Homeಸಾಮಾಜಿಕಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

ಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

- Advertisement -
- Advertisement -

ಕಡೆಗೂ ಎಚ್ಚೆತ್ತುಕೊಂಡ ಫೇಸ್‍ಬುಕ್ಕು ಕೆಟ್ಟದೊಂದು ಪುಟಕ್ಕೆ ಫುಲ್‍ಸ್ಟಾಪ್ ಇಟ್ಟಿದೆ. ಅದು `ಪೋಸ್ಟ್‍ಕಾರ್ಡ್’! ಮಹೇಶ್ ವಿಕ್ರಮ್ ಹೆಗ್ಡೆ ಎಂಬ ಆರೆಸ್ಸೆಸ್ ಮಾಣಿ ನಡೆಸುತ್ತಿದ್ದ ಫೇಕ್ ನ್ಯೂಸ್‍ಗಳ ಸುಳ್ಳಿನ ಫ್ಯಾಕ್ಟರಿಯಂತಿದ್ದ ಅದು ಬಿತ್ತರಿಸುತ್ತಿದುದ್ದೆಲ್ಲ ಕೋಮು ಪ್ರಚೋದಕ ಸುಳ್ಳುಗಳನ್ನು. ಸಮಾಜದ ಸ್ವಾಸ್ಥ್ಯ ಕದಡುವ, ಇದೇ ಕಾರಣಕ್ಕೆ ಇತ್ತೀಚೆಗಷ್ಟೇ ಸೈಬರ್ ಕ್ರೈಮ್ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆಯನ್ನು ಅರೆಸ್ಟ್ ಮಾಡಿ ಜೈಲಿಗೂ ಗದುಮಿದ್ದರು. ಈಗ ಎಚ್ಚೆತ್ತುಕೊಂಡಿರುವ ಫೇಸ್‍ಬುಕ್ ಕೋಮುಕ್ರಿಮಿಯಿಂದ ತನಗೆ ಅಂಟಬಹುದಾದ ಕಳಂಕವನ್ನು ತೊಳೆದುಕೊಳ್ಳಲು ಆತನ ಪೋಸ್ಟ್‍ಕಾರ್ಡ್ ನ್ಯೂಸ್ ಫೇಸ್‍ಬುಕ್ ಪೇಜನ್ನು ರದ್ದು ಮಾಡಿ ಮಾನಸ್ಥ ಮನುಷ್ಯರ ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಅಸಲಿಗೆ, ಬಿಜೆಪಿ ಮತ್ತು ಸಂಘ ಪರಿವೆಂದರೇನೆ ಪೇಕ್‍ನ್ಯೂಸ್‍ಗಳ ಪಿತೃಸ್ಥಾನಗಳಂತೆ ಎಂಬ ಆರೋಪವಿದೆ. ಅದನ್ನು ನಿಜ ಮಾಡುವಂತೆಯೇ ಅವರ ವರ್ತನೆಗಳಿರೋದು ದುರಾದೃಷ್ಟ. ರಾಜಕೀಯ ದುರುದ್ದೇಶದಿಂದ ಸೃಷ್ಟಿಸಿ, ಹರಿದಾಡಿಸಲ್ಪಟ್ಟ ಫೇಕ್ ನ್ಯೂಸ್‍ಗಳು ಜನರ ನೆಮ್ಮದಿಯನ್ನೇ ಹಾಳುಗೆಡವುತ್ತಿರೋದು ಈ ಸಂದರ್ಭದ ದುರಂತ. ಕನ್ನಡದ ವಾತಾವರಣದ ಮಟ್ಟಿಗೆ ಅಂತಹ ಸುದ್ದಿಗಳಿಗೆಲ್ಲ ತವರುಮನೆಯಂತಿದ್ದಿದ್ದು ಈ ಪೋಸ್ಟ್‍ಕಾರ್ಡ್ ವೆಬ್‍ಸೈಟು ಮತ್ತದರ ಫೇಸ್‍ಬುಕ್ ಪೇಜು!
ಮಹೇಶ್ ವಿಕ್ರಮ್ ಹೆಗ್ಡೆಯ ಈ ಪೇಜ್‍ನಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ಹಿಂದೂತ್ವದ ಕೋಮುಭಾವನೆ ಬಿತ್ತುವಂತ ಸುದ್ದಿಗಳದ್ದೇ ಕಾರುಬಾರು. ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿದ್ದ ಈತ, ಮಾರ್ಚ್ 18ರಂದು ಆಕ್ಸಿಡೆಂಟ್‍ನಲ್ಲಿ ಮರಣ ಹೊಂದಿದ್ದ ಜೈನ ಸನ್ಯಾಸಿಯನ್ನು ಮುಸ್ಲಿಂ ಯುವಕರು ಕೊಲೆ ಮಾಡಿದ್ದಾರೆಂದು ತನ್ನ ಪೋಸ್ಟ್‍ಕಾರ್ಡ್ ಪೇಜ್‍ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ಸುಳ್ಳನ್ನು ಆಧಾರವಾಗಿಟ್ಟುಕೊಂಡೇ ಮಾರ್ಚ್ 29ರಂದು ಸೈಬರ್ ಕ್ರೈಮ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ 66 ಮತ್ತು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅರೆಸ್ಟ್ ಮಾಡಿ, ಸಿಲವರ್ ತಟ್ಟೆಯಲ್ಲಿ ಜೈಲೂಟ ಬಡಿಸಿದ್ದರು. ಈತನನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಕಂ ಕಾಂಟ್ರವರ್ಸಿ ಕಿಂಗ್ ಅನಂತಕುಮಾರ್ ಹೆಗಡೆಯನ್ನೂ ಒಳಗೊಂಡಂತೆ ಬಿಜೆಪಿಯ ಹಲವಾರು ಲೀಡರುಗಳು ಒಂದು ಕ್ಯಾಂಪೇನನ್ನೇ ನಡೆಸಿದ್ದರು! ಮಹೇಶ್ ವಿಕ್ರಂ ಹೆಗ್ಡೆಯ ಫೇಕ್ ನ್ಯೂಸ್‍ಗಳ ಫಲಾನುಭವಿಗಳು ಯಾರು ಅನ್ನೋದಕ್ಕೆ ಇದೊಂದು Phಥಿsiಛಿಚಿಟ ನಿದರ್ಶನವಷ್ಟೆ. ಅಂದಹಾಗೆ, ಬಿಜೆಪಿ ಸಂಸದ ಪ್ರತಾಪ್ ಸಿಂಗ ಹೆಗ್ಡೆ ಈತನ ಅತ್ಯಾಪ್ತ!
ಹಾಗೆ ನೋಡಿದರೆ, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಭರಪೂರ ಫಸಲು ತಂದುಕೊಡುವಲ್ಲಿ ಇಂಥಾ ಫೇಕ್‍ಸುದ್ದಿ ವೀರರ ಪಾತ್ರವೂ ಇತ್ತೆಂದರೆ ತಪ್ಪಾಗಲಿಕ್ಕಿಲ್ಲ. ಮೋದಿಯ ಸುಳ್ಳು ಪೊಳ್ಳು ಭಾಷಣಗಳನ್ನು ಹೈಲೈಟ್ ಮಾಡಿ, ಫೋಟೋಶಾಪ್‍ನಲ್ಲೇ ಗುಜರಾತ್ ಅಭಿವೃದ್ಧಿಯನ್ನು ಸೃಷ್ಟಿಸಿ ಜನರ ನಡುವೆ ಹರಿಯಬಿಟ್ಟ ಇಂತವರಿಂದಾಗಿಯೇ ಮೋದಿ ಸಲೀಸಾಗಿ ಗದ್ದುಗೆ ಏರಲು ಸಾಧ್ಯವಾದದ್ದು. ಅಂತವರಿಂದ ಪ್ರೇರಣೆ ಪಡೆದೇ ವಿಕ್ರಂ ಹೆಗ್ಡೆ ಪೋಸ್ಟ್‍ಕಾರ್ಡ್‍ಗೆ ಜನ್ಮಕೊಟ್ಟಿದ್ದ. ಹಿಂದೂತ್ವದ, ರಾಷ್ಟ್ರಪ್ರೇಮದ ಹುಸಿ ಸುದ್ದಿಗಳ ಜೊತೆಗೆ ಮುಸ್ಲಿಂ ವಿರೋಧಿ ಒಗ್ಗರಣೆ ಬೆರೆಸಿ ಆತ ಬಿಡುಗಡೆ ಮಾಡುತ್ತಿದ್ದ ಪೋಸ್ಟ್‍ಗಳು ಕೋಮುಗಲಭೆ ಹಬ್ಬಲು ಏನು ಬೇಕೊ ಅದೆಲ್ಲವನ್ನು ಒಳಗೊಂಡಿರುತ್ತಿದ್ದವು. ಅಂತಹ ‘ಪೋಸ್ಟ್‍ಕಾರ್ಡ್ ನ್ಯೂಸ್’ ಫೇಸ್‍ಬುಕ್ ಪೇಜ್‍ನ ವಿರುದ್ಧ ಪ್ರಜ್ಞಾವಂತ ಜನರು ಫೇಸ್‍ಬುಕ್ ಮ್ಯಾನೆಜ್‍ಮೆಂಟ್‍ಗೆ ದೂರುತ್ತಲೇ ಬಂದಿದ್ದರು. ಆದರೆ ಮಾರ್ಕ್ ಜುಗರ್‍ಬರ್ಗ್‍ನ ಫೇಸ್‍ಬುಕ್ಕು ಎಚ್ಚೆತ್ತುಕೊಂಡಿರಲಿಲ್ಲ.
ಯಾವಾಗ ಫೇಕ್‍ಪೇಜ್‍ನ ಪಿತಾಮಹನನ್ನು ಪೊಲೀಸರು ಅರೆಸ್ಟ್ ಮಾಡಿದರೋ ಆಗ ಎಚ್ಚೆತ್ತುಕೊಂಡ ಫೇಸ್‍ಬುಕ್ ಆತನ ವಿರುದ್ಧ ತನಗೆ ಹರಿದುಬಂದ ಬೃಹತ್ ದೂರುಗಳನ್ನು ಮುಂದಿಟ್ಟುಕೊಂಡು ಜುಲೈ 16ರಂದು ಡಿಆಕ್ಟಿವೇಟ್ ಮಾಡಿದೆ. ಪೋಸ್ಟ್ ಕಾರ್ಡು ಇಷ್ಟು ದಿನ ಪ್ರಕಟಿಸಿದ್ದ ಸುದ್ದಿಗಳಲ್ಲಿ ಶೇ. 96ರಷ್ಟು ಸುದ್ದಿಗಳು ಮುಸ್ಲಿಂ ವಿರೋಧಿಯಾಗಿದ್ದವೆನ್ನುವುದು ವಿಕ್ರಂ ಹೆಗ್ಡೆಯ ಉದ್ದೇಶವನ್ನು ಬಿಚ್ಚಿಡುತ್ತದೆ.
ಈ ಕೇಸರಿ ಮಂದಿ ಅದೆಷ್ಟು ದೂ(ದು)ರಾಲೋಚನೆ ಹೊಂದಿರುತ್ತಾರೆಂದರೆ, ಮಾರ್ಚ್‍ನಲ್ಲಿ ವಿಕ್ರಂ ಹೆಗ್ಡೆ ಅರೆಸ್ಟಾಗುತ್ತಿದ್ದಂತೆಯೇ, ಸದ್ಯದಲ್ಲೇ ತಮ್ಮ ಫೇಸ್‍ಬುಕ್ ಪೇಜ್ ಕೂಡಾ ರದ್ದಾಗಬಹುದೆನ್ನುವುದನ್ನು ಅಂದಾಜಿಸಿ, ಏಪ್ರಿಲ್‍ನಲ್ಲಿ ಅದೇ ಹೆಸರಿನಲ್ಲಿ ಮತ್ತೊಂದು ಇಂಗ್ಲಿಷ್ ಭಾಷೆಯ ಪೇಜ್ ಓಪನ್ ಮಾಡಿದ್ದರು. ಪೋಸ್ಟ್‍ಕಾರ್ಡ್ ಇಂಗ್ಲಿಷ್ ನ್ಯೂಸ್ ಎಂಬ ಹೆಸರಿನ ಆ ಪುಟ ಕನ್ನಡ ಪೋಸ್ಟ್‍ಕಾರ್ಡ್ ಪುಟದ ವಿನ್ಯಾಸ, ಲೋಗೊಗಳನ್ನೇ ಹೊಂದಿದೆ. ಇತ್ತ ಫೇಸ್‍ಬುಕ್, ಕನ್ನಡದ ಪೋಸ್ಟ್ ಕಾರ್ಡ್ ರದ್ದು ಮಾಡುತ್ತಿದ್ದಂತೆಯೇ, ಇಂಗ್ಲಿಷ್ ಪುಟದ ಲಿಂಕನ್ನು ಮುಂಚೂಣಿಗೆ ತಂದು, ತಮ್ಮ ಪುಟವನ್ನು ಫೇಸ್‍ಬುಕ್ ರದ್ದು ಮಾಡಿಲ್ಲ, ಇದೆಲ್ಲಾ ಸುಳ್ಳು ಸುದ್ದಿ ಎಂದು ಜನರನ್ನು ಯಾಮಾರಿಸಲು ಯತ್ನಿಸಿತ್ತು. ಆದರೆ ಅಧಿಕೃತ ಮೂಲಗಳೇ ಫೇಸ್‍ಬುಕ್ ನಿರ್ಣಯವನ್ನು ಖಾತ್ರಿಪಡಿಸಿದ ತರುವಾಯ ಇದೀಗ ಅವರ ಬಣ್ಣ ಬಯಲಾಗಿದೆ. ಆದರೇನಂತೆ ಇಂಗ್ಲಿಷ್ ಪುಟದಲ್ಲಿ ಯಥಾ ಪ್ರಕಾರ ತಮ್ಮ ಕೋಮುವಾಂತಿಯನ್ನು ಮುಂದುವರಿಸಿದ್ದಾರೆ. ಫೇಸ್‍ಪುಸ್ತಕ ಅದಕ್ಕೆ ಯಾವಾಗ ಒಂದು ಗತಿ ಕಾಣಿಸುತ್ತೋ ನೋಡಬೇಕು.

-ಸೋಮಶೇಖರ್ ಚೆಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...