Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...