Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....