Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...