Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....