HomeUncategorizedಬುರುಡೆ ಜ್ಯೋತಿಷಿಗಳ ಖತರ್ನಾಕ್ ಸೂತ್ರ

ಬುರುಡೆ ಜ್ಯೋತಿಷಿಗಳ ಖತರ್ನಾಕ್ ಸೂತ್ರ

- Advertisement -
- Advertisement -

ಮನುಷ್ಯನಿಗೆ ಅನೂಹ್ಯವಾದ ಬ್ರಹ್ಮಾಂಡದ ಭಯ ಹಿಂದಿನಿಂದಲೂ ಇತ್ತು. ಆ ಹಿನ್ನೆಲೆಯಲ್ಲಿ ಆತ ಹಲವಾರು ದೇವರುಗಳನ್ನು, ಶಕ್ತಿಗಳನ್ನು ನಂಬುತ್ತಾ ಬಂದ. ಕಾಲಾನುಕ್ರಮದಲ್ಲಿ ಈ ದೇವರುಗಳಲ್ಲಿ ಬದಲಾವಣೆಗಳಾಗಿವೆ. ವೈದಿಕ ಧರ್ಮಕ್ಕೆ ಸಂಬಂಧಿಸಿ ಹೇಳುವುದಾದರೆ, ಋಗ್ವೇದದಲ್ಲಿ ಇಂದ್ರನೇ ಪರಮ ದೇವರಾಗಿದ್ದ. ನಂತರದಲ್ಲಿ ಹೊಸಹೊಸ ದೇವರುಗಳ ಆವಿಷ್ಕಾರಗಳಾಗಿವೆ. ಆವಿಷ್ಕಾರ ಇಂದಿಗೂ ಮುಂದುವರಿದಿದೆ. ಹಾಗೆಯೇ ಮನುಷ್ಯನ ಈ ಭಯವನ್ನೇ ಬಂಡವಾಳ ಮಾಡಿಕೊಂಡು ಲಾಭ ಮಾಡಿಕೊಳ್ಳುವವರ ಸಂತಾನ ಇಂದೂ ಎಲ್ಲಾ ಧರ್ಮಗಳಲ್ಲಿ ಹುಲುಸಾಗಿ ಜೀವಿಸುತ್ತಿದೆ.
ಅದರೆ, ಕೆಲವು ಉಜ್ವಲ ಮೆದುಳುಗಳು ಈ ರಹಸ್ಯವನ್ನು ಭೇದಿಸುವ ಕೆಲಸವನ್ನು ಸಾವಿರಾರು ವರ್ಷಗಳಿಂದ ಮಾಡಿವೆ. ಫಲವಾಗಿ ಖಗೋಳಶಾಸ್ತ್ರ ಹುಟ್ಟಿಕೊಂಡಿತು. ಅದು ಭೂಮಿಯ ಸುತ್ತ ತಿರುಗುತ್ತಿದ್ದ ಸೂರ್ಯನನ್ನು ನಿಲ್ಲಿಸಿ ಭೂಮಿಯನ್ನೇ ಸೂರ್ಯನ ಸುತ್ತ ತಿರುಗಿಸುವ ಧರ್ಮದ್ರೋಹ ಮಾಡಿತು! ಚಪ್ಪಟೆಯಾಗಿದ್ದ ಭೂಮಿಯನ್ನು ಉಂಡೆಕಟ್ಟಿ ಗುಂಡಗೂ ಮಾಡಿತು! ಆದರೆ ಆ ಮಹಾನ್ ಶಾಸ್ತ್ರದ ಹೆಸರಿನಲ್ಲಿ ಜನರನ್ನು ಬೆದರಿಸಿ ಹೊಟ್ಟೆಹೊರೆಯುವ ವರ್ಗವು ಗ್ರಹ, ನಕ್ಷತ್ರ, ದೇವರಿಗೆ ಮತ್ತು ಮನುಷ್ಯನ ಭವಿಷ್ಯಕ್ಕೆ ಸಂಬಂಧ ಕಲ್ಪಿಸಿ, ಒಂದು ಕಾಲ್ಪನಿಕ ಬುರುಡೆ ಶಾಸ್ತ್ರವನ್ನು ಸೃಷ್ಟಿಸಿತು. ಅದರ ಹೆಸರೇ ಜ್ಯೋತಿಷ್ಯ ‘ಶಾಸ್ತ್ರ’!
ಭಾರತವೂ ಖಗೋಳ ಶಾಸ್ತ್ರದಲ್ಲಿ ಮುಂಚೂಣಿಯಲ್ಲಿತ್ತು. ನಮ್ಮಲ್ಲಿ ಯಾಜ್ಞವಲ್ಕ್ಯ (ಸುಮಾರು ಕ್ರಿ.ಪೂ. 1800), ಲಗಧ (ಸುಮಾರು ಕ್ರಿ.ಪೂ. 1350), ಆರ್ಯಭಟ (ಕ್ರಿ.ಶ. 500), ಬ್ರಹ್ಮಗುಪ್ತ (ಕ್ರಿ.ಶ. 598-668), ಭಾಸ್ಕರ (ಕ್ರಿ.ಶ. 1114-1185) ಮುಂತಾದ ಮಹಾನ್ ಖಗೋಳಶಾಸ್ತ್ರಜ್ಞರು ಆಗಿಹೋಗಿದ್ದಾರೆ. ನಮ್ಮ ಪೂರ್ವಜರು ಗ್ರಹಗತಿಗಳನ್ನು, ಗ್ರಹಣಗಳನ್ನು ನಿಖರವಾಗಿ ಲೆಕ್ಕಹಾಕಲು ಕಲಿತಿದ್ದರು. ಗ್ರಹಗತಿಗಳ ಹೆಸರಿನಲ್ಲಿ ಇಂದಿಗೂ ಚಲಾವಣೆಯಲ್ಲಿರುವ ಪುರೋಹಿತಶಾಹಿಗೆ ಇಂತಹ ಮಹಾನುಭಾವರ ಒಂದು ಕೂದಲಿನ ಯೋಗ್ಯತೆಯೂ ಇಲ್ಲ. ಆದರೆ ಆ ಮಹಾನ್ ವಿಜ್ಞಾನಿಗಳನ್ನು ತಮ್ಮದೇ ಪುರಾತನ ಪರಂಪರೆಯವರೆಂದು ಸುಳ್ಳು ಕ್ಲೈಮ್ ಮಾಡಿಕೊಂಡಿದ್ದು ಮಾತ್ರ ಇವರ ವಿಶೇಷ ಪ್ರತಿಭೆ. ಹೀಗೆ ಸುಳ್ಳುಗಳ ಮೇಲೆ ಸುಳ್ಳು ಹೇಳುತ್ತಲೇ ದೇವರು, ಧರ್ಮಗಳ ಹೆಸರಿನಲ್ಲಿ ಮೂಢನಂಬಿಕೆಗಳನ್ನು ಹರಡಿ ಜನರನ್ನು ಸುಲಿಯುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ಮಾಧ್ಯಮಗಳು ಅವರ ಪಾಲುದಾರರಾಗಿ ಕೆಲಸ ಮಾಡುತ್ತಿರುವುದು ದುರಂತ!
ಮೇಲೆ ಹೆಸರಿಸಿದ ಮಹಾನುಭಾವರು ಮತ್ತು ಅವರ ಅಪ್ರತಿಮ ಆವಿಷ್ಕಾರಗಳಿಗೆ ವಂದಿಸುತ್ತಲೇ, ಈ ನಕಲಿಗಳ ಮಹಾನ್ ಆವಿಷ್ಕಾರಗಳನ್ನು ನೋಡೋಣ.
ಮನುಷ್ಯ ಹುಟ್ಟುತ್ತಲೇ ಈ ನಕಲಿಗಳು ಆತನನ್ನು ಸುತ್ತಿಕೊಳ್ಳುತ್ತವೆ. ಒಂದು ಶತಮಾನ ಹಿಂದಕ್ಕೆ ಹೋದರೆ, ಮಕ್ಕಳು ಹುಟ್ಟುತ್ತಲೇ ಜನರು ಪುರೋಹಿತರ ಬಳಿ ಹೆಸರಿಗಾಗಿ ಓಡುತ್ತಿದ್ದರು. ನಕ್ಷತ್ರಕ್ಕೆ ಅನುಗುಣವಾಗಿ ಬರುವ ಕೆ, ಕು, ಚು, ಚಿ… ಇತ್ಯಾದಿಯಾಗಿ ಪಂಚಾಂಗದಲ್ಲಿ ಇರುವ ಹೆಸರೇ ಇಡಲಾಗದ ಅಕ್ಷರಗಳಿಗೆ ಪುರೋಹಿತರು ಒಂದು ಹೆಸರು ಹೊಸೆದು ಸೂಚಿಸುತ್ತಿದ್ದರು. ಅದರೆ, ಹೆಚ್ಚಿನವರಿಗೆ ಹುಟ್ಟಿದ ದಿನಾಂಕ, ಜಾತಕ ಇತ್ಯಾದಿ ಬರೆದುಕೊಡುತ್ತಿರಲಿಲ್ಲ. ಅನಕ್ಷರಸ್ಥರಿಗೆ ಅವೆಲ್ಲಾ ಯಾಕೆ ಅಲ್ಲವೆ?! ಬೇಕಾದರೆ ಮುಂದೆ ಅವರು ತಮ್ಮ ಬಳಿಯೇ ಬರಬೇಕಲ್ಲ! ಇವುಗಳ ಹಿಂದಿರುವ ರಾಜಕೀಯ ಮತ್ತು ವ್ಯಾಪಾರಿ ಬುದ್ಧಿಯ ಆವಿಷ್ಕಾರಗಳನ್ನು ಗಮನಿಸೋಣ.
ಹೆಸರು ಹೇಳಿದ ಕೂಡಲೇ ವ್ಯಕ್ತಿ ಮುಂದೊಮ್ಮೆ ಪೂಜೆ, ದೋಷ, ಪರಿಹಾರ ಎಂದು ಬಂದಾಗ ಮೇಲ್ಜಾತಿಯವನೋ, ಕೆಳಜಾತಿಯವನೋ, ಮೇಲ್ಜಾತಿಯವನಾಗಿದ್ದರೆ, ಸ್ಥಿತಿವಂತನೋ ಬಡವನೋ, ಅಥವಾ ದಲಿತ ಸಮುದಾಯದವನೋ ಎಂದು ಗೊತ್ತಾಗಬೇಕು. ಇಲ್ಲಿ ಪುಲ್ಲಿಂಗ ಮಾತ್ರ ಬಳಸಿರುವುದು ಉದ್ದೇಶಪೂರ್ವಕವಾಗಿಯೇ! ಪೂಜೆಗಳಲ್ಲಿ ಹೆಣ್ಣುಗಳಿಗೆ ಸ್ಥಾನ ಇಲ್ಲದುದರಿಂದ ಅವರ ಹೆಸರುಗಳಿಗೆ ಹೆಚ್ಚು ಮಹತ್ವವಿರಲಿಲ್ಲ. ಅಪ್ಪ ಇದ್ದಲ್ಲಿ ಅಮ್ಮ ಮಾಡಿದರೆ ಆಯಿತು.
ಕರಾವಳಿಯ ಮಟ್ಟಿಗೆ ಹೇಳುವುದಾದರೆ, ಬಡ ಶೂದ್ರರಾದರೆ ಚೊಂಗ, ಪೋಂಕ, ಮುದರ ಎಂಬ ಹೆಸರುಗಳು; ಸ್ವಲ್ಪ ಸ್ಥಿತಿವಂತ ಶೂದ್ರರಾದರೆ ಚೆನ್ನಪ್ಪ, ಸಂಕಪ್ಪ, ವಾಸಪ್ಪ ಇತ್ಯಾದಿ ಹೆಸರುಗಳು! ಅವೇ ಹೆಸರುಗಳು ಬ್ರಾಹ್ಮಣರಿಗಾದರೆ ಚೆನ್ನಕೇಶವ, ಶಂಕರನಾರಾಯಣ, ವಾಸುದೇವ ಮುಂತಾದ ಘನ ಹೆಸರುಗಳಾಗುತ್ತಿದ್ದವು! ಈ ಶೂದ್ರರು ಸಾಕಷ್ಟು ಸ್ಥಿತಿವಂತರಾಗಿದ್ದರೆ, ಅಥವಾ ವಿದ್ಯಾವಂತರಾಗಿದ್ದರೆ ಅಶೋಕ, ಲಕ್ಷಣ, ದೇವದಾಸ ಇತ್ಯಾದಿ ಹೆಸರುಗಳು ಪ್ರಾಪ್ತವಾಗುತ್ತಿದ್ದವು.
ಅದರೆ, ಸಮಾಜದ ಕೆಳಸ್ತರದ ಶೋಷಿತ ಜನಾಂಗಗಳ ಮಕ್ಕಳಿಗೆ ಹೆಸರಿಡುವಾಗ ಪಂಚಾಂಗ ನೋಡುವ ಕಷ್ಟವನ್ನೂ ಯಾರೂ ತೆಗೆದುಕೊಳ್ಳುತ್ತಿರಲಿಲ್ಲ! ವಾರದ ದಿನಗಳ ಹೆಸರುಗಳಿಗೆ ಅನುಗುಣವಾಗಿ ಐತಾರ ಅಂದರೆ ಆದಿತ್ಯವಾರ ಹುಟ್ಟಿದವರಿಗೆ ಐತಾರ, ಸೋಮಾರದವರಿಗೆ ಚೋಮ, ಅಂಗಾರೆಯವರಿಗೆ ಅಂಗಾರ, ಬುದಾರದವರಿಗೆ ಬೂದ, ಗುರುವಾರದವರಿಗೆ ಗುರುವ, ಸುಕ್ರಾರದವರಿಗೆ ತುಕ್ರ, ಸನಿವಾರದವರಿಗೆ ತನಿಯ ಮುಂತಾದ ಹೆಸರುಗಳನ್ನು ಬಿಸಾಕಲಾಗುತ್ತಿತ್ತು! ಹೆಣ್ಣು ಮಕ್ಕಳಿಗೆ ಹೆಸರಿಡಲೂ ಒದ್ದಾಡಬೇಕಾಗಿರಲಿಲ್ಲ! ಐತನನ್ನು ಐತೆ, ಚೋಮನನ್ನು ಚೋಮು ಮಾಡಿದರೆ ಮುಗಿಯಿತು! ಇದೇ ಹೆಸರುಗಳಿಗೆ ಎಂದಿಗೂ ಪೂಜೆ ಮಾಡಲು ಬರದ ದಂಡಪಿಂಡ ಸೂದ್ರಮುಂಡೇವಕ್ಕೆ ಇದೇ ಹೆಸರುಗಳನ್ನು ಅಪ್ಪ ಸೇರಿಸಿ ಇಟ್ಟರಾಯಿತು!
ಪುರೋಹಿತ ಕಂ ಜ್ಯೋತಿಷಿಗಳ ಲೆಕ್ಕಾಚಾರವೆಂದರೆ, ಈ ಶೂದ್ರರು ಜೀವನದಲ್ಲಿ ಮುಂದೆ ಒಂದಲ್ಲ ಒಂದು ದಿನ ತಮ್ಮ ಬಳಿಗೆ ಬರಲೇಬೇಕು. ಬರದಿದ್ದರೆ ಬರುವಂತೆ ಮಾಡುವ ಆವಿಷ್ಕಾರಗಳಿವೆ! ಪೂಜೆ ಮಾಡಿಸುವಾಗ ಹುಟ್ಟಿದ ನಕ್ಷತ್ರಗಳ ಹೆಸರು ಹೇಳಲೇಬೇಕು. ಇದೊಂದು ಯುನೀಕ್ ಐಡೆಂಟಿಫಿಕೇಶನ್ ನಂಬರ್ ಇದ್ದಂತೆ! ಇಲ್ಲದಿದ್ದಲ್ಲಿ ಸಂಬಂಧಪಟ್ಟ ದೇವರುಗಳು ಅರ್ಜಿಗಳನ್ನು ಸ್ವೀಕರಿಸುವುದಿಲ್ಲ! ದಡ್ಡ ಶೂದ್ರರಿಗೆ ಅದು ನೆನಪಿಡುವುದು ಬಿಡಿ, ಉಚ್ಛರಿಸಲೂ ಬರುವುದಿಲ್ಲ! ಆಧಾರ್ ಕಾರ್ಡ್ ಮರೆತಂತೆ ಮರೆತು ಬಿಡುತ್ತಾರೆ. ಅದಕ್ಕೆ ಅವರನ್ನು ಈ ಕಷ್ಟದಿಂದ ಪಾರುಮಾಡಲು ಈ ಮಹಾನ್ ಆವಿಷ್ಕಾರ ಮಾಡಲಾಗಿತ್ತು! ಒಬ್ಬ ಮನುಷ್ಯ ಎಷ್ಟೇ ದಡ್ಡನಾಗಿದ್ದರೂ ಸ್ವಂತ ಮತ್ತು ತನ್ನ ಹೆಂಡತಿ ಮಕ್ಕಳ ಹೆಸರನ್ನು ಮರೆತುಬಿಡುವುದು ಸಾಧ್ಯವಿಲ್ಲವಾದುದರಿಂದ ಹೆಸರು ಹೇಳಿದರೆ ಸಾಕು ಭಟ್ಟರು ಕಂಪ್ಯೂಟರಿಗಿಂತ ಬೇಗ ನಕ್ಷತ್ರವನ್ನು ಕಂಡುಹಿಡಿದುಬಿಡುತ್ತಾರೆ! ಆದುದರಿಂದ ಸ್ವಲ್ಪ ಮಂದ ಭಟ್ಟರಿಗೆ ಅನುಕೂಲವಾಗಲೆಂದು ಹುಡುಕಾಟದ ವ್ಯಾಪ್ತಿ (ಸರ್ಚ್ ಫೀಲ್ಡ್) ಕಿರಿದುಗೊಳಿಸಲಾಗಿತ್ತು. ಹೆಸರುಗಳ ಸಂಖ್ಯೆ ಕಡಿಮೆ ಇದ್ದಷ್ಟು ಅವರ ಮಸ್ತಿಷ್ಕದ ಭಾರ ಕಡಿಮೆಯಾಗುತ್ತಿತ್ತು! ಆದುದರಿಂದಲೇ ಊರಿನಲ್ಲಿ ಹತ್ತಿಪ್ಪತ್ತು ಸಂಕಪ್ಪ ವೆಂಕಪ್ಪರು ಕಂಡುಬರುತ್ತಿದ್ದು, ಗುರುತಿಗಾಗಿ ಅವರಿಗೆ ಕುಂಟ, ಪೆದ್ದ, ದೋಂಟಿ, ಕಳ್ಳ ಇತ್ಯಾದಿ ಅಡ್ಡ ಹೆಸರುಗಳು ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜೀವನದುದ್ದಕ್ಕೂ ಅಂಟಿಕೊಳ್ಳುತ್ತಿದ್ದವು!
ಇಂತಹ ಒಂದು ಸರಳವಾದ, ‘ವೈಜ್ಞಾನಿಕ’ವಾದ ‘ಹ್ಯೂಮನ್ ಕಾಸ್ಟ್ ಎಂಡ್ ಸ್ಟೇಟಸ್ ರೆಕಗ್ನಿಶನ್ ಸಿಸ್ಟಮ್’ ಭಾರತೀಯ ಪುರೋಹಿತಶಾಹಿಗಳ ಮಹಾನ್ ಆವಿಷ್ಕಾರಗಳಲ್ಲಿ ಒಂದು! ಪ್ರಪಂಚದಲ್ಲಿ ಯಾರೂ ಇಂಥ ಸಾಧನೆ ಮಾಡಿಲ್ಲ!
ಇದರಲ್ಲೂ ಇನ್ನೊಂದು ವ್ಯವಸ್ಥೆಯನ್ನು ಅಳವಡಿಸಲಾಗಿತ್ತು! ಈ ಆವಿಷ್ಕಾರದ ಹೆಸರೇ ‘ಹ್ಯೂಮನ್ ಫಿಲ್ತ್ ಸೆಪರೇಷನ್ ಸಿಸ್ಟಮ್’ ಅಂತ! ಇದನ್ನು ವಿದೇಶಗಳಲ್ಲಿ ಬಣ್ಣ ಮತ್ತು ಜನಾಂಗೀಯ ನೆಲೆಗಳಲ್ಲಿ ಮಾಡುತ್ತಿದ್ದರೆ ನಮ್ಮ ಪುರೋಹಿತರು ಅದಕ್ಕಿಂತಲೂ ಹಿಂದೆಯೇ ಅದಕ್ಕಿಂತಲೂ ಸೂಕ್ಷ್ಮವಾದ ಜಾತಿ ಆಧರಿತ ವೈಜ್ಞಾನಿಕ ವ್ಯವಸ್ಥೆ ಕಂಡುಹಿಡಿದಿದ್ದರು! ಅದುವೇ ದಲಿತರಲ್ಲಿ ದಲಿತರನ್ನು ಹೆಸರಿನಿಂದಲೇ ಗುರುತಿಸಿ ಪ್ರತ್ಯೇಕಿಸುವ, ದೂರವಿಡುವ ವ್ಯವಸ್ಥೆಯಿದು!
ಇಂತಹ ಹುಲು ಮಾನವರನ್ನು ಮಾನವರೆಂದೇ ಪರಿಗಣಿಸಬಾರದು ಎಂದು ಅಂತವರಿಗೆ ಪಿಜಿನ (ಇರುವೆ) ಬೊಗ್ಗು, ಬೊಗುರ ಮತ್ತು ಬೊಗ್ಗಿ (ನಾಯಿಗಳು), ನಕ್ಕುರ (ಎರೆಹುಳ), ಕಜವು (ಕಸ), ನಾದೆಲ (ಕೊಳಕು ವಾಸನೆಯವ), ಸೀಂಕ್ರ (ಕಸಬರಿಕೆಯ ಕಡ್ಡಿ), ಮೈಪು (ಕಸಬರಿಕೆ) ಮುಂತಾದ ಪವಿತ್ರ ಹೆಸರುಗಳನ್ನು ದಯಪಾಲಿಸಲಾಗುತ್ತಿತ್ತು! ಇವರಲ್ಲಿ ಇಂದು ನಕ್ಕುರ (ಎರೆಹುಳ) ಮಾತ್ರ ಮೇಲ್ಜಾತಿಯವರ ಮನಸ್ಸಿನಲ್ಲಿ ಸಾವಯವ ಕೃಷಿಯ ಹೆಸರಿನಲ್ಲಿ ಸ್ವಲ್ಪ ಸ್ಥಾನಮಾನ ಪಡೆದಿದ್ದಾನೆ!
ಕಾಲ ಬದಲಾದಂತೆ ಸಾಫ್ಟ್‍ವೇರ್ ಅಪ್‍ಗ್ರೇಡ್ ಆಗುತ್ತಲೇ ಇದೆ. ಮೊದಲಿಗೆ ಮೇಲ್ಜಾತಿಯ ಹೆಸರುಗಳು ಕೆಳಕ್ಕೂ ಇಳಿಯಲಾರಂಭಿಸಿದವು. ದಲಿತರಲ್ಲಿಯೂ ಶಂಕರ, ರಾಮರು ಕಾಣಿಸಿಕೊಳ್ಳಲಾರಂಭಿಸಿದರು. ಎಲ್ಲರಿಗೂ ಅನುಕೂಲವಾಗಲಿ ಎಂದು ಪಂಚಾಂಗಗಳಲ್ಲಿಯೇ ನಕ್ಷತ್ರಗಳ ಮುಂದೆ ಹೆಸರುಗಳ ಆರಂಭದ ಅಕ್ಷರಗಳನ್ನು ಕೊಡಲಾಯಿತು. ಆಧುನಿಕ ಹೆಸರುಗಳು ಬಂದಂತೆ ಜನರು ತಮ್ಮ ಹುಟ್ಟಿದ ನಕ್ಷತ್ರಗಳನ್ನು ನೆನಪಿಡಲು ಆರಂಭಿಸಿದುದರಿಂದ ದೊಡ್ಡ ಪ್ರಮಾದಗಳೇನೂ ಆಗುತ್ತಿಲ್ಲ. ಅರ್ಥಿಕ ನಷ್ಟವೂ ಆಗುತ್ತಿಲ್ಲ. ಜನರು ಅವರದ್ದೇ ಸಿಸ್ಟಮ್ ಕಂಡುಹಿಡಿದಿದ್ದಾರೆ. ಹೆಚ್ಚಿನವರು ವಾಡಿಕೆ ಹೆಸರು, ಜಾತಕದ ಹೆಸರು ಎಂದು ಎರಡೆರಡು ಹೆಸರು ಇಟ್ಟುಕೊಂಡಿರುತ್ತಾರೆ!
ಆರ್ಥಿಕ ನಷ್ಟ ಇಲ್ಲ ಯಾಕೆಂದರೆ, ಪುರೋಹಿತರು ಎಂತೆಂತಹಾ ಮಹಾನ್ ಆವಿಷ್ಕಾರಗಳನ್ನು ಮಾಡಿದ್ದಾರೆಂದರೆ ಒಂದೊಂದೂ ಲಕ್ಷಗಟ್ಟಲೆ ವರಮಾನ ತರುತ್ತವೆ. ಹೀಗೆ ಲಕ್ಷಗಟ್ಟಲೆ ಸಂಪಾದನೆಯ ಹೊಸಹೊಸ ಕ್ರಿಯಾಕರ್ಮಗಳ ನಡುವೆ ಜುಜುಬಿ ಚಿಲ್ಲರೆ ದಕ್ಷಿಣೆಯ ನಾಮಕರಣ ಮಾಡುತ್ತಾ ಕೂರಲು ಪುರುಸೊತ್ತಾದರೂ ಯಾರಿಗಿದೆ!? ಇನ್ನಷ್ಟು ಇಂತಹ ಮಹಾನ್ ವೈಜ್ಞಾನಿಕ ಆವಿಷ್ಕಾರಗಳನ್ನು ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...