Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...