Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...