Homeಸಾಮಾಜಿಕಬ್ರಿಟಿಶರ ಎದೆ ನಡುಗಿಸಿದ್ದ ಆ ದಲಿತ ಸೇನಾಧಿಪತಿ ಹೆಣ್ಣಿನ ಹೆಸರು ವೀರಮಂಗೈ ಕುಯಿಲಿ

ಬ್ರಿಟಿಶರ ಎದೆ ನಡುಗಿಸಿದ್ದ ಆ ದಲಿತ ಸೇನಾಧಿಪತಿ ಹೆಣ್ಣಿನ ಹೆಸರು ವೀರಮಂಗೈ ಕುಯಿಲಿ

- Advertisement -
- Advertisement -

ಪರಿಮಳಾ ವಾರಿಯರ್ |

ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರ ಹೆಸರು ಹೇಳಿ ಎಂದರೆ ನಮಗೆಲ್ಲರಿಗೂ ಒಂದರ ಹಿಂದೊಂದು ರಾಜರು-ಪುರುಷ ನಾಯಕರ ಹೆಸರು ಬರುತ್ತವೆ. ಆ ನಂತರ ಒಂದೆರಡು ಮಹಿಳೆಯರ ಹೆಸರು ನೆನಪಾಗಬಹುದು. ಅಪ್ಪಿತಪ್ಪಿಯೂ ಒಬ್ಬ ಜನಸಾಮಾನ್ಯ, ಕೆಳ ಸಮುದಾಯದ ಸ್ವಾತಂತ್ರ್ಯ ಹೋರಾಟಗಾರರ ಹೆಸರು ನಮಗೆ ನೆನಪಾಗುವುದೇ ಇಲ್ಲ. ಯಾಕೆಂದರೆ ನಾವೆಲ್ಲರೂ ಕಲಿತಿರುವ ಇತಿಹಾಸದ ಪುಟಗಳಲ್ಲಿ ಇವರ ಉಲ್ಲೇಖಗಳೇ ಇಲ್ಲ. ಚರಿತ್ರೆಯ ದಾಖಲಾತಿಯೇ ಹಾಗೆ. ಅದು ಕಾಲಘಟ್ಟವೊಂದರ ಸ್ಥಿತ್ಯಂತರಗಳ ಮುಂಚೂಣಿಯಲ್ಲಿ ನಿಂತವರ ಹೆಸರನ್ನು ಮಾತ್ರ ಜತನವಾಗಿ ನೆನಪಿಟ್ಟುಕೊಳ್ಳುತ್ತದೆ. ಮುಂಚೂಣಿಯಲ್ಲಿ ನಿಂತವರು ಗೆಲ್ಲಲು ಕಾರಣವಾದ ಜೀವಗಳನ್ನು ನಿರ್ದಯದಿಂದ ದೂರವುಳಿಸುತ್ತದೆ. ಹೀಗೆ ಚರಿತ್ರೆಯ ಪುಟಗಳಿಂದಲೇ ಅಳಿಸಿಹೋದ ವೀರರು, ವೀರಮಹಿಳೆಯರನ್ನು ಹುಡುಕುತ್ತ ಹೋದರೆ ಲೆಕ್ಕಕ್ಕೆ ಸಿಗದಷ್ಟು ವೀರಚರಿತೆಗಳು ನಮಗೆ ಸಿಗುತ್ತವೆ. ಅವುಗಳಲ್ಲಿ ತಮಿಳುನಾಡಿನ ‘ವೀರಮಂಗೈ ಕುಯಿಲಿ’ ಎಂಬ ದಲಿತ ಹೆಣ್ಣುಮಗಳೂ ಒಬ್ಬಳು. ಆಕೆಯದ್ದು ಯಾವ ವೀರಾಧಿವೀರ ರಾಜ ಮಹಾರಾಜರಿಗೇನೂ ಕಡಿಮೆ ಶೌರ್ಯದ ಕಥೆಯಲ್ಲ. 17ನೇ ಶತಮಾನದ ಆವತ್ತಿಗೆ ರೈತಕೂಲಿಗಳ ಮಗಳಾಗಿ ಹುಟ್ಟಿದಾಕೆ ಕುಯಿಲಿ. ಬ್ರಿಟಿಶರ ದಾಳಿಯಿಂದ ಗಂಡನನ್ನೂ ತನ್ನ ಸಾಮ್ರಾಜ್ಯವನ್ನೂ ಕಳೆದುಕೊಂಡ ರಾಣಿಯೊಬ್ಬಳು ತನ್ನ ರಾಜ್ಯವನ್ನು ಪುನಃ ಗೆದ್ದುಕೊಳ್ಳಲು ಅವಳ ಜೊತೆ ನಿಂತಾಕೆ ಕುಯಿಲಿ. ಬ್ರಿಟಿಶರಿಗೆ ಯುದ್ಧದಲ್ಲಿ ಮಣ್ಣು ಮುಕ್ಕಿಸಲು ತನ್ನ ಜೀವವನ್ನೇ ಅಕ್ಷರಶಃ ಬಲಿ ಕೊಟ್ಟು ಬಡಿದಾಡಿದವಳು ‘ವೀರ ಮಂಗೈ ಕುಯಿಲಿ.’

ದಲಿತ ಹೆಣ್ಣುಮಗಳು ವೀರಮಂಗೈ ಕುಯಿಲಿಯ ಬದುಕನ್ನು ಅರಿಯಬೇಕೆಂದರೆ ನಾವು 17ನೇ ಶತಮಾನಕ್ಕೆ ವಾಪಸ್ಸು ಹೋಗಬೇಕು. ಅದು 1772ರಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯವನ್ನು ‘ಮುತ್ತು ವಡುಗನಾಥ ತೇವರ್’ ಅನ್ನುವ ದ್ರಾವಿಡ ರಾಜನೊಬ್ಬ ಆಳುತ್ತಿದ್ದ ಕಾಲ. ಆಗ ಆರ್ಕಾಟ್ ನವಾಬರೊಟ್ಟಿಗೆ ಸೇರಿ ಬ್ರಿಟಿಶರು ಶಿವಗಂಗೈ ಪ್ರಾಂತ್ಯವನ್ನು ದಾಳಿಮಾಡಿ ‘ಮುತ್ತು ವಡುಗನಾಥ ತೇವರ್’ ರಾಜನ್ನು ಕೊಲ್ಲುತ್ತಾರೆ. ಶಿವಗಂಗೈ ಪಟ್ಟಣ ಪ್ರಾಂತ್ಯವನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ಈ ರಾಜನ ಪತ್ನಿಯಾಗಿದ್ದ ರಾಣಿ ‘ವೇಲು ನಾಚ್ಚಿಯಾರ್’ ತನ್ನ ಮಗಳು ‘ವೆಳ್ಳಾಚ್ಚಿ’ಯೊಡನೆ ದಿಂಡುಗಲ್ ಪಕ್ಕದ ವಿರೂಪಾಚ್ಚಿ ಎಂಬಲ್ಲಿಗೆ ಹೋಗಿ ಅಜ್ಞಾತವಾಸದಲ್ಲಿ ಬದುಕುತ್ತಿರುತ್ತಾಳೆ. ಒಂದು ಕಡೆ ಗಂಡ ಮತ್ತು ರಾಜ್ಯ ಕಳೆದುಕೊಂಡ ದುಃಖ, ಮತ್ತೊಂದು ಕಡೆ ತನ್ನದೇ ನಾಡಿನಲ್ಲಿ ತಲೆಮರೆಸಿಕೊಂಡು ಬದುಕಬೇಕಾದ ಸಂಕಷ್ಟ ಇದೆಲ್ಲದರಿಂದ ಕುದ್ದು ಹೋದ ರಾಣಿ ‘ವೇಲು ನಾಚ್ಚಿಯಾರ್’ ಬ್ರಿಟಿಶ್ ಮತು ಆರ್ಕಾಟ್ ನವಾಬರ ಮೇಲೆ ಸೇಡು ತೀರಿಸಿಕೊಂಡು ತನ್ನ ರಾಜ್ಯ ವಾಪಸ್ ಪಡೆಯಲು ಪ್ರಯತ್ನ ಶುರುವಿಡುತ್ತಾಳೆ. ಅಜ್ಞಾತವಾಸದಲ್ಲಿದ್ದುಕೊಂಡೇ ಮಹಿಳೆಯರದ್ದೊಂದು ಸೈನ್ಯ ಕಟ್ಟಿ ಅವರಿಗೆ ಯುದ್ಧಕಲೆ ಕಲಿಸಿ ಯುದ್ಧವೊಂದಕ್ಕೆ ಸಜ್ಜುಗೊಳಿಸುತ್ತಾಳೆ. ಆ ಸಂದರ್ಭದಲ್ಲಿ ರಾಣಿ ‘ವೇಲು ನಾಚ್ಚಿಯಾರ್’ಗೆ ದೇವರಂತೆ ಸಿಗುವ ದಲಿತ ಮಹಿಳೆಯೇ ‘ವೀರಮಂಗೈ ಕುಯಿಲಿ.’

ಕುಯಿಲಿ ಆಗಿನ ರಾಜಾಡಳಿತದ ಶಿವಗಂಗೈ ಪ್ರಾಂತ್ಯದ ‘ಕುಡಂಚವಾಡಿ’ ಎಂಬ ಹಳ್ಳಿಯೊಂದರಲ್ಲಿ ರೈತಕೂಲಿಗಳಾಗಿ ಬದುಕುತ್ತಿದ್ದ ‘ಪೆರಿಯ ಮುತ್ತನ್’ ಮತ್ತು ‘ರಾಕು’ ಎಂಬ ದಲಿತ ದಂಪತಿಯ ಮಗಳು. ಕುಯಿಲಿಯ ತಾಯಿ ‘ರಾಕು’ ತಾನು ಕೂಲಿಯಾಗಿ ದುಡಿಯುತ್ತಿದ್ದ ಹೊಲಗದ್ದೆಗಳಿಗೆ ನುಗ್ಗಿ ಬೆಳೆನಾಶ ಮಾಡುತ್ತಿದ್ದ ಕಾಡುಕೋಣಗಳನ್ನು ಓಡಿಸಲು ಅವುಗಳೊಡನೆ ಬಡಿದಾಡುವ ಸಂದರ್ಭದಲ್ಲಿ ಪ್ರಾಣ ಬಿಡುತ್ತಾಳೆ. ಇದಾದನಂತರ ವಯಸ್ಸಿಗೆ ಬಂದಿದ್ದ ಕುಯಿಲಿಯನ್ನು ಕರೆದುಕೊಂಡು ಅವಳ ತಂದೆ ಪೆರಿಯ ಮುತ್ತನ್ ಹುಟ್ಟೂರು ಬಿಟ್ಟು ಶಿವಗಂಗೈ ಪಟ್ಟಣಕ್ಕೆ ಬರುತ್ತಾನೆ. ಅಲ್ಲಿ ಅದಾಗಲೇ ರಾಜ್ಯ ಪಡೆಯಲು ಹರಸಾಹಸ ಮಾಡುತ್ತಿದ್ದ ರಾಣಿ ವೇಲು ನಾಚ್ಚಿಯಾರ್’ಳ ಗೂಢಚಾರಿಯಾಗಿ ಸೇರಿಕೊಳ್ಳುತ್ತಾನೆ. ನವಾಬರು ಮತ್ತು ಬ್ರಿಟಿಶ್ ಸೈನ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿ ರಾಣಿಗೆ ತಲುಪಿಸುವುದು ಪೆರಿಯ ಮುತ್ತನ್ ಕೆಲಸವಾಗಿತ್ತು. ಈ ಸಂದರ್ಭದಲ್ಲಿ ಕುಯಿಲಿಯೂ ರಾಣಿಯ ಸಂಪರ್ಕಕ್ಕೆ ಬರುತ್ತಾಳೆ. ಬ್ರಿಟಿಶರು ಮತ್ತು ನವಾಬರು ರಾಣಿಯನ್ನು ಕೊಲ್ಲಲು ಒಂದರ ಹಿಂದೊಂದು ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ ಒಮ್ಮೆ ರಾಣಿ ವೇಲು ನಾಚ್ಚಿಯಾರ್‍ಳನ್ನು ಕೊಂದೇಬಿಡುವ ಪ್ರಯತ್ನವೊಂದಕ್ಕೆ ಕೈಹಾಕುತ್ತಾರೆ. ಆಗ ಅವರೊಡನೆ ಬಡಿದಾಡುವ ಕುಯಿಲಿ ಆ ಹಂತಕರನ್ನು ಹಿಮ್ಮೆಟ್ಟಿಸಿ ರಾಣಿಯ ಪ್ರಾಣರಕ್ಷಣೆ ಮಾಡುತ್ತಾಳೆ. ರಾಣಿಯ ಸೈನ್ಯಕ್ಕೆ ಸಿಲಂಬಂ (ದೊಣ್ಣೆವರಸೆ ವಿದ್ಯೆ) ಕಲಿಸುತ್ತಿದ್ದ ಗುರುವೊಬ್ಬ ಬ್ರಿಟಿಶರ ಗೂಢಚಾರನಾಗಿ ರಾಣಿಯನ್ನು ಕೊಲ್ಲಲೆತ್ನಿಸಿದಾಗ ಅವನನ್ನು ಕುಯಿಲಿ ಕೊಂದು ರಾಣಿಯ ಪ್ರಾಣ ಉಳಿಸುತ್ತಾಳೆ. ಆಗಿನಿಂದ ರಾಣಿಯ ಖಾಸಗಿ ಅಂಗರಕ್ಷಕಿಯಾಗಿ ಕುಯಿಲಿ ನೇಮಕಗೊಳ್ಳುತ್ತಾಳೆ.

ಕುಯಿಲಿ ರಾಣಿಯೊಡನೆ ಇರುವರೆಗೂ ಅವಳನ್ನು ಕೊಲ್ಲಲಾಗದೆಂದು ಅರಿತ ಬ್ರಿಟಿಶರು ಮತ್ತು ಅರ್ಕಾಟ್ ನವಾಬರು ಕುಯಿಲಿಯನ್ನು ತಮ್ಮ ಕಡೆಗೆ ಬಂದು ರಾಣಿ ಕೊಲ್ಲಲು ನೆರವಾಗಿ ಕುಯಿಲಿಗೆ ಆಮಿಷಗಳ ಸರಮಾಲೆಯನ್ನೇ ಒಡ್ಡಿದರೂ ಅದನ್ನು ನಿರಾಕರಿಸುವ ಕುಯಿಲಿ ರಾಣಿಯ ರಕ್ಷಣೆಗೆ ಟೊಂಕಕಟ್ಟಿ ನಿಲ್ಲುತ್ತಾಳೆ. ಇದಕ್ಕೆ ಪ್ರತಿಯಾಗಿ ಬ್ರಿಟಿಶರು ಮತ್ತು ನವಾಬರು ಕುಯಿಲಿ ಪ್ರತಿನಿಧಿಸುವ ದಲಿತರಿಗೆ ಪರಿಪರಿಯಾಗಿ ಹಿಂಸಿಸಿ ಪೀಡಿಸುತ್ತಾರೆ. ಇದ್ಯಾವುದಕ್ಕೂ ಜಗ್ಗದ ಕುಯಿಲಿ ರಾಣಿಯ ಜೊತೆಗೆ ಬ್ರಿಟಿಶರ ವಿರುದ್ಧ ಹೋರಾಡಲು ಮುನ್ನುಗ್ಗುತ್ತಾಳೆ. ಕುಯಿಲಿಯ ರಾಜನಿಷ್ಠೆ ಮತ್ತು ಪರಾಕ್ರಮಕ್ಕೆ ಉಡುಗೊರೆಯಾಗಿ ರಾಣಿ ‘ವೇಲು ನಾಚ್ಚಿಯಾರ್’ ಅವಳನ್ನು ತನ್ನ ಸೈನ್ಯದ ಮಹಿಳಾ ಸೇನಾಧಿಪತಿಯಾಗಿ ನೇಮಿಸುತ್ತಾಳೆ. 17ನೇ ಶತಮಾನದ ಕಾಲಘಟ್ಟದಲ್ಲಿ ದಲಿತ ಯುವತಿಯೊಬ್ಬಳು ಸೈನ್ಯವೊಂದರ ಉಸ್ತುವಾರಿ ವಹಿಸಿಕೊಂಡದ್ದು ಅತ್ಯಂತ ಕ್ರಾಂತಿಕಾರಕ ಬೆಳವಣಿಗೆಯಾಗಿತ್ತು. ನಂತರ ಪಾಂಡ್ಯರಾಜರು, ಮರುದು ಪಾಂಡಿಯರ್ ದೊರೆಗಳು, ಗೋಪಾಲ ನಾಯ್ಕರ್ ಮತ್ತು ಹೈದರ್ ಆಲಿಯೊಡನೆ ರಾಜತಾಂತ್ರಿಕ ಸಂಬಂಧ ಬೆಳೆಸುವ ರಾಣಿ ‘ವೇಲು ನಾಚ್ಚಿಯಾರ್’ ಅವರೊಡನೆ ಸೈನ್ಯದ ನೆರವನ್ನು ಪಡೆಯುತ್ತಾಳೆ. ಬ್ರಿಟಿಶರು ಮತ್ತು ನವಾಬರ ಮೇಲೆ ಕುಯಿಲಿಯ ನೇತೃತ್ವದ ಸೈನ್ಯವನ್ನು ಮುನ್ನುಗ್ಗಿಸಿ ಮುಗಿಬಿದ್ದು ಹಲವಾರು ಯುದ್ಧಗಳನ್ನು ಮಾಡಿ ಗೆಲ್ಲುತ್ತಾಳೆ.

ಅದಾಗಲೇ ತನ್ನ ಗಂಡನನ್ನು ಗೆದ್ದು ಶಿವಗಂಗೈ ಪಟ್ಟಣ ಮತ್ತು ಕೋಟೆಯನ್ನು ತನ್ನ ವಶದಲ್ಲಿಟ್ಟುಕೊಂಡಿದ್ದ ಬ್ರಿಟಿಶರು ಮತ್ತು ನವಾಬರಿಂದ ಕೋಟೆಯೊಂದನ್ನು ವಶಪಡಿಸಿಕೊಂಡರೆ ಶಿವಗಂಗೈ ಪ್ರಾಂತ್ಯ ಸಂಪೂರ್ಣ ಕೈಗೆ ಬರುವಷ್ಟರಮಟ್ಟಿಗೆ ಸೇನಾಧಿಪತಿ ಕುಯಿಲಿ ಮತ್ತು ರಾಣಿ ‘ವೇಲು ನಾಚ್ಚಿಯಾರ್’ ಬ್ರಿಟಿಶರಿಗೆ ತಲೆನೋವಾಗಿ ಪರಿಣಮಿಸುತ್ತಾರೆ. ಬ್ರಿಟಿಶರ ಆಧುನಿಕ ಬಂದೂಕು ಮತ್ತು ಮದ್ದುಗುಂಡಿನ ಸೈನ್ಯದೆದುರು ತಮ್ಮ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳನ್ನು ಬಳಸಿ ಅಂತಿಮ ಯುದ್ಧವನ್ನು ಗೆಲ್ಲುವುದು ಅಸಾಧ್ಯವೆಂದು ಅರಿತಿದ್ದ ಕುಯಿಲಿ ಅದಕ್ಕೊಂದು ಅಪಾಯಕಾರಿ ಯುದ್ಧವ್ಯೂಹವೊಂದನ್ನು ರಚಿಸುತ್ತಾಳೆ. ಶಿವಗಂಗೈ ಕೋಟೆಯೊಳಗೆ ಇದ್ದ ಬ್ರಿಟಿಶರ ಮದ್ದುಗುಂಡು ದಾಸ್ತಾನಿನ ಆಯುಧಾಗಾರದ ದಾಸ್ತಾನನ್ನು ಧ್ವಂಸಗೊಳಿಸಿ, ನಂತರ ಅವರ ಮೇಲೆ ಮುಗಿಬಿದ್ದರೆ ಯುದ್ಧದಲ್ಲಿ ಬ್ರಿಟಿಶರಿಗೆ ಆಯುಧಗಳೇ ಇಲ್ಲದೆ ಗೆಲುವು ನಮ್ಮದಾಗುತ್ತದೆಂದು ಯೋಚಿಸಿದ ಕುಯಿಲಿ ಆ ದಿಸೆಯಲ್ಲಿ ಒಂದು ಉಪಾಯವೊಂದನ್ನು ಹೊಸೆಯುತ್ತಾಳೆ. ಅದು ವಿಜಯದಶಮಿಯ ಕಾಲ. ಕೋಟೆಯೊಳಗಿದ್ದ ‘ರಾಜರಾಜೇಶ್ವರಿ ಅಮ್ಮನ್’ ದೇವಸ್ಥಾನಕ್ಕೆ ತನ್ನ ಸೈನ್ಯದ ಕೆಲವು ಮಹಿಳಾ ಸೈನಿಕರೊಡನೆ ದೈವಭಕ್ತೆಯರಂತೆ ತೆರಳುತ್ತಾಳೆ. ಹೋಗುವಾಗ ಹೂವಿನ ಬುಟ್ಟಿ, ಹಣ್ಣಿನ ಬುಟ್ಟಿ, ತುಪ್ಪದಡಬ್ಬಿ, ಎಣ್ಣೆದೀಪಗಳನ್ನು ದೇವರಪೂಜೆಯ ನೆಪದಲ್ಲಿ ದೇವಾಲಯದೊಳಗೆ ತೆಗೆದುಕೊಂಡು ಹೋಗುವಲ್ಲಿ ಕುಯಿಲಿ ಯಶಸ್ವಿಯಾಗುತ್ತಾಳೆ. ಹೂವು-ಹಣ್ಣಿನ ಬುಟ್ಟಿಯಲ್ಲಿ ಅಡಗಿಸಿಕೊಂಡಿದ್ದ ಆಯುಧಗಳಿಂದ ಕೋಟೆಯೊಳಗಿನ ಬ್ರಿಟಿಶ್ ಕಾವಲು ಸೈನಿಕರನ್ನು ಕೊಂದು ಬ್ರಿಟಿಶ್ ಸೈನ್ಯದ ಆಯುಧಾಗಾರದ ದಾಸ್ತಾನುಕೋಣೆಯನ್ನು ಪತ್ತೆ ಹಚ್ಚುತ್ತಾಳೆ. ಆ ನಂತರ ತಂದಿದ್ದ ತುಪ್ಪ ಮತ್ತು ಎಣ್ಣೆಯನ್ನು ತನ್ನ ದೇಹದ ಮೇಲೆ ಸುರಿದುಕೊಳ್ಳುವ ಕುಯಿಲಿ ತನ್ನ ಮೈಗೆ ಬೆಂಕಿ ಹಚ್ಚಿಕೊಳ್ಳುತ್ತಾಳೆ. ಬ್ರಿಟಿಶರ ಆಯುಧಾಗಾರದಲ್ಲಿದ್ದ ಮದ್ದುಗುಂಡು ಬಂದೂಕುಗಳ ದಾಸ್ತಾನು ಕುಯಿಲಿಯೊಡನೆಯೇ ಸುಟ್ಟು ಭಸ್ಮವಾಗುತ್ತದೆ. ಕುಯಿಲಿ ತನ್ನ ಸೈನ್ಯ ಮತ್ತು ರಾಣಿ ಗೆಲ್ಲಲು ತನ್ನ ಜೀವವನ್ನೇ ಬಲಿ ಕೊಡುತ್ತಾಳೆ.

ಆ ನಂತರ ಕೋಟೆಯೊಳಗೆ ಸೈನ್ಯದೊಡನೆ ನುಗ್ಗುವ ರಾಣಿ ‘ವೇಲು ನಾಚ್ಚಿಯಾರ್’ ಮತ್ತು ಬೆಂಬಲಿಗ ರಾಜರ ಪಡೆಯು ಆಯುಧಗಳೇ ಇಲ್ಲದೆ ಖಾಲಿಕೈನಲ್ಲಿ ಎದುರಾದ ಬ್ರಿಟಿಶರ ಸೈನ್ಯವನ್ನು ಬಗ್ಗುಬಡಿದು ತಮ್ಮ ರಾಜವಂಶದ ಶಶಿವರ್ಣ ತೇವರ್ ಕಟ್ಟಿದ್ದ ಶಿವಗಂಗೈ ಕೋಟೆ ಮತ್ತು ಪಟ್ಟಣವನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ದಲಿತ ಸೇನಾಧಿಪತಿ ಕುಯಿಲಿಯ ಹುತಾತ್ಮನಡೆಯೊಂದು ನಡೆಯದೇ ಹೋಗಿದ್ದರೆ ಈ ಯುದ್ಧ ಗೆಲ್ಲುವುದು ರಾಣಿಗೆ ಸುಲಭಸಾಧ್ಯವಿರಲಿಲ್ಲ. ಈ ಮೂಲಕ ಕುಯಿಲಿಯನ್ನು ‘ವೀರಮಂಗೈ ಕುಯಿಲಿ’ (ವೀರಮಹಿಳೆ ಕುಯಿಲಿ)ಯೆಂದು ತಮಿಳುನಾಡು ಕರೆಯುತ್ತದೆ. ಕುಯಿಲಿಯ ವೀರಮರಣದಿಂದ ರಾಜ್ಯ ವಾಪಸ್ ಪಡೆಯುವ ರಾಣಿ ‘ವೇಲು ನಾಚ್ಚಿಯಾರ್’ ಆ ನಂತರ ದಶಕಗಳ ಕಾಲ ಶಿವಗಂಗೈ ಪ್ರಾಂತ್ಯವನ್ನು ಆಳಿ 1796ರಲ್ಲಿ ಮೃತಪಡುತ್ತಾಳೆ. ಆಕೆಯ ಸಾವಿನ ಶತಮಾನಗಳ ನಂತರ ಭಾರತ ಸರ್ಕಾರ ರಾಣಿ ‘ವೇಲು ನಾಚ್ಚಿಯಾರ್’ ಹೆಸರಿನಲ್ಲಿ ಪೋಸ್ಟ್‍ಸ್ಟಾಂಪನ್ನು ಬಿಡುಗಡೆ ಮಾಡುತ್ತದೆ. ಈ ಅರಸೊತ್ತಿಗೆಯ ಮೆರೆದಾಡುವ ಧಾವಂತದಲ್ಲಿ ಕುಯಿಲಿಯ ತ್ಯಾಗ ಬಲಿದಾನ ಯಾರ ಗಮನಕ್ಕೂ ಬರದೆ ಚರಿತ್ರೆಯ ಮೂಲೆಯೊಂದರಲ್ಲಿ ಹಾಗೇ ಉಳಿದುಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...