Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...