Homeಕರ್ನಾಟಕಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

ಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

- Advertisement -
- Advertisement -

ಜಿಲ್ಲಾಡಳಿತ ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮಠಾಣದಲ್ಲೇ ವಸತಿ ವಂಚಿತರಿಗೆ ನಿವೇಶನ ಕೊಡುವ ಪತ್ರ ನೀಡಿದ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು 14 ದಿನಗಳ ನಂತರ ವಾಪಸ್ ಪಡೆದಿದೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಧರಣಿ ಕುಳಿತಿದ್ದ ಹೋರಾಟ ಸಮಿತಿಗೆ ಕೊನೆಗೂ ಹೋರಾಟಕ್ಕೆ ಜಯ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ.

ಮಧುಗಿರಿ ತಾಲೂಕಿ ಬ್ಯಾಲ್ಯದ 70 ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವಂತೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ನಿರಂತರ 14 ದಿನಗಳು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಹೋರಾಟಕ್ಕೆ ದಲಿತ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಬಲ ನೀಡಿದ್ದವು. ಬಡಜನರಿಗೆ ನಿವೇಶನ ನೀಡದೆ ಸ್ಥಳದಿಂದ ಕದಲುವುದಿಲ್ಲ ಎಂಬ ಧರಣಿನಿತರ ಪಟ್ಟಿಗೆ ಜಿಲ್ಲಾಡಳಿತ ಕೊನೆಗೆ ಸ್ಪಂದಿಸಿದೆ. ಗ್ರಾಮಠಾಣಾದ 30 ಕುಟುಂಬ ಜಮೀನಿನಲ್ಲಿ ನಿವೇಶನ ನೀಡುವ ಆದೇಶ ಪತ್ರವನ್ನು ನೀಡಿದ ನಂತರ ಧರಣಿ ಕೈಬಿಡಲಾಗಿದೆ.

ಧರಣಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಚಾಲನೆ ನೀಡಿದ್ದರು. ದೇಶದ ಪ್ರತಿಯೊಬ್ಬ ಬಸವರಿಗೆ  ಕೂಡ ವಸತಿ ಕಲ್ಪಿಸುವುದ ಸರ್ಕಾರ ಜವಾಬ್ದಾರಿ. ಬಡವರು ಗೌರವಯುತವಾಗಿ ಬದಕಲು ಸರ್ಕಾರ ಅವಕಾಶ ಮಾಡಿಕೊಡಬೇಕು. ವಸತಿ ಮತ್ತು ಭೂಮಿಯಿಂದ ಯಾರನ್ನೂ ವಂಚಿಸಬಾರದು ಎಂದು ತಾಕೀತು ಮಾಡಿ ಹೋಗಿದ್ದರು. ಆನಂತರ ಜಿಲ್ಲಾಧಿಕಾರಿಗಳು ಎರಡು ಬಾರಿ ಧರಣಿನಿರತರಲ್ಲಿಗೆ ಆಗಮಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಧರಣಿ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಧರಣಿನಿರತರು ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಈ ನಡುವೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಿತಿಯ ಮಾರ್ಗದರ್ಶಕರಾದ ಎಚ್.ಎಸ್. ದೊರೆ ಸ್ವಾಮಿ ಅವರನ್ನು ಭೇಟಿಯಾಗಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿ ಬಂದರು. ಯಾವುದೇ ಕಾರಣಕ್ಕೂ ಸೂಕ್ತ ಪರಿಹಾರ ಕಾಣದೆ ಧರಣಿ ಕೈಬಿಡಬಾರದು ಎಂದು ಸೂಚಿಸಿದರು. ಅವರ ಮಾರ್ಗದರ್ಶನದಂತೆ ಧರಣಿ ಮುಂದುವರಿಸಲಾಯಿತು. ಧರಣಿಗೆ ಬೇರೆ ಬೇರೆ ಸಂಘಟನೆಗಳು ಬೆಂಬಲ ನಿಡಿದರು.

ಸರ್ಕಾರದ ವಿರುದ್ದ ಪದಗಳನ್ನು ಕಟ್ಟಿ ಹಾಡುವುದು ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಧರಣಿಯನ್ನು ವಿಭಿನ್ನವಾಗಿ ನಡೆಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ತಮಟೆ ಚಳವಳಿ ಮಾಡಿದರು. ಪತ್ರಚಳವಳಿ ಕೈಗೊಂಡರು. ಆದರೂ ಜಿಲ್ಲಾಡಳಿತದ ಕಿವಿಗೆ ಬಡವರ ಕೂಗು ಮುಟ್ಟಲೇ ಇಲ್ಲ. ಧರಣಿ ಕೈಬಿಡಬಹುದೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾಯಿತು.

ಜಿಲ್ಲಾಧಿಕಾರಿಗಳು ಬ್ಯಾಲ್ಯಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ 4 ಎಕರೆ ಭೂಮಿ ನೀಡಿರುವುದಾಗಿ ಪತ್ರಿಕೆಗಳ ಮೂಲಕ ಪ್ರಕಟಿಸಿದರು. ಇದಕ್ಕೂ ಹೋರಾಟ ಸಮಿತಿ ಬಗ್ಗಲಿಲ್ಲ. ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶ ತಗ್ಗುದಿಬ್ಬಗಳಿಂದ ಕೂಡಿತ್ತು. ಗುಡ್ಡದ ಸಮೀಪ ತೋರಿಸಿದ್ದ ಭೂಮಿಯಲ್ಲಿ ಪೊದೆಗಳು ಬೆಳೆದಿದ್ವು. ಅಲ್ಲಿ ಚರತೆ ಮತ್ತು ಕರಡಿಗಳ ಕಾಟ ಅಧಿಕವಿತ್ತು ಎಂಬುದನ್ನು ಹೋರಾಟ ಸಮಿತಿ ಅಧಿಕಾರಿಗಳ ಗಮನ ಸೆಳೆಯಿತು. ಧರಣಿ ನಡೆಸುತ್ತಿದ್ದವರು ಎಷ್ಟೇ ಕಷ್ಟವಿದ್ದರೂ ಪಟ್ಟನ್ನು ಮಾತ್ರ ಸಡಿಸಲೇ ಇಲ್ಲ.

ಕೊನೆಗೂ ಜಿಲ್ಲಾಡಳಿತ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿಯ ಧರಣಿಗೆ ಮಣಿಯಲೇ ಬೇಕಾಯಿತು. 70 ಕುಟುಂಬಗಳ ಸಮಸ್ಯೆ ಗಂಭೀರ ಸ್ವರೂಪದ್ದು ಎಂಬುದನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಹೋರಾಟ ಸಮಿತಿ ಯಶಸ್ವಿಯಾಯಿತು. ಪರಿಣಾಮ ಬ್ಯಾಲ್ಯ ಗ್ರಾಮದ ಗ್ರಾಮಠಾಣದಲ್ಲೇ ಇರುವ ಭೂಮಿಯಲ್ಲಿ ನಿವೇಶನಗಳನ್ನು ನೀಡಲು ಒಪ್ಪಿಕೊಂಡಿತು.

ಬ್ಯಾಲ್ಯ ಗ್ರಾಮದ ಗ್ರಾಮಠಾಣ ಜಾಗದಲ್ಲೇ 30 ಕುಂಟೆ ಜಾಗವನ್ನು ಗುರುತಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲು ಪತ್ರ ಮುಖೇನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ. ಈ ಸಂಬಂಧ ಇದರ ಪ್ರತಿಯನ್ನು  ನಮಗೆ ನೀಡಿದೆ. ನಮಗೆ ಇದರಿಂದ ತೃಪ್ತಿಯಾಗಿದೆ. ಈಗ ನೀಡಿರುವ ಜಾಗದಲ್ಲಿ ಕನಿಷ್ಠ 25 ರಿಂದ 30 ನಿವೇಶನಗಳು ವಿಂಗಡಣೆಯಾಗಲಿವೆ. ಈಗ ತುರ್ತು ಇರುವವರಿಗೆ ನೀವೇಶ ನೀಡುವುದು. 20830 ಅಡಿ ನಿವೇಶ ನೀಡಿದರೆ ಅನುಕೂಲವಾಗುತ್ತದೆ. ಇನ್ನುಳಿದವರಿಗೂ ನಿವೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಜಾಗ ನೋಡಲು ತಿಳಿಸಿದ್ದು, ಮಾರಾಟ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.  ಅದಕ್ಕೆ ಅವರೂ ಒಪ್ಪಿಕೊಂಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

ಧರಣಿ ಸ್ಥಳಕ್ಕೆ ಬಮದು ನಮ್ಮ ಮನವಿಗೆ ಸ್ಪಂದಿಸಿದ ಅಪರ  ಜಿಲ್ಲಾಧಿಕಾರಿ ಚನ್ನಬಸಪ್ಪ,,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ್, ಮಧುಗಿರಿ ತಹಸಿಲ್ದಾರ್ ನಂದೀಶ್ ,ಜೆಸಿಬಿ ವೆಂಕಟೇಶ್,ಟಿ.ಸಿ.ರಾಮಯ್ಯ,ಭರತ್ ಕುಮಾರ್,ಮೋಹನ್ ಕುಮಾರ್,ಯೋಗೀಶ್ ಮೆಳೆಕಲ್ಲಹಳ್ಳಿ,ರಾಮಮೂರ್ತಿ,ಶಿವರಾಜು ಕರ್ನಾಟಕ ರಾಷ್ಟ್ರ ಸಮಿತಿ ಮಲ್ಲಿಕಾರ್ಜುನ್,ತಿಮ್ಮಯ್ಯ ಮೊದಲಾದವರ ಸಮ್ಮುಖದಲ್ಲಿ ಪತ್ರ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಸತಿ ಮತ್ತು ಭೂಮಿ ವಂಚಿತರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ವಸತಿ ದೊರೆಯಬೇಕು.  ಸಾಮಾಜಿಕ ನ್ಯಾಯ ದೊರೆತರೆ ಅನುಕೂಲವಾಗುತ್ತದೆ. ಜಾತಿ, ಮತ, ಲಿಂಗ, ಧರ್ಮಗಳನ್ನು ಮೀರಿ ನಮ್ಮ ಹೋರಾಟ ಮುಂದುವರಿಯುತ್ತದೆ. ಗುಡಿಸಲಲ್ಲಿ ವಾಸಿಸುವವರಿಗು ಮನೆ ದೊರೆಯಬೇಕು. ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ವಸತಿ ಇಲ್ಲದವರು ಇದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಅವರಿಗೂ ನ್ಯಾಯ ಕೊಡಬೇಕು. ಎಲ್ಲ ಕುಟುಂಬಗಳು ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಉದ್ದೇಶ. ಧರಣಿಯನ್ನು ಬೆಂಬಲಿಸಿದ ಮುಖಂಡರು ಹಾಗೂ ಸುದ್ಧಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸುವುದನ್ನು ನಾಗಭೂಷಣ್ ಮರೆಯಲಿಲ್ಲ.

ಅಂತೂ ಧರಣಿ ಮುಕ್ತಾಯವಾಧರೂ ನಿವೇಶನ ಮತ್ತು ಭೂಮಿ ವಂಚಿತರಿಗೆ ನ್ಯಾಯ ದೊರೆಯಲಿ ಎಂಬುದು ಪತ್ರಿಕೆಯ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...