Homeಸಾಮಾಜಿಕಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

ಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

- Advertisement -
- Advertisement -

ಕಡೆಗೂ ಎಚ್ಚೆತ್ತುಕೊಂಡ ಫೇಸ್‍ಬುಕ್ಕು ಕೆಟ್ಟದೊಂದು ಪುಟಕ್ಕೆ ಫುಲ್‍ಸ್ಟಾಪ್ ಇಟ್ಟಿದೆ. ಅದು `ಪೋಸ್ಟ್‍ಕಾರ್ಡ್’! ಮಹೇಶ್ ವಿಕ್ರಮ್ ಹೆಗ್ಡೆ ಎಂಬ ಆರೆಸ್ಸೆಸ್ ಮಾಣಿ ನಡೆಸುತ್ತಿದ್ದ ಫೇಕ್ ನ್ಯೂಸ್‍ಗಳ ಸುಳ್ಳಿನ ಫ್ಯಾಕ್ಟರಿಯಂತಿದ್ದ ಅದು ಬಿತ್ತರಿಸುತ್ತಿದುದ್ದೆಲ್ಲ ಕೋಮು ಪ್ರಚೋದಕ ಸುಳ್ಳುಗಳನ್ನು. ಸಮಾಜದ ಸ್ವಾಸ್ಥ್ಯ ಕದಡುವ, ಇದೇ ಕಾರಣಕ್ಕೆ ಇತ್ತೀಚೆಗಷ್ಟೇ ಸೈಬರ್ ಕ್ರೈಮ್ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆಯನ್ನು ಅರೆಸ್ಟ್ ಮಾಡಿ ಜೈಲಿಗೂ ಗದುಮಿದ್ದರು. ಈಗ ಎಚ್ಚೆತ್ತುಕೊಂಡಿರುವ ಫೇಸ್‍ಬುಕ್ ಕೋಮುಕ್ರಿಮಿಯಿಂದ ತನಗೆ ಅಂಟಬಹುದಾದ ಕಳಂಕವನ್ನು ತೊಳೆದುಕೊಳ್ಳಲು ಆತನ ಪೋಸ್ಟ್‍ಕಾರ್ಡ್ ನ್ಯೂಸ್ ಫೇಸ್‍ಬುಕ್ ಪೇಜನ್ನು ರದ್ದು ಮಾಡಿ ಮಾನಸ್ಥ ಮನುಷ್ಯರ ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಅಸಲಿಗೆ, ಬಿಜೆಪಿ ಮತ್ತು ಸಂಘ ಪರಿವೆಂದರೇನೆ ಪೇಕ್‍ನ್ಯೂಸ್‍ಗಳ ಪಿತೃಸ್ಥಾನಗಳಂತೆ ಎಂಬ ಆರೋಪವಿದೆ. ಅದನ್ನು ನಿಜ ಮಾಡುವಂತೆಯೇ ಅವರ ವರ್ತನೆಗಳಿರೋದು ದುರಾದೃಷ್ಟ. ರಾಜಕೀಯ ದುರುದ್ದೇಶದಿಂದ ಸೃಷ್ಟಿಸಿ, ಹರಿದಾಡಿಸಲ್ಪಟ್ಟ ಫೇಕ್ ನ್ಯೂಸ್‍ಗಳು ಜನರ ನೆಮ್ಮದಿಯನ್ನೇ ಹಾಳುಗೆಡವುತ್ತಿರೋದು ಈ ಸಂದರ್ಭದ ದುರಂತ. ಕನ್ನಡದ ವಾತಾವರಣದ ಮಟ್ಟಿಗೆ ಅಂತಹ ಸುದ್ದಿಗಳಿಗೆಲ್ಲ ತವರುಮನೆಯಂತಿದ್ದಿದ್ದು ಈ ಪೋಸ್ಟ್‍ಕಾರ್ಡ್ ವೆಬ್‍ಸೈಟು ಮತ್ತದರ ಫೇಸ್‍ಬುಕ್ ಪೇಜು!
ಮಹೇಶ್ ವಿಕ್ರಮ್ ಹೆಗ್ಡೆಯ ಈ ಪೇಜ್‍ನಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ಹಿಂದೂತ್ವದ ಕೋಮುಭಾವನೆ ಬಿತ್ತುವಂತ ಸುದ್ದಿಗಳದ್ದೇ ಕಾರುಬಾರು. ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿದ್ದ ಈತ, ಮಾರ್ಚ್ 18ರಂದು ಆಕ್ಸಿಡೆಂಟ್‍ನಲ್ಲಿ ಮರಣ ಹೊಂದಿದ್ದ ಜೈನ ಸನ್ಯಾಸಿಯನ್ನು ಮುಸ್ಲಿಂ ಯುವಕರು ಕೊಲೆ ಮಾಡಿದ್ದಾರೆಂದು ತನ್ನ ಪೋಸ್ಟ್‍ಕಾರ್ಡ್ ಪೇಜ್‍ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ಸುಳ್ಳನ್ನು ಆಧಾರವಾಗಿಟ್ಟುಕೊಂಡೇ ಮಾರ್ಚ್ 29ರಂದು ಸೈಬರ್ ಕ್ರೈಮ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ 66 ಮತ್ತು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅರೆಸ್ಟ್ ಮಾಡಿ, ಸಿಲವರ್ ತಟ್ಟೆಯಲ್ಲಿ ಜೈಲೂಟ ಬಡಿಸಿದ್ದರು. ಈತನನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಕಂ ಕಾಂಟ್ರವರ್ಸಿ ಕಿಂಗ್ ಅನಂತಕುಮಾರ್ ಹೆಗಡೆಯನ್ನೂ ಒಳಗೊಂಡಂತೆ ಬಿಜೆಪಿಯ ಹಲವಾರು ಲೀಡರುಗಳು ಒಂದು ಕ್ಯಾಂಪೇನನ್ನೇ ನಡೆಸಿದ್ದರು! ಮಹೇಶ್ ವಿಕ್ರಂ ಹೆಗ್ಡೆಯ ಫೇಕ್ ನ್ಯೂಸ್‍ಗಳ ಫಲಾನುಭವಿಗಳು ಯಾರು ಅನ್ನೋದಕ್ಕೆ ಇದೊಂದು Phಥಿsiಛಿಚಿಟ ನಿದರ್ಶನವಷ್ಟೆ. ಅಂದಹಾಗೆ, ಬಿಜೆಪಿ ಸಂಸದ ಪ್ರತಾಪ್ ಸಿಂಗ ಹೆಗ್ಡೆ ಈತನ ಅತ್ಯಾಪ್ತ!
ಹಾಗೆ ನೋಡಿದರೆ, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಭರಪೂರ ಫಸಲು ತಂದುಕೊಡುವಲ್ಲಿ ಇಂಥಾ ಫೇಕ್‍ಸುದ್ದಿ ವೀರರ ಪಾತ್ರವೂ ಇತ್ತೆಂದರೆ ತಪ್ಪಾಗಲಿಕ್ಕಿಲ್ಲ. ಮೋದಿಯ ಸುಳ್ಳು ಪೊಳ್ಳು ಭಾಷಣಗಳನ್ನು ಹೈಲೈಟ್ ಮಾಡಿ, ಫೋಟೋಶಾಪ್‍ನಲ್ಲೇ ಗುಜರಾತ್ ಅಭಿವೃದ್ಧಿಯನ್ನು ಸೃಷ್ಟಿಸಿ ಜನರ ನಡುವೆ ಹರಿಯಬಿಟ್ಟ ಇಂತವರಿಂದಾಗಿಯೇ ಮೋದಿ ಸಲೀಸಾಗಿ ಗದ್ದುಗೆ ಏರಲು ಸಾಧ್ಯವಾದದ್ದು. ಅಂತವರಿಂದ ಪ್ರೇರಣೆ ಪಡೆದೇ ವಿಕ್ರಂ ಹೆಗ್ಡೆ ಪೋಸ್ಟ್‍ಕಾರ್ಡ್‍ಗೆ ಜನ್ಮಕೊಟ್ಟಿದ್ದ. ಹಿಂದೂತ್ವದ, ರಾಷ್ಟ್ರಪ್ರೇಮದ ಹುಸಿ ಸುದ್ದಿಗಳ ಜೊತೆಗೆ ಮುಸ್ಲಿಂ ವಿರೋಧಿ ಒಗ್ಗರಣೆ ಬೆರೆಸಿ ಆತ ಬಿಡುಗಡೆ ಮಾಡುತ್ತಿದ್ದ ಪೋಸ್ಟ್‍ಗಳು ಕೋಮುಗಲಭೆ ಹಬ್ಬಲು ಏನು ಬೇಕೊ ಅದೆಲ್ಲವನ್ನು ಒಳಗೊಂಡಿರುತ್ತಿದ್ದವು. ಅಂತಹ ‘ಪೋಸ್ಟ್‍ಕಾರ್ಡ್ ನ್ಯೂಸ್’ ಫೇಸ್‍ಬುಕ್ ಪೇಜ್‍ನ ವಿರುದ್ಧ ಪ್ರಜ್ಞಾವಂತ ಜನರು ಫೇಸ್‍ಬುಕ್ ಮ್ಯಾನೆಜ್‍ಮೆಂಟ್‍ಗೆ ದೂರುತ್ತಲೇ ಬಂದಿದ್ದರು. ಆದರೆ ಮಾರ್ಕ್ ಜುಗರ್‍ಬರ್ಗ್‍ನ ಫೇಸ್‍ಬುಕ್ಕು ಎಚ್ಚೆತ್ತುಕೊಂಡಿರಲಿಲ್ಲ.
ಯಾವಾಗ ಫೇಕ್‍ಪೇಜ್‍ನ ಪಿತಾಮಹನನ್ನು ಪೊಲೀಸರು ಅರೆಸ್ಟ್ ಮಾಡಿದರೋ ಆಗ ಎಚ್ಚೆತ್ತುಕೊಂಡ ಫೇಸ್‍ಬುಕ್ ಆತನ ವಿರುದ್ಧ ತನಗೆ ಹರಿದುಬಂದ ಬೃಹತ್ ದೂರುಗಳನ್ನು ಮುಂದಿಟ್ಟುಕೊಂಡು ಜುಲೈ 16ರಂದು ಡಿಆಕ್ಟಿವೇಟ್ ಮಾಡಿದೆ. ಪೋಸ್ಟ್ ಕಾರ್ಡು ಇಷ್ಟು ದಿನ ಪ್ರಕಟಿಸಿದ್ದ ಸುದ್ದಿಗಳಲ್ಲಿ ಶೇ. 96ರಷ್ಟು ಸುದ್ದಿಗಳು ಮುಸ್ಲಿಂ ವಿರೋಧಿಯಾಗಿದ್ದವೆನ್ನುವುದು ವಿಕ್ರಂ ಹೆಗ್ಡೆಯ ಉದ್ದೇಶವನ್ನು ಬಿಚ್ಚಿಡುತ್ತದೆ.
ಈ ಕೇಸರಿ ಮಂದಿ ಅದೆಷ್ಟು ದೂ(ದು)ರಾಲೋಚನೆ ಹೊಂದಿರುತ್ತಾರೆಂದರೆ, ಮಾರ್ಚ್‍ನಲ್ಲಿ ವಿಕ್ರಂ ಹೆಗ್ಡೆ ಅರೆಸ್ಟಾಗುತ್ತಿದ್ದಂತೆಯೇ, ಸದ್ಯದಲ್ಲೇ ತಮ್ಮ ಫೇಸ್‍ಬುಕ್ ಪೇಜ್ ಕೂಡಾ ರದ್ದಾಗಬಹುದೆನ್ನುವುದನ್ನು ಅಂದಾಜಿಸಿ, ಏಪ್ರಿಲ್‍ನಲ್ಲಿ ಅದೇ ಹೆಸರಿನಲ್ಲಿ ಮತ್ತೊಂದು ಇಂಗ್ಲಿಷ್ ಭಾಷೆಯ ಪೇಜ್ ಓಪನ್ ಮಾಡಿದ್ದರು. ಪೋಸ್ಟ್‍ಕಾರ್ಡ್ ಇಂಗ್ಲಿಷ್ ನ್ಯೂಸ್ ಎಂಬ ಹೆಸರಿನ ಆ ಪುಟ ಕನ್ನಡ ಪೋಸ್ಟ್‍ಕಾರ್ಡ್ ಪುಟದ ವಿನ್ಯಾಸ, ಲೋಗೊಗಳನ್ನೇ ಹೊಂದಿದೆ. ಇತ್ತ ಫೇಸ್‍ಬುಕ್, ಕನ್ನಡದ ಪೋಸ್ಟ್ ಕಾರ್ಡ್ ರದ್ದು ಮಾಡುತ್ತಿದ್ದಂತೆಯೇ, ಇಂಗ್ಲಿಷ್ ಪುಟದ ಲಿಂಕನ್ನು ಮುಂಚೂಣಿಗೆ ತಂದು, ತಮ್ಮ ಪುಟವನ್ನು ಫೇಸ್‍ಬುಕ್ ರದ್ದು ಮಾಡಿಲ್ಲ, ಇದೆಲ್ಲಾ ಸುಳ್ಳು ಸುದ್ದಿ ಎಂದು ಜನರನ್ನು ಯಾಮಾರಿಸಲು ಯತ್ನಿಸಿತ್ತು. ಆದರೆ ಅಧಿಕೃತ ಮೂಲಗಳೇ ಫೇಸ್‍ಬುಕ್ ನಿರ್ಣಯವನ್ನು ಖಾತ್ರಿಪಡಿಸಿದ ತರುವಾಯ ಇದೀಗ ಅವರ ಬಣ್ಣ ಬಯಲಾಗಿದೆ. ಆದರೇನಂತೆ ಇಂಗ್ಲಿಷ್ ಪುಟದಲ್ಲಿ ಯಥಾ ಪ್ರಕಾರ ತಮ್ಮ ಕೋಮುವಾಂತಿಯನ್ನು ಮುಂದುವರಿಸಿದ್ದಾರೆ. ಫೇಸ್‍ಪುಸ್ತಕ ಅದಕ್ಕೆ ಯಾವಾಗ ಒಂದು ಗತಿ ಕಾಣಿಸುತ್ತೋ ನೋಡಬೇಕು.

-ಸೋಮಶೇಖರ್ ಚೆಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...