಲ್ಯಾಣದಲ್ಲಿ ಅಂದು ಬಂದು ಸಮಾವೇಶಗೊಂಡಿದ್ದ ಯಾವ ಶರಣನು ತನ್ನ ಆತ್ಮಾಭಿಮಾನಬಿಟ್ಟು ಬದುಕಿರಲಿಲ್ಲ.

ಕಾಯದ ದಾಸೋಹ ತತ್ವಗಳ ಹಿನ್ನೆಲೆಯಲ್ಲಿ ರೂಪಗೊಂಡ ಚಳುವಳಿ ಇಷ್ಟಲಿಂಗವನ್ನು ತನ್ನ ಮೇಟಿಯಾಗಿ ಇಟ್ಟುಕೊಂಡು ನಡೆಸಿದ ಕ್ರಾಂತಿ ಅತ್ಯದ್ಭುತ. ದುರಂತವೆಂದರೆ ಆ ಚಳುವಳಿಯ ಎಲ್ಲಾ ಚರ ಜಂಗಮರನ್ನು ಹಾಗೂ ಆ ತತ್ವಗಳನ್ನು ಅವರ ಕಣ್ಣೆದುರಿಗೆ ಹಾಳು ಮಾಡಲು ಪಟ್ಟಭದ್ರ ಶಕ್ತಿಗಳು, ಮೂಲಭೂತವಾದಿಗಳು ಇನ್ನಿಲ್ಲದ ಪರಿಶ್ರಮ ಪಟ್ಟರು. ಸಹಸ್ರಾರು ಜನ ಶರಣರ ಬರ್ಬರ ಹತ್ಯೆಗಳಾದವು. ತತ್ವಗಳಿಗಾಗಿ ಹರಳಯ್ಯ- ಮಧುವಯ್ಯಗಳ ಎಳೆಹೂಟಿ ಶಿಕ್ಷೆ ಎಲ್ಲರ ಕಣ್ಣೆದುರಿಗೆ ಜರುಗಿ ಹೋಯ್ತು.

ಜನದ್ರೋಹಿ, ಧರ್ಮದ್ರೋಹಿ ಮೋದಿ

ಚಾರಿತ್ರ್ಯಿಕ ಸತ್ಯಗಳನ್ನು ಮರೆ ಮಾಚುತ್ತ ಬಂದ ಟೊಳ್ಳು ಇತಿಹಾಸ ಖೋರರು ಮುದ್ದಾಂ ಆಗಿ ಇಂಥ ಕಳವಳಕಾರಿಯಾದ ಸಂಗತಿಗಳನ್ನು ಬೇಕಂತಲೆ ಮರೆ ಮಾಚಿದರು. ಸಕಲ ಜೀವರಾಶಿಗೆ ಒಳಿತಾಗಬಲ್ಲ ತತ್ವವನ್ನು ಹೀಚುಹೀಚುಕಿ ಸಾಯಿಸಿದರು. ತದ ನಂತರ ಬಂದ ಆಂದ್ರದ ಆರಾಧ್ಯ ಜಂಗಮರು ಲಿಂಗಾಯತ ಧರ್ಮದ ತತ್ವಗಳನ್ನು ಇಂಚು ಇಂಚಾಗಿ ಹಾಳು ಮಾಡುತ್ತ ನಡೆದರು. ಅವರೆಲ್ಲರ ಪಳಿಯುಳಿಕೆಯೆ ಇಂದಿನ ಬಹುತೇಕ ಮಠಪೀಠ ಪರಂಪರೆಯ ಸ್ವಾಮೀಜಿಗಳು.

ವಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಕನಹಳ್ಳಿ ಗ್ರಾಮದ ಪಡಪೋಸಿಯೊಬ್ಬ 1994 ರಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟಿಯಲ್ಲಿ ಠಿಕಾಣಿ ಹೂಡಿದ. ತಲೆಯಲ್ಲಿ ಮಿದುಳು ಇಲ್ಲದವರ ವರ್ತಿಸುವ ಈ ವ್ಯಕ್ತಿಗೆ ಧಾರ್ಮಿಕವಾದ ಯಾವುದೆ ಆಚಾರ ವಿಚಾರ, ತತ್ವ ಸಿದ್ಧಾಂತದ ಎಳ್ಳಷ್ಟು ಪರಿಚಯವಿಲ್ಲ. ಅರೆಬರೆ ಬಟ್ಟೆಯಲ್ಲಿ ನಾಗಾಸಾಧುಗಳಂತೆ ಕಾಣುವ ಅರೆ ಹುಂಬನೊಬ್ಬನನ್ನು ಮುಂದು ಮಾಡಿ ಪುರೋಹಿತಶಾಹಿ ವ್ಯವಸ್ಥೆ ಅವನ ಮೂಲಕ ಮತ್ತೆ ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜನರ ಇಷ್ಟಲಿಂಗ ಪೂಜೆ ಎಂಬ ಪ್ರಹಸನವೊಂದನ್ನು ನಡೆಸಿದೆ.

ಅಡವಿಸ್ವಾಮಿಯ ಪಟಾಲಂ

ಹೇಗೂ ಜನತೆಯಲ್ಲಿ ಬಸವಾದಿ ಶರಣರ ಬಗೆಗೆ ಇನ್ನಿಲ್ಲದ ಪ್ರೀತಿ, ಮಮತೆ, ಗೌರವ ಎಲ್ಲವೂ ಇನ್ನೂ ಹಚ್ಚ ಹಸಿರಾಗಿ ಇವೆ. 770 ಅಮರ ಗಣಂಗಳು ಅಂದು ಮಾಡಿದ ಕ್ರಾಂತಿಯ ಬಗ್ಗೆ ದಂತಕತೆಗಳಿವೆ. ಜನತೆಯ ಮನಸ್ಸಿನಲ್ಲಿರುವ ಪ್ರೀತಿ ಮಮತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಲಿಂಗಾಯತ ಧರ್ಮದ ಹೈಜಾಕ ಮಾಡುವ ಕಂಪನಿಯವರಾದ ಪಂಚಪೀಠಾಧೀಶ್ವರರೆಲ್ಲ ಇದಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಶ್ರೀಶೈಲ, ಕಾಶಿಯ ಜಗದ್ಗುರುಗಳು , ಹೊಸಪೇಟೆಯ ಡಾ. ಸಂಗನಬಸವ ಸ್ವಾಮಿ, ಧಾರವಾಡದ ಮಲ್ಲಿಕಾರ್ಜುನ ಸ್ವಾಮಿ, ನಾಲವಾರದ ತೋಟೇಂದ್ರ ಸ್ವಾಮಿ ಮುಂತಾದವರೆಲ್ಲ ಅಲ್ಲಿ ಠಳಾಯಿಸಲಿದ್ದಾರೆ. ಮುಸುರೆಗೆ ನೋಣ ಮುತ್ತಿಕೊಂಡಿಪ್ಪಂತೆ. ಕಸುವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ ಬಹುಭಾಷಾ ಪಂಡಿತರು ಇಲ್ಲಿ ನೆರೆಯಲಿದ್ದಾರೆ. ಈ ಸಂದರ್ಭದಲ್ಲಿ ನನಗೆ ಅಮ್ಮುಗೆ ರಾಯಮ್ಮನ ವಚನ ನೆನಪಾಗುತ್ತಿದೆ.

ಕಾಗೆಯ ಮರಿ ಕೋಗಿಲೆಯಾಗಬಲ್ಲುದೆ ?
ಸೀಳ ನಾಯಿ ಸಿಂಹದ ಮರಿಯಾಗಬಲ್ಲುದೆ ?
ಅರಿವು ಆಚಾರ ಹೊತ್ತುಕೊಂಡು ತಿರುಗುವ ಗಾವಿಲರ
ಮುಖವ ನೋಡಲಾಗದು ಅಮುಗೇಶ್ವರಾ

ಜನ ಸಾಮಾನ್ಯರು ಎಲ್ಲಿಯಾದರೂ ನೆರೆಯುತ್ತಾರೆಂದರೆ ಸಾಕು ಅಲ್ಲಿ ರಾಜಕಾರಣಿಗಳು ಹದ್ದುಗಳಂತೆ ಬಂದು ಎರಗುತ್ತಾರೆ. ತಮ್ಮ ಬೇಳೆ ಬೇಯಿಸಿಕೊಂಡು ಜನ ಸಾಮಾನ್ಯರಲ್ಲಿ ದೊಡ್ಡ ಧಾರ್ಮಿಕ ನಾಯಕರು ಎಂದು ಫೋಜ್ ಕೊಡುತ್ತಾರೆ. ಜನರ ಧಾರ್ಮಿಕ ನಂಬಿಕೆಗಳ ಮೇಲೆ ಸವಾರಿ ಮಾಡಿ ಎಲ್ಲರನ್ನೂ ದಿಶಾಬೂಲ್ ಗೊಳಿಸುತ್ತಾರೆ. ಹೀಗಾಗಿಯೆ ನಮ್ಮ ದೇಶದ ಪ್ರಧಾನಿ ಊರ್ಫ ಚೌಕಿದಾರ ಶ್ರೀ. ಸನ್ಮಾನ್ಯ ನರೇಂದ್ರ ಮೋದಿಯವರೂ ಸಹ ಇಲ್ಲಿ ತಮ್ಮ ದಿವ್ಯ ದರ್ಶನವನ್ನು ಜನತೆಗೆ ಮಾಡಿಸಲಿದ್ದಾರೆ. ಲಿಂಗಾಯತನಲ್ಲದ ಕರ್ಮಠ ಸಿದ್ಧಾಂತಿ ಯಡ್ಡಿಯ ಪರಿವಾರವೂ ಇಲ್ಲಿ ಜಮಾಗೊಳ್ಳಲಿದೆ. ಬಿ.ಜೆ.ಪಿ. ಪಾಳೆಯಕ್ಕೆ ಜಿಗಿದ ಮೊಟ್ಟ ಮೊದಲ ಧನದಾಹಿ ಶಿವಣ್ಣಗೌಡ ನಾಯಕರ ಮತಕ್ಷೇತ್ರದಲ್ಲಿಯೆ ಈ ವೀರಗೋಟಿ ಬರುತ್ತದೆ. ಹೀಗಾಗಿ ರಕ್ತಪಿಪಾಸುಗಳು, ಅರೆಬೆಂದ ಧಾರ್ಮಿಕ ಕಪಟ ವೇಷಧಾರಿಗಳು ಜನ ಸಾಮಾನ್ಯರನ್ನು ಮತ್ತದೆ ಶಿಲಾಯುಗಕ್ಕೆ ಕೊಂಡೊಯ್ಯುವ ಎತ್ತುಗಡೆ ಯಾವ ಎಗ್ಗಿಲ್ಲದೆ ನಡೆದಿವೆ. ಜನರೂ ಅಷ್ಟೇ : “ಜನ ಮರುಳೋ ಜಾತ್ರೆ ಮರುಳೋ…… ಮರುಳೋ ಸಿದ್ಧೇಶ್ವರ” ಎನ್ನುತ್ತಾ ಗುಂಪಿನಲ್ಲಿ ಗೋವಿಂದ ಎನ್ನುತ್ತಾ ಹೊರಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...