Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...