Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...