Homeಚಳವಳಿಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

ಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

- Advertisement -
- Advertisement -

ಕೆ.ಪಿ.ಸುರೇಶ |

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಚಾರಿತ್ರಿಕ ಬೆಳವಣಿಗೆ. ಆದರೆ ಈ ಬಗ್ಗೆ ನಮ್ಮ ರಾಜಕೀಯ ಪಕ್ಷಗಳಷ್ಟೇ ಅಲ್ಲ ಒಟ್ಟಾರೆ ನಾಗರಿಕ ಸಮಾಜದ ಪ್ರತಿಕ್ರಿಯೆ ನಿರಾಶಾದಾಯಕವಾಗಿದೆ.
ರಾಜಕೀಯ ಪಕ್ಷಗಳ ನಿಲುವು ನಿರೀಕ್ಷಿತ. ನಮ್ಮ ಸರಕಾರಗಳು ಈ ದುಡ್ಡಿನಿಂದಲೇ ನಡೆಯುವುದು ಎಂಬ ನಂಬಿಕೆ ಇವಕ್ಕಿದೆ. ಸರ್ಕಾರವೂ ಇದೊಂದು ಅನಿವಾರ್ಯ ಚಟವೆಂಬಂತೆ ಬಿಂಬಿಸಿದೆ. ಆದರೆ ಆರ್ಥಿಕ ವಿವರಗಳನ್ನು ನೋಡಿದರೆ ಸರ್ಕಾರಕ್ಕಿರುವ ಆದಾಯ ಸುಮಾರು 18 ಸಾವಿರ ಕೋಟಿ ಎಂದು ಅಂಕಿಅಂಶಗಳು ಹೇಳುತ್ತಿವೆ. ಈ ಮೊತ್ತ ಅಷ್ಟೇನೂ ದೊಡ್ಡದಲ್ಲ. ಎರಡು ದಶಕಗಳ ಮೊದಲು ಬೇರೆ ಸೇವಾ ತೆರಿಗೆಗಳೇ ಇಲ್ಲದ ಕಾಲದಲ್ಲಿ ಮದ್ಯದ ತೆರಿಗೆಯೇ ಪ್ರಮುಖ ಆದಾಯ ಮೂಲವಾಗಿತ್ತು ಎಂಬುದು ನಿಜ. ಆದರೆ ಪ್ರಸ್ತುತ ಇದು ಅಷ್ಟೇನೂ ನಿಜವಲ್ಲ. ಇಂದು ಇzರ ಪ್ರಾಮುಖ್ಯತೆ ಬೇರೆ ಕಾರಣಕ್ಕಾಗಿ ಇದೆ. ಈ ಮದ್ಯದ ಅಂಗಡಿ, ಬಾರುಗಳು ರಾಜಕೀಯ ನೇತಾರರ ನೆಚ್ಚಿನ ಕಾಳಧನದ ಮೂಲ. ಅಷ್ಟೇ ಅಲ್ಲ ಚುನಾವಣಾ ಕಾಲದಲ್ಲಿ ನೆಚ್ಚಿಕೊಳ್ಳಬಹುದಾದ ಸರಬರಾಜು ಮೂಲ.
ಮುಖ್ಯತಃ ಈ ಪಾದಯಾತ್ರೆ ನಮ್ಮ ಒಟ್ಟಾರೆ ಸಮಾಜದ ಪುರುಷಪ್ರಧಾನ ಉಡಾಫೆಯನ್ನು ಅನಾವರಣಗೊಳಿಸಲಿದೆ. ಶೇ. ಐವತ್ತರಷ್ಟು ಇರುವ ಮಹಿಳೆಯರು, ಮತ್ತದರ ಅರ್ಧದಷ್ಟಿರುವ ಮಕ್ಕಳನ್ನು ಬಿಟ್ಟರೆ ಉಳಿಯುವ ಶೇ.25 ಗಂಡಸರಲ್ಲಿ ಕುಡುಕರೆಷ್ಟು? ಪೂರಾ ಅಂದರೂ ಅವರೇನು ಬಹುಮತವಲ್ಲ. ಇದಿಷ್ಟೇ ಸಾಕು ಸರ್ಕಾರದ ಅಷಾಡಭೂತಿತನವನ್ನು ಬೆತ್ತಲೆಗೊಳಿಸಲು.
ಕುಡಿತದ ಸಾಮಜಿಕ ಆರ್ಥಿಕ ಮತ್ತು ಆರೊಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆ ಹೊಸತೇನೂ ಹೇಳಬೇಕಿಲ್ಲ. ಒಂದು ದಿನ ಮುಸ್ಸಂಜೆ ಯಾವುದೇ ಊರಲ್ಲಿ ನಿಂತರೂ ಇದು ಕಾಣಿಸುತ್ತೆ.
ಆದರೂ ದೇಶದ ಪ್ರತಿಷ್ಠಿತ ನರ ಆರೋಗ್ಯ ಸಂಸ್ಥೆ ನಿಮ್ಹಾನ್ಸ್ ಇತ್ತೀಚೆಗೆ ಪ್ರಕಟಿಸಿರುವ ಅಧ್ಯಯನ ವರದಿ ಈ ಕೇಡಿನ ಪರಿಣಾಮಗಳ ಬಗ್ಗೆ ಛಳಿ ಹುಟ್ಟಿಸುವಂಥಾ ವಿವರಗಳನ್ನು ಮುಂದಿಟ್ಟಿದೆ.
ಭಾರತದಲ್ಲಿ ವರುಷಕ್ಕೆ 230 ಕೋಟಿ ಲೀಟರ್ ಮದ್ಯ ಉತ್ಪಾದನೆಯಾಗುತ್ತದೆ. ಅಂದರೆ ಸುಮಾರು ತಲಾ 2 ಲೀಟರ್!! ಹತ್ತು ವರುಷಗಳ ಹಿಂದೆಯೇ ಇದರಿಂದ ಬರುತ್ತಿದ್ದ ರಾಜಸ್ವ 40 ಸಾವಿರ ಕೋಟಿ. ಆದಾಯ ಎಲ್ಲಿಂದ ಬರುತ್ತಿದೆ ಎಂಬ ನೈತಿಕ ಪ್ರಶ್ನೆಯನ್ನು ಸರ್ಕಾರ ಎಂದೂ ತನಗೆ ತಾನೇ ಹಾಕಿಕೊಂಡಿಲ್ಲ.
ನಿಮ್ಹಾನ್ಸ್ ಅಧ್ಯಯನದ ಪ್ರಕಾರ ಶೇ. 30-35 ಗಂಡಸರು ಮದ್ಯಪಾನ ಮಾಡುತ್ತಾರೆ. ಶೇ.5ರಷ್ಟು ಮಹಿಳೆಯರೂ ಮದ್ಯಪಾನಿಗಳು.
ಆತಂಕ ಹುಟ್ಟಿಸುವ ಸಂಗತಿ ಎಂದರೆ ‘80ರ ದಶಕದಲ್ಲಿ ಮದ್ಯಪಾನ ಆರಂಭಿಸುವ ವಯಸ್ಸು 28 ಆಗಿತ್ತು. ಆದರೆ ಇದು 2007ರ ವೇಳೆಗೆ ಇದು 17ಕ್ಕಿಳಿದಿತ್ತು. ಇವರಲ್ಲಿ ಅರ್ಧಕ್ಕರ್ಧ ಮಂದಿ ಅಪಾಯಕಾರಿ ಮಟ್ಟದ ಕುಡಿತದ ಚಟ ಅಂಟಿಸಿಕೊಳ್ಳುತ್ತಾರೆ.
ಅಧ್ಯಯಯನಗಳ ಪ್ರಕಾರ ಕುಡಿತಕ್ಕಂಟಿದವರಲ್ಲಿ ಶೇ.20 ಮಂದಿ ಬೇಗನೆ ಸಾವನ್ನಪ್ಪುತ್ತಾರೆ. ಅಪಘಾತ, ಗಾಯಗಳೂ ಕುಡುಕರಿಗೇ ಜಾಸ್ತಿ. ಶೇ. 25ರಷ್ಟು ರಸ್ತೆ ಅಪಘಾತ ಮತ್ತು ಸಾವುಗಳು ಮದ್ಯ ಸಂಬಂಧೀ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಕೌಟುಂಬಿಕ ಹಿಂಸೆಯ ಅರ್ಧಾಂಶ ಈ ಕುಡಿತದ ಕಾರಣಕ್ಕೆ ನಡೆಯುತ್ತಿರುತ್ತೆ. ಶೇ.25ರಷ್ಟು ಪಾಶ್ರ್ವವಾಯು ಪೀಡಿತರು ಮದ್ಯವ್ಯಸನಿಗಳಾಗಿದ್ದಾರೆ. ಲಿವರ್ ಕಾಯಿಲೆಯಂತೂ ಬಹುತೇಕ ಕುಡಿತದ ಪರಿಣಾಮದಿಂದಲೇ ಎಂಬುದೂ ಸಿದ್ಧವಾಗಿದೆ.
ಇದರ ಸಾಮಾಜಿಕ ಪರಿಣಾಮಗಳಲ್ಲಿ ಕೆಲಸಕ್ಕೆ ಗೈರು ಹಾಜರಾಗುವುದು, ಕುಂಠಿತ ಆರೋಗ್ಯ, ಮಕ್ಕಳಿಗೆ ಶಿಕ್ಷಣದಲ್ಲಾಗುವ ತೊಡಕು ಹೀಗೆ ಹತ್ತು ಹಲವು ಬಗೆಯ ವಿವರಗಳಿಗೆ ಅಧ್ಯಯನಗಳೇ ಬೇಕಿಲ್ಲ ತಾನೇ?
ಆರ್ಥಿಕವಾಗಿ, ಇದರ ಆದಾಯ ನೆಚ್ಚಿಕೊಂಡಿರುವ ಸರ್ಕಾರ ಎಂಥಾ ಮೂರ್ಖವಾಗಿದೆಯೆಂದರೆ ಒಂದು ಅಧ್ಯಯನದ ಪ್ರಕಾರ ಹೆಂಡದ ಆದಾಯ 20 ಸಾವಿರ ಕೋಟಿ ಇದ್ದರೆ, ಹೆಂಡದ ಪರಿಣಾಮದಿಂದ ಸರ್ಕಾರಕ್ಕೆ ಆರೋಗ್ಯ ವ್ಯವಸ್ಥೆ ಮತ್ತಿತರ ಕಾರಣಕ್ಕಾಗುವ ವೆಚ್ಚ 24 ಸಾವಿರ ಕೋಟಿ. (ಇದು 2004ರ ಲೆಕ್ಕಾಚಾರ!!).
ಇನ್ನಷ್ಟು ಆತಂಕಕಾರೀ ವಿವರಗಳು ನಿಮ್ಹಾನ್ಸ್ ಅಧ್ಯಯನದಲ್ಲಿದೆ. ಮುಖ್ಯವಾಗಿ ಕುಡಿತದಿಂದಾಗುವ ಆರೋಗ್ಯ, ಸಾಮಾಜಿಕ, ಕೌಟುಂಬಿಕ ಅನಾಹುತಗಳಿಗೆ ಸರ್ಕಾರ ತೆರುವ ಬೆಲೆ ಅದರಿಂದ ಹುಟ್ಟುವ ಆದಾಯಕ್ಕಿಂತ ಜಾಸ್ತಿ ಎಂಬುದು ಗಮನಾರ್ಹ. ಇಂಥಾ ವೈದ್ಯಕೀಯ ವೃತ್ತಿಪರ ಸಂಸ್ಥೆಗಳ ಸೂಚಿಗಳನ್ನು ಸರ್ಕಾರ ಗೌರವಿಸಿದ್ದಿಲ್ಲ. ಆದರೆ ತುಲನಾತ್ಮಕವಾಗಿ ಗಮನಿಸಿ:
ಒಂದು ಕೀಟನಾಶಕದ ಬಗ್ಗೆ ಅಥವಾ ಮ್ಯಾಗೀ ನೂಡಲ್ ಬಗ್ಗೆ ಸರ್ಕಾರದ ಸಂಸ್ಥೆಯೊಂದು ವರದಿ ಕೊಟ್ಟರೆ ಮಾಧ್ಯಮಗಳು ಕೋಲಾಹಲವೆಬ್ಬಿಸುತ್ತವೆ. ಒತ್ತಡ ಗುಂಪುಗಳು ಹೌಹಾರಿ ಸರ್ಕಾರದ ಮೇಲೆ ಒತ್ತಡ ತರುತ್ತವೆ. ನಿಷೇಧ ಸಹಿತ ಹತ್ತು ಹಲವು ಕ್ರಮಗಳನ್ನು ಸರ್ಕಾರ ಮಿಂಚಿನ ವೇಗದಲ್ಲಿ ಜರುಗಿಸುತ್ತದೆ.
ಹೆಂಡದ ಬಗ್ಗೆ ಮಾತ್ರಾ ಅತ್ತ ಪರಿಣಿತರ ಅಧ್ಯಯನ, ಇತ್ತ ಕಣ್ಣಿಗೇ ಗಿಡಿಯುವ ನಿತ್ಯ ವರದಿಗಳಿದ್ದರೂ ಸರ್ಕಾರ ಗಮನಿಸುವುದಿಲ್ಲ. ಏನಿದರ ಅರ್ಥ?
ಸೊಷಿಯಲ್ ಡ್ರಿಂಕಿಂಗ್ ಅಂತ ಒಂದಿದೆ. ಅಂದರೆ ಆಗೀಗ ಮೋಜಿಗಾಗಿ ಕುಡಿಯುವುದು. ಇದನ್ನು ತಡೆಯಲಾಗದು. ಮನುಷ್ಯನ ಆದಿಮ ವ್ಯಸನ ಇದು ಎಂದೆಲ್ಲಾ ವಾದ ಇದೆ. ಚಾರಿತ್ರಿಕವಾಗಿ ಗಮನಿಸಬೇಕಾದ್ದು ಭಾರತದಲ್ಲಿ ಆಧುನಿಕ ಪಾಶ್ಚಿಮಾತ್ಯ ರಸಾಯನ ಶಾಸ್ತ್ರದ ಉತ್ಪನ್ನಗಳು ಪ್ರವೇಶಿಸುವ ಮೊದಲು ನಮ್ಮಲ್ಲಿದ್ದ ಮದ್ಯದ ಅಲ್ಕೋಹಾಲ್ ಪ್ರಮಾಣ ಅಷ್ಟೇನೂ ಅಪಾಯಕಾರಿಯಾಗಿರಲಿಲ್ಲ. ಇಂದಿಗೂ ಆದಿವಾಸಿ ಪಂಗಡಗಳು ಬಿಡಿ, ನಮ್ಮ ಕೊಡಗು ಮಲೆನಾಡುಗಳಲ್ಲೂ ವಿಶಿಷ್ಟ ಮದ್ಯಗಳನ್ನು ತಯಾರಿಸುವುದಿದೆ. ಇವೆಲ್ಲಾ ತೀರಾ ಅಪಾಯಕಾರೀ ಮದ್ಯಸಾರದ ಪ್ರಮಾಣ ಹೊಂದಿಲ್ಲ.
ಆಧುನಿಕ ಮದ್ಯಗಳ ಪ್ರವೇಶ ಆಗಿದ್ದೇ ನಮ್ಮ ಪಾರಂಪರಿಕ ಗ್ರಾಮವಾಸಿಗಳು ಪಂಗಡಗಳೂ ಈ ಅಪಾಯಕಾರೀ ಅಲ್ಕೋಹಾಲ್ ಪ್ರಮಾಣವಿರುವ ಮದ್ಯಕ್ಕೆ ಶರಣಾಗಿದ್ದಾರೆ. ಇಂದಿಗೂ ಹಳ್ಳಿಗಳ ಕುಡುಕರನ್ನು ಕೇಳಿದರೆ ಕಂಟ್ರಿ ಸರಾಯಿ ಬಗ್ಗೆ ಮಾತಾಡುತ್ತಾರೆ.
ಇದರರ್ಥ ಇಷ್ಟೇ. ಈ ಚಟ ಕ್ರಮೇಣ ಎಲ್ಲಾ ಚಟಗಳಂತೆ ಹೆಚ್ಚು ಹೆಚ್ಚು ಪ್ರಮಾಣದ ಕುಡಿತವನ್ನು ಪ್ರೇರೇಪಿಸುತ್ತಾ ಹೋಗುತ್ತದೆ.
ಒಂದೆಡೆ ಗ್ರಾಮೀಣ ರೈತನ ಕೌಟುಂಬಿಕ ಆದಾಯ ದಿನಕ್ಕೆ ಕೇವಲ ರೂ.200 ಎಂದು ಮರುಗುವ ಸರ್ಕಾರ ಇದೇ ಕುಟುಂಬದ ಗಂಡಸೊಬ್ಬ ಈ ಮೊತ್ತವನ್ನು ಹೆಂಡಕ್ಕೆ ವ್ಯಯಿಸುವುದರ ಬಗ್ಗೆ ಗೊತ್ತಿದ್ದೂ ಮೌನ ತಾಳುತ್ತದೆ.
ಹಳ್ಳಿಯ ಗೂಡಂಗಡಿಗಳಲ್ಲೂ ಮದ್ಯ ಮಾರಾಟವಾಗುವುದು ಬಹಿರಂಗವಾಗಿದ್ದರೂ ಇಲಾಖೆಗಳಾಗಲೀ ಜನಪ್ರತಿನಿಧಿಗಳಾಗಲೀ ಈ ಬಗ್ಗೆ ಕ್ರಮಕೈಗೊಂಡ ಉದಾಹರಣೆ ಇದೆಯೇ?
ಅರ್ಥಾತ್ ಈ ಮದ್ಯ ಎಂಬುದು ಕೌಟುಂಬಿಕ ನೆಮ್ಮೆದಿ, ಆರೋಗ್ಯಕ್ಕೆ ಮಾರಕವಾಗಿದೆಯಷ್ಟೇ ಅಲ್ಲ, ನಮ್ಮ ಸಾರ್ವಜನಿಕ ಜೀವನವನ್ನು ಭ್ರಷ್ಟಗೊಳಿಸುವಲ್ಲೂ ಮಹತ್ವದ ಪಾತ್ರ ವಹಿಸಿದೆ.
ಈ ಹಿಂದೆ ಕರ್ನಾಟಕದ ಮಹತ್ವದ ಹೋರಾಟಗಳನ್ನೂ ಮಹಿಳೆಯರೇ ಮುನ್ನಡೆಸಿದ್ದರು ಎಂಬುದನ್ನು ನೆನಪಿಸಿಕೊಂಡರೆ ಈ ಪಾದಯಾತ್ರೆ ನಿರ್ಣಾಯಕವಾಗುವ ಲಕ್ಷಣ ಕಾಣಿಸುತ್ತಿದೆ. ನಾಳೆಗೇ ಈ ಮಹಿಳೆಯರು ಗೆಲ್ಲುತ್ತಾರೆಂಬ ಭ್ರಮೆ ಈ ಮಹಿಳೆಯರಿಗೂ ಇಲ್ಲ. ಆದರೆ ಮುಂಬರುವ ದಿನಗಳಲ್ಲಿ ಕಿರಗೂರಿನ ಗಯ್ಯಾಳಿಗಳು ಕಥೆಯಲ್ಲಿ ಸ್ಫೋಟವಾಗುವ ಆಕ್ರೋಶ ರಾಜ್ಯದ ಹಳ್ಳಿಹಳ್ಳಿಗಳಲ್ಲೂ ಮೊಳಕೆ ಒಡೆಯಲಿದೆ.
ಈಗ ಉಡಾಫೆ, ಕಿತಾಪತಿಯಲ್ಲಿ ಈ ಹೋರಾಟವನ್ನು ನೋಡುತ್ತಿರುವ ಪಕ್ಷಗಳಿಗೂ ಈ ಬಿಸಿ ತಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...