HomeUncategorizedಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

- Advertisement -
- Advertisement -

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ದತೆ ನಡೆಸುತ್ತಿರುವಾಗಲೇ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೆಲವು ಹರಕುಬಾಯಿಯ, ಕೊಳಕು ಮಾತುಗಳ ಸರದಾರರನ್ನು
ಸದ್ದಿಲ್ಲದೆ ಕೈಬಿಡಲಾಗಿದೆ. ಜನರನ್ನು ಪ್ರಚೋದಿಸುವುದು ಮತ್ತು ದ್ವಂದ್ವಾರ್ಥದ ಡೈಲಾಗ್ ಹೇಳಿ ಜನರನ್ನು ನಗಿಸುತ್ತಾ ತಾನು ನಗೆಪಾಟಲಿಗೆ ಒಳಗಾಗುತ್ತಿದ್ದ ವ್ಯಕ್ತಿಗಳನ್ನು ಪ್ರಚಾರಸಭೆಗಳಿಂದ ಕೈಬಿಟ್ಟು ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೊರಟಿದೆ.

ಹೌದು, ಸಂಸದ ಅನಂತಕುಮಾರ್ ಹೆಗಡೆ ಬಾಯಿ ಬಿಟ್ಟರೆ ಸಾಕು ಬರೀ ದ್ವೇಷದ ಬೆಂಕಿಯನ್ನೇ ಉಗುಳುತ್ತಿದ್ದ ವ್ಯಕ್ತಿ. ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲೀಮರು ಮತ್ತು ದಲಿತರು, ಬಿಜೆಪಿಯೇತರ ಯಾವುದೇ  ಮುಖಂಡರಾಗಲಿ ಅವರ ವಿರುದ್ದ  ಕೆಂಡ ಕಾರುತ್ತಿದ್ದರು.

ಕರಾವಳಿಯವರನ್ನು ಬಿಟ್ಟರೆ ಬೇರೆ ಯಾರಿಗೂ ಕನ್ನಡ ಮಾತನಾಡುವುದೇ ಬರುವುದಿಲ್ಲ ಎಂದು ಹೇಳಿ ಭಾರೀ ಪ್ರಚಾರ ಪಡೆದಿದ್ದರು. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಮೇಲೆ ಹಲ್ಲೆಯೂ ನಡೆಸಿದ್ದರು. ಸಂವಿಧಾನವನ್ನು ಬದಲಾಯಿಸಲೆಂದೇ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಮತ್ತು ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇಂತಹ ಪ್ರಚೋದನಾತ್ಮಕ ಮಾತುಗಳಿಂದಲೇ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಬಿಜೆಪಿ ಅದ್ಯಾಕೋ ಅನಂತ ಎಂದರೆ ಅನಂತ ದೂರ ಎಂಬಂತೆ ದೂರದೂರ ಸರಿದಿದೆ.

ಯಾವಾಗಲೇ ಚುನಾವಣೆ ನಡೆಯಲಿ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇರುತ್ತಿತ್ತು. ಆದರೆ ಬಿಜೆಪಿಗೆ ಜ್ಞಾನೋದಯವಾಗಿದೆಯೋ ಅಥವಾ ಬೇಕೆಂದೇ ಅನಂತ ಹೆಗಡೆ ಹೆಸರು ಬಿಟ್ಟಿದೆಯೋ ಗೊತ್ತಿಲ್ಲ. ಆದರೆ ಅವರ ಹೆಸರನ್ನು ಮೆಲ್ಲಗೆ ಇಲ್ಲದಂತೆ ಮಾಡಿದೆ. ಪ್ರಚೋದನೆಯ ಹೇಳಿಕೆಗಳು ಲಾಭವನ್ನು ತಂದುಕೊಡುವುದಿಲ್ಲ ಎಂಬ ಭಾವನೆ ಬಿಜೆಪಿಯಲ್ಲಿ ಬಂದಿದೆಯೋ ಎನ್ನುವ ಅನುಮಾನ ಕಾಡುತ್ತದೆ.

ತಾನು ಹೀಗೆ ಮಾತನಾಡಿದರೆ ಪ್ರಚಾರ ಪಡೆದುಕೊಳ್ಳಬಹುದು ಎಂದುಕೊಂಡಿದ್ದ ಅನಂತಕುಮಾರ್ ಹೆಗಡೆ ಇದೀಗ ಬಾಯಿ ಒಲಿದುಕೊಂಡು ಕೂರುವಂತೆ ಮಾಡಿದೆ ಬಿಜೆಪಿ. ಸಚಿವ ಸ್ಥಾನವೂ ಇಲ್ಲದೆ, ಪ್ರಚಾರ ಸಭೆಗಳಲ್ಲೂ ಭಾಗವಹಿಸದೇ ಅನಂತ ಇರಬೇಕಾಗಿದೆ. ಅಂದರೆ ಇಂತಹ ಹರಕುಬಾಯಿಯಿಂದ ಪಕ್ಷಕ್ಕೆ ಮತಗಳು ಬರುವುದಿಲ್ಲ. ಇವರನ್ನು ಪ್ರಚಾರಕ್ಕೆ ಕರೆದು ತಂದರೆ ಬರುವ ಮತಗಳು ಹೋಗುತ್ತವೆ. ಅವರೇನಿದ್ದರೂ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತ ಎಂಬ ತೀರ್ಮಾನಕ್ಕೆ ಬಿಜೆಪಿ ಬಂದಂತಿದೆ.

ಇನ್ನೊಂದು ಕಡೆ ಸಿನಿಮಾ ನಟ ಜಗ್ಗೇಶ್ ಅವರ ಹೆಸರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತುರುವೇಕೆರೆ ಜಡೇಮಾಯಸಂದ್ರದ ಜಗ್ಗೇಶಣ್ಣ ಪ್ರಚಾರ ಪಟ್ಟಿಗೆ ಸೇರ್ಪಡೆ ಮಾಡಲು ಬಿಜೆಪಿ ರಾಜ್ಯ ನಾಯಕತ್ವ ಹಿಂದೇಟು ಹಾಕಿದೆ. ನಟಿಯರಾದ ತಾರ ಮತ್ತು ಶ್ರುತಿ ಅವರ ಜೊತೆ ಜಗ್ಗೇಶ್ ಕೂಡ ಇರುತ್ತಿದ್ದರು. ಈಗ ಅವರು ಬಿಜೆಪಿಯಲ್ಲಿ ಲೆಕ್ಕಕ್ಕೂ, ಆಟಕ್ಕೂ ಇಲ್ಲದ ವ್ಯಕ್ತಿಯಾಗಿದ್ದಾರೆ.

ಸಿನಿಮಾ ಡೈಲಾಗ್ ಹೊಡೆದು ಜನರನ್ನು ರಂಜಿಸುತ್ತಿದ್ದ ಜಗ್ಗೇಶ್ ಈಗ ಸ್ಟಾರ್ ಅಲ್ಲ ಎಂಬುದನ್ನು ಬಿಜೆಪಿ ಕಂಡುಕೊಂಡಿದೆ. ಇದುವರೆಗೂ ಚುನಾವಣೆಗಳಲ್ಲಿ ಅವರನ್ನು ಬಳಸಿಕೊಂಡು ಕಸದಂತೆ ಬಿಸಾಕಿದೆ. ಬಿಜೆಪಿಯಲ್ಲಿ ಗಿಮಿಕ್ ಮಾಡಬಹುದು ಅಂದುಕೊಂಡಿದ್ದ ಜಗ್ಗೇಶಣ್ಣ ಸಿನಿಮಾದ ಜಪ ಮಾಡುತ್ತಿದ್ದಾರೆ ಎಂದು ಕೆಲವರು ಗೇಲಿ ಮಾಡುತ್ತಿದ್ದಾರೆ. ಜಗ್ಗೇಶ್ ಕೂಡಾ ಕೊಳಕು ಮಾತುಗಳನ್ನು ಆಡುತ್ತಿದ್ದರು. ಈಗ ಬಿಜೆಪಿಯಲ್ಲಿ ಅವರ ಪಾತ್ರವೇನು ಎನ್ನುವ ಪ್ರಶ್ನೆ ಎದುರಾಗಿದೆ.

ಕುಮಾರಸ್ವಾಮಿ ಸರ್ಕಾರ ಅಧಿಕಾರದಿಂದ ಇಳಿದು ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬಿಜೆಪಿಯನ್ನು ಸಮರ್ಥವಾಗಿ ಸಮರ್ಥಿಸಿಕೊಂಡಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಚಾರಕರ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ. ಆರ್. ಅಶೋಕ ಅವರ ಹೆಸರೂ ಕೂಡ 18ನೇ ಸ್ಥಾನಕ್ಕೆ ಕುಸಿದಿದೆ. ‘ತೆಂಗಿನಕಾಯಿ’ ಬೆಲೆಗಿಂತಲೂ ಕಡಿಮೆ ಎಂದು ಅಶೋಕ್ ಸ್ಥಾನದ ಕುರಿತು ಗೇಲಿ ಮಾಡಿದ್ದಾರೆ.

ಸಜ್ಜನ ರಾಜಕಾರಣಿಯೆಂದು ಘೋಷಿಸಿಕೊಂಡಿರುವ ಎಸ್. ಸುರೇಶ್ ಕುಮಾರ್ ಅವರಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಕಾಂಗ್ರೆಸ್ ನಲ್ಲಿ ಪಾಂಚಜನ್ಯ ಮೊಳಗಿಸಿ ಕೊನೆಗಾಲದಲ್ಲಿ ಬಿಜೆಪಿ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿಯ ಗರ್ಭಗುಡಿಗೆ ಬಿಟ್ಟುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿ ಹೊರನಡೆದ ದಲಿತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೂ ಪಕ್ಷದ ಹತ್ತಿರ ಸುಳಿಯಗೊಟ್ಟಿಲ್ಲ.

ಆರ್ ಎಸ್ ಎಸ್ ನಿಂದ ರಾಜಕಾರಣಕ್ಕೆ ಬಂದ ಬಿ.ಎಲ್.ಸಂತೋಷ್, ಎಬಿವಿಪಿಯಿಂದ ಬಂದ ಎನ್. ರವಿಕುಮಾರ್ ಮತ್ತು, ಪ್ರಹ್ಲಾದ ಜೋಶಿ ಸೇರಿದಂತೆ ಪ್ರಮುಖ ಬ್ರಾಹ್ಮಣರು ಮತ್ತು ಲಿಂಗಾಯತ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಾಪ್ ಸಿಂಹ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ಹಿಂದೆ ಕೂರುವಂತಹ ಪರಿಸ್ಥಿತಿ ಇದೆ.

ಗರ್ಭಗುಡಿ ಸಂಸ್ಕೃತಿಯಲ್ಲಿ ಆರ್ ಎಸ್ಎಸ್ ಮೂಲದವರಿಗೆ ಮೊದಲ ಆದ್ಯತೆ ನೀಡಿರುವುದು ಎದ್ದು ಕಾಣುತ್ತದೆ. ಯಡಿಯೂರಪ್ಪ ಬೆಂಬಲಿಗರನ್ನು ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಬಿ.ಎಲ್. ಸಂತೋಷ್ ಮತ್ತು ಅಧ್ಯಕ್ಷರ ಕೈ ಮೇಲಾಗಿರುವುದು ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿದರೆ ಗೊತ್ತಾಗುತ್ತದೆ. ಇನ್ನು ಕಾಂಗ್ರೆಸ್ ನಲ್ಲಿ ಸ್ಟಾರ್ ಪ್ರಚಾರಕರಾಗಿದ್ದ,  ಜೆಡಿಎಸ್ ನಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ ಕೇವಲ ಸ್ಥಳೀಯ ಮುಖಂಡರಂತೆ ಇರಬೇಕಾಗಿದೆ.

ಗೋವಿಂದ ಕಾರಜೋಳ ಸೇರಿದಂತೆ ಒಂದಿಬ್ಬರು ಮೂವರು ದಲಿತ ನಾಯಕರ ಹೆಸರನ್ನು ಮತ ಗಳಿಕೆಗೆ ಮಾತ್ರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹಾಕಲಾಗಿದೆ. ಅದು ನೆಪ ಮಾತ್ರ. ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಎ. ನಾರಾಯಣಸ್ವಾಮಿ ಅವರನ್ನು ಪ್ರಚಾರಕರ ಪಟ್ಟಿಯಲ್ಲಿ ಹಾಕಿಕೊಂಡಿದ್ದರು. ಈಗ ಅವರ ಹೆಸರನ್ನು ಕೈಬಿಟ್ಟು ಕೇವಲ ಬ್ರಾಹ್ಮಣರು ಮತ್ತು ಲಿಂಗಾಯತರು ಅದರಲ್ಲೂ ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

ಕೆ.ಈ.ಸಿದ್ದಯ್ಯ

 

(ಅತಿಥಿ ಲೇಖಕರ ಬರಹಗಳಲ್ಲಿನ ಅಭಿಪ್ರಾಯಗಳು ಅವರ ಸ್ವಂತದ್ದೇ ಹೊರತು, ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅನಿಸಿಕೆಗಳಾಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...