Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...