Homeಕರ್ನಾಟಕಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಬಹಿರಂಗ ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಆಗ್ರಹಿಸಿ ಡಿ.ಎಸ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಂಡ್ಲುಪೇಟೆಯ ದಲಿತ ಯುವಕನರ ಬೆತ್ತಲೆ ಮೆರವಣಿಗೆ ಮೂಲಕ ಬಹಿರಂಗ ಅಸ್ಪೃಶ್ಯತೆ ಆಚರಣೆ ಮಾಡಿದ್ದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ಮಾನವ ಪ್ರೇಮಿಗಳು ಪಾಲ್ಗೊಂಡು ಜಿಲ್ಲಾಡಳಿತದ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವಕನಿಗೆ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸವನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ತಪ್ಪತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು, ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸಬಾರದು ಎಂಬ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಯಿತು.

ದೇಶದಲ್ಲಿ ದಲಿತರನ್ನು ಮತ್ತಷ್ಟು ದುರ್ಬಲಗೊಳಿಸಲು ಮೀಸಲಾತಿಯನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ. ಬಡ್ತಿ ಮೀಸಲಾತಿಗೆ ನೂರಾರು ಅಡ್ಡಿಗಳನ್ನು ಒಡ್ಡಲಾಗುತ್ತಿದೆ. ದಲಿತ ದೌರ್ಜನ್ಯ ಕಾಯ್ದೆಯ ಹಲ್ಲು ಕೀಳುವ ಹುನ್ನಾರ ನಡೆಯುತ್ತಿದೆ, ಸಾಲದು ಎಂಬಂತೆ ಬೆತ್ತಲು ಮಾಡಿ ದೌರ್ಜನ್ಯವೆಸಗುವ ಕ್ರೂರ ಘಟನೆಗಳನ್ನು ನಡೆಯುತ್ತಿರುವುದನ್ನು ಸಹಿಸಲಾಗುವುದಿಲ್ಲ. ಪ್ರತಾಪ ದಲಿತನಾದ ಕಾರಣಕ್ಕೆ ಆತನನ್ನು ಬೆತ್ತಲು ಮಾಡಿ ಅವಮಾನ ಮಾಡಲಾಗಿದೆ. ಬೇರೆ ಸವರ್ಣಿಯ ಜಾತಿಯವರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಹೊಡೆದು ಬಡಿಯುವುದಕ್ಕಿಂತ ರೀತಿ ಬೆತ್ತಲು ಮಾಡುವುದು ಅಮಾನವೀಯ. ಮೈಮೇಲೆ ಆಗುವ ಗಾಯಕ್ಕಿಂತ ಇದು ಮನಸ್ಸಿನ ಮೇಲಾಗುವ ಗಾಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಒಗ್ಗಾಟ್ಟಾಗಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸೋಣ ಎಂದು ಹಿರಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್ ಕಿಡಿಕಾರಿದರು.

ಇಂದು ದೇಶಾದ್ಯಂತ ದಲಿತ ದಮನಿತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಘಪರಿವಾರ ಕುಮ್ಮಕ್ಕು ಕೊಡುತ್ತಿದೆ. ದಲಿತರು, ಮುಸ್ಲಿಮರು, ಮಹಿಳೆಯರ ಮೇಲೆ ಎಗ್ಗಿಲ್ಲದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ಮೇಲಿದೆ. ಇಂತಹ ಸಂದರ್ಭದಲ್ಲಿ ನಾವು ಒಗ್ಗಟ್ಟಾಗುವ ಅನಿರ್ವಾಯತೆ ಹೆಚ್ಚಾಗಿದ್ದು ಆ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕಬೇಕು ಎಂದರು.

ವಿಡಿಯೋ ನೋಡಿ 

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಗೌರಿಯವರ ಮಾತುಗಳು.ದಿನಾಂಕ ೨ರಂದು ಗುಂಡ್ಲುಪೇಟೆಯಲ್ಲಿ ದಲಿತ ಯುವಕ ಪ್ರತಾಪ್ ನನ್ನು ಬೆತ್ತಲೆ…

Naanu Gauri यांनी वर पोस्ट केले बुधवार, १२ जून, २०१९

ಕರ್ನಾಟಕ ಜನಶಕ್ತಿಯ ಗೌರಿಯವರು ಮಾತನಾಡಿ ಇದೇ ಮಾದರಿಯಲ್ಲಿ ತುಮಕೂರಿನ ಗುಬ್ಬಿಯಲ್ಲಿಯೂ ದಲಿತ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗ ಪ್ರಗತಿಪರರೆಲ್ಲರೂ ಸೇರಿ ‘ಚಲೋ ತುಮಕೂರು’ ಎಂಬ ದೊಡ್ಡ ಹೋರಾಟ ಮಾಡಿದ್ದೆವು. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ನಾಗರೀಕ ಸಮಾಜ ಏನು ಮಾಡುತ್ತಿದೆ? ಇದು ಅವರೆಲ್ಲರೂ ತಲೆತಗ್ಗಿಸಬೇಕಾದ ವಿಚಾರವಾಗಿದೆ. ಈ ಘಟನೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಜೂನ್ 15ರ ಶನಿವಾರದಂದು  ಬೆಂಗಳೂರಿನಲ್ಲಿಯೂ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ವಿದ್ಯಾವಂತ ಯುವಕನಿಗೆ ಈ ಪರಿಸ್ಥಿತಿ ಎದುರಾದರೆ ಇನ್ನು ಓದದ ದಲಿತ ಯುವಕರು, ಹೆಣ್ಣು ಮಕ್ಕಳ ಕಥೆಯೇನು? ಹಾಗಾಗಿ ನಾವು ಈಗಲೇ ಸರ್ಕಾರವನ್ನು ಎಚ್ಚರಿಸಬೇಕಿದೆ. ಹಾಗಾಗಿ ನಮ್ಮ ಸ್ವಾಭಿಮಾನಿ ಉಳಿಸಿಕೊಳ್ಳಲು ದಿಟ್ಟ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ದಲಿಸ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ, ಬಹುಜನ ಸಮಾಜ ಪಕ್ಷದ ಶಂಕರ್, ಜಾಲಪ್ಪ ನಾಯಕ್, ಪ್ರೊ.ಮಹೇಶ್ ಚಂದ್ರ ಗುರು, ಸೋಮಯ್ಯ ಮಲಿಯೂರ್, ಮಾದೇವ ಭರಣಿ, ಕುಮಾರ್ ಸ್ವಾಮಿ, SDPI ನ ಅಜತ್ ಖಾನ್, ದಲಿತ ಬಹುಜನ ಚಳವಳಿಯ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸದ್ದರು. ನೂರಾರು ಜನ ಪ್ರಜ್ಞಾವಂತರು ಭಾಗವಹಿಸಿದ್ದರು.

ಇದನ್ನು ಓದಿ: ಗುಂಡ್ಲುಪೇಟೆಯ ಯುವಕನ ಬೆತ್ತಲೆ ಮೆರವಣಿಗೆ: ಅಮಾನವೀಯ ಘಟನೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...