Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...