Homeಸಾಮಾಜಿಕಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

ಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

- Advertisement -
- Advertisement -

ಕಡೆಗೂ ಎಚ್ಚೆತ್ತುಕೊಂಡ ಫೇಸ್‍ಬುಕ್ಕು ಕೆಟ್ಟದೊಂದು ಪುಟಕ್ಕೆ ಫುಲ್‍ಸ್ಟಾಪ್ ಇಟ್ಟಿದೆ. ಅದು `ಪೋಸ್ಟ್‍ಕಾರ್ಡ್’! ಮಹೇಶ್ ವಿಕ್ರಮ್ ಹೆಗ್ಡೆ ಎಂಬ ಆರೆಸ್ಸೆಸ್ ಮಾಣಿ ನಡೆಸುತ್ತಿದ್ದ ಫೇಕ್ ನ್ಯೂಸ್‍ಗಳ ಸುಳ್ಳಿನ ಫ್ಯಾಕ್ಟರಿಯಂತಿದ್ದ ಅದು ಬಿತ್ತರಿಸುತ್ತಿದುದ್ದೆಲ್ಲ ಕೋಮು ಪ್ರಚೋದಕ ಸುಳ್ಳುಗಳನ್ನು. ಸಮಾಜದ ಸ್ವಾಸ್ಥ್ಯ ಕದಡುವ, ಇದೇ ಕಾರಣಕ್ಕೆ ಇತ್ತೀಚೆಗಷ್ಟೇ ಸೈಬರ್ ಕ್ರೈಮ್ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆಯನ್ನು ಅರೆಸ್ಟ್ ಮಾಡಿ ಜೈಲಿಗೂ ಗದುಮಿದ್ದರು. ಈಗ ಎಚ್ಚೆತ್ತುಕೊಂಡಿರುವ ಫೇಸ್‍ಬುಕ್ ಕೋಮುಕ್ರಿಮಿಯಿಂದ ತನಗೆ ಅಂಟಬಹುದಾದ ಕಳಂಕವನ್ನು ತೊಳೆದುಕೊಳ್ಳಲು ಆತನ ಪೋಸ್ಟ್‍ಕಾರ್ಡ್ ನ್ಯೂಸ್ ಫೇಸ್‍ಬುಕ್ ಪೇಜನ್ನು ರದ್ದು ಮಾಡಿ ಮಾನಸ್ಥ ಮನುಷ್ಯರ ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಅಸಲಿಗೆ, ಬಿಜೆಪಿ ಮತ್ತು ಸಂಘ ಪರಿವೆಂದರೇನೆ ಪೇಕ್‍ನ್ಯೂಸ್‍ಗಳ ಪಿತೃಸ್ಥಾನಗಳಂತೆ ಎಂಬ ಆರೋಪವಿದೆ. ಅದನ್ನು ನಿಜ ಮಾಡುವಂತೆಯೇ ಅವರ ವರ್ತನೆಗಳಿರೋದು ದುರಾದೃಷ್ಟ. ರಾಜಕೀಯ ದುರುದ್ದೇಶದಿಂದ ಸೃಷ್ಟಿಸಿ, ಹರಿದಾಡಿಸಲ್ಪಟ್ಟ ಫೇಕ್ ನ್ಯೂಸ್‍ಗಳು ಜನರ ನೆಮ್ಮದಿಯನ್ನೇ ಹಾಳುಗೆಡವುತ್ತಿರೋದು ಈ ಸಂದರ್ಭದ ದುರಂತ. ಕನ್ನಡದ ವಾತಾವರಣದ ಮಟ್ಟಿಗೆ ಅಂತಹ ಸುದ್ದಿಗಳಿಗೆಲ್ಲ ತವರುಮನೆಯಂತಿದ್ದಿದ್ದು ಈ ಪೋಸ್ಟ್‍ಕಾರ್ಡ್ ವೆಬ್‍ಸೈಟು ಮತ್ತದರ ಫೇಸ್‍ಬುಕ್ ಪೇಜು!
ಮಹೇಶ್ ವಿಕ್ರಮ್ ಹೆಗ್ಡೆಯ ಈ ಪೇಜ್‍ನಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ಹಿಂದೂತ್ವದ ಕೋಮುಭಾವನೆ ಬಿತ್ತುವಂತ ಸುದ್ದಿಗಳದ್ದೇ ಕಾರುಬಾರು. ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿದ್ದ ಈತ, ಮಾರ್ಚ್ 18ರಂದು ಆಕ್ಸಿಡೆಂಟ್‍ನಲ್ಲಿ ಮರಣ ಹೊಂದಿದ್ದ ಜೈನ ಸನ್ಯಾಸಿಯನ್ನು ಮುಸ್ಲಿಂ ಯುವಕರು ಕೊಲೆ ಮಾಡಿದ್ದಾರೆಂದು ತನ್ನ ಪೋಸ್ಟ್‍ಕಾರ್ಡ್ ಪೇಜ್‍ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ಸುಳ್ಳನ್ನು ಆಧಾರವಾಗಿಟ್ಟುಕೊಂಡೇ ಮಾರ್ಚ್ 29ರಂದು ಸೈಬರ್ ಕ್ರೈಮ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ 66 ಮತ್ತು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅರೆಸ್ಟ್ ಮಾಡಿ, ಸಿಲವರ್ ತಟ್ಟೆಯಲ್ಲಿ ಜೈಲೂಟ ಬಡಿಸಿದ್ದರು. ಈತನನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಕಂ ಕಾಂಟ್ರವರ್ಸಿ ಕಿಂಗ್ ಅನಂತಕುಮಾರ್ ಹೆಗಡೆಯನ್ನೂ ಒಳಗೊಂಡಂತೆ ಬಿಜೆಪಿಯ ಹಲವಾರು ಲೀಡರುಗಳು ಒಂದು ಕ್ಯಾಂಪೇನನ್ನೇ ನಡೆಸಿದ್ದರು! ಮಹೇಶ್ ವಿಕ್ರಂ ಹೆಗ್ಡೆಯ ಫೇಕ್ ನ್ಯೂಸ್‍ಗಳ ಫಲಾನುಭವಿಗಳು ಯಾರು ಅನ್ನೋದಕ್ಕೆ ಇದೊಂದು Phಥಿsiಛಿಚಿಟ ನಿದರ್ಶನವಷ್ಟೆ. ಅಂದಹಾಗೆ, ಬಿಜೆಪಿ ಸಂಸದ ಪ್ರತಾಪ್ ಸಿಂಗ ಹೆಗ್ಡೆ ಈತನ ಅತ್ಯಾಪ್ತ!
ಹಾಗೆ ನೋಡಿದರೆ, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಭರಪೂರ ಫಸಲು ತಂದುಕೊಡುವಲ್ಲಿ ಇಂಥಾ ಫೇಕ್‍ಸುದ್ದಿ ವೀರರ ಪಾತ್ರವೂ ಇತ್ತೆಂದರೆ ತಪ್ಪಾಗಲಿಕ್ಕಿಲ್ಲ. ಮೋದಿಯ ಸುಳ್ಳು ಪೊಳ್ಳು ಭಾಷಣಗಳನ್ನು ಹೈಲೈಟ್ ಮಾಡಿ, ಫೋಟೋಶಾಪ್‍ನಲ್ಲೇ ಗುಜರಾತ್ ಅಭಿವೃದ್ಧಿಯನ್ನು ಸೃಷ್ಟಿಸಿ ಜನರ ನಡುವೆ ಹರಿಯಬಿಟ್ಟ ಇಂತವರಿಂದಾಗಿಯೇ ಮೋದಿ ಸಲೀಸಾಗಿ ಗದ್ದುಗೆ ಏರಲು ಸಾಧ್ಯವಾದದ್ದು. ಅಂತವರಿಂದ ಪ್ರೇರಣೆ ಪಡೆದೇ ವಿಕ್ರಂ ಹೆಗ್ಡೆ ಪೋಸ್ಟ್‍ಕಾರ್ಡ್‍ಗೆ ಜನ್ಮಕೊಟ್ಟಿದ್ದ. ಹಿಂದೂತ್ವದ, ರಾಷ್ಟ್ರಪ್ರೇಮದ ಹುಸಿ ಸುದ್ದಿಗಳ ಜೊತೆಗೆ ಮುಸ್ಲಿಂ ವಿರೋಧಿ ಒಗ್ಗರಣೆ ಬೆರೆಸಿ ಆತ ಬಿಡುಗಡೆ ಮಾಡುತ್ತಿದ್ದ ಪೋಸ್ಟ್‍ಗಳು ಕೋಮುಗಲಭೆ ಹಬ್ಬಲು ಏನು ಬೇಕೊ ಅದೆಲ್ಲವನ್ನು ಒಳಗೊಂಡಿರುತ್ತಿದ್ದವು. ಅಂತಹ ‘ಪೋಸ್ಟ್‍ಕಾರ್ಡ್ ನ್ಯೂಸ್’ ಫೇಸ್‍ಬುಕ್ ಪೇಜ್‍ನ ವಿರುದ್ಧ ಪ್ರಜ್ಞಾವಂತ ಜನರು ಫೇಸ್‍ಬುಕ್ ಮ್ಯಾನೆಜ್‍ಮೆಂಟ್‍ಗೆ ದೂರುತ್ತಲೇ ಬಂದಿದ್ದರು. ಆದರೆ ಮಾರ್ಕ್ ಜುಗರ್‍ಬರ್ಗ್‍ನ ಫೇಸ್‍ಬುಕ್ಕು ಎಚ್ಚೆತ್ತುಕೊಂಡಿರಲಿಲ್ಲ.
ಯಾವಾಗ ಫೇಕ್‍ಪೇಜ್‍ನ ಪಿತಾಮಹನನ್ನು ಪೊಲೀಸರು ಅರೆಸ್ಟ್ ಮಾಡಿದರೋ ಆಗ ಎಚ್ಚೆತ್ತುಕೊಂಡ ಫೇಸ್‍ಬುಕ್ ಆತನ ವಿರುದ್ಧ ತನಗೆ ಹರಿದುಬಂದ ಬೃಹತ್ ದೂರುಗಳನ್ನು ಮುಂದಿಟ್ಟುಕೊಂಡು ಜುಲೈ 16ರಂದು ಡಿಆಕ್ಟಿವೇಟ್ ಮಾಡಿದೆ. ಪೋಸ್ಟ್ ಕಾರ್ಡು ಇಷ್ಟು ದಿನ ಪ್ರಕಟಿಸಿದ್ದ ಸುದ್ದಿಗಳಲ್ಲಿ ಶೇ. 96ರಷ್ಟು ಸುದ್ದಿಗಳು ಮುಸ್ಲಿಂ ವಿರೋಧಿಯಾಗಿದ್ದವೆನ್ನುವುದು ವಿಕ್ರಂ ಹೆಗ್ಡೆಯ ಉದ್ದೇಶವನ್ನು ಬಿಚ್ಚಿಡುತ್ತದೆ.
ಈ ಕೇಸರಿ ಮಂದಿ ಅದೆಷ್ಟು ದೂ(ದು)ರಾಲೋಚನೆ ಹೊಂದಿರುತ್ತಾರೆಂದರೆ, ಮಾರ್ಚ್‍ನಲ್ಲಿ ವಿಕ್ರಂ ಹೆಗ್ಡೆ ಅರೆಸ್ಟಾಗುತ್ತಿದ್ದಂತೆಯೇ, ಸದ್ಯದಲ್ಲೇ ತಮ್ಮ ಫೇಸ್‍ಬುಕ್ ಪೇಜ್ ಕೂಡಾ ರದ್ದಾಗಬಹುದೆನ್ನುವುದನ್ನು ಅಂದಾಜಿಸಿ, ಏಪ್ರಿಲ್‍ನಲ್ಲಿ ಅದೇ ಹೆಸರಿನಲ್ಲಿ ಮತ್ತೊಂದು ಇಂಗ್ಲಿಷ್ ಭಾಷೆಯ ಪೇಜ್ ಓಪನ್ ಮಾಡಿದ್ದರು. ಪೋಸ್ಟ್‍ಕಾರ್ಡ್ ಇಂಗ್ಲಿಷ್ ನ್ಯೂಸ್ ಎಂಬ ಹೆಸರಿನ ಆ ಪುಟ ಕನ್ನಡ ಪೋಸ್ಟ್‍ಕಾರ್ಡ್ ಪುಟದ ವಿನ್ಯಾಸ, ಲೋಗೊಗಳನ್ನೇ ಹೊಂದಿದೆ. ಇತ್ತ ಫೇಸ್‍ಬುಕ್, ಕನ್ನಡದ ಪೋಸ್ಟ್ ಕಾರ್ಡ್ ರದ್ದು ಮಾಡುತ್ತಿದ್ದಂತೆಯೇ, ಇಂಗ್ಲಿಷ್ ಪುಟದ ಲಿಂಕನ್ನು ಮುಂಚೂಣಿಗೆ ತಂದು, ತಮ್ಮ ಪುಟವನ್ನು ಫೇಸ್‍ಬುಕ್ ರದ್ದು ಮಾಡಿಲ್ಲ, ಇದೆಲ್ಲಾ ಸುಳ್ಳು ಸುದ್ದಿ ಎಂದು ಜನರನ್ನು ಯಾಮಾರಿಸಲು ಯತ್ನಿಸಿತ್ತು. ಆದರೆ ಅಧಿಕೃತ ಮೂಲಗಳೇ ಫೇಸ್‍ಬುಕ್ ನಿರ್ಣಯವನ್ನು ಖಾತ್ರಿಪಡಿಸಿದ ತರುವಾಯ ಇದೀಗ ಅವರ ಬಣ್ಣ ಬಯಲಾಗಿದೆ. ಆದರೇನಂತೆ ಇಂಗ್ಲಿಷ್ ಪುಟದಲ್ಲಿ ಯಥಾ ಪ್ರಕಾರ ತಮ್ಮ ಕೋಮುವಾಂತಿಯನ್ನು ಮುಂದುವರಿಸಿದ್ದಾರೆ. ಫೇಸ್‍ಪುಸ್ತಕ ಅದಕ್ಕೆ ಯಾವಾಗ ಒಂದು ಗತಿ ಕಾಣಿಸುತ್ತೋ ನೋಡಬೇಕು.

-ಸೋಮಶೇಖರ್ ಚೆಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...