Homeಮುಖಪುಟಮರಗಳ ರಕ್ಷಣೆಗೆ ನಿಂತ ಹೋರಾಟಗಾರರ ಬಂಧನ: ಆರೇ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ

ಮರಗಳ ರಕ್ಷಣೆಗೆ ನಿಂತ ಹೋರಾಟಗಾರರ ಬಂಧನ: ಆರೇ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ

- Advertisement -
- Advertisement -

ಮುಂಬೈನ ಆರೇ ಪ್ರದೇಶದಲ್ಲಿ ಪರಿಸರವಾದಿಗಳು ಮತ್ತು ಪರಿಸರ ಪ್ರೇಮಿಗಳ ಹೋರಾಟ ಜೋರಾದ ಹಿನ್ನೆಲೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಿನ್ನೆಯಷ್ಟೇ ಬಾಂಬೆ ಹೈಕೋರ್ಟ್ ಆರೇ ಪ್ರದೇಶವನ್ನು ಅರಣ್ಯವೆಂದು ಘೋಷಿಸಬೇಕು ಮತ್ತು ಮರಗಳನ್ನು ಕಡಿದು ಮುಂಬೈ ಮೆಟ್ರೋ ಕಾರ್ ಶೆಡ್ ದಾರಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ನಿಲ್ಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಪರಿಸರವಾದಿಗಳು ನಿನ್ನೆ ಸಂಜೆಯಿಂದ ಸೇವ್ ಟ್ರೀ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ರು.

ಇದನ್ನೂ ಓದಿ: ಆರೇ ಪ್ರದೇಶದ ಮರಗಳ ನಾಶ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಮೂಲಗಳ ಪ್ರಕಾರ, ಆರೇ ಪ್ರದೇಶದಲ್ಲಿರುವ ಸುಮಾರು 800 ಕ್ಕೂ ಹೆಚ್ಚು ಮರಗಳನ್ನು ಈಗಾಗಲೇ ಕಡಿಯಲಾಗಿದೆ. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ನಂತರ ಮರಗಳನ್ನು ಕಡಿಯಲು ಮತ್ತಷ್ಟು ಮಷಿನ್ ಗಳನ್ನು ಸ್ಥಳಕ್ಕೆ ತರಲಾಗಿದೆ. ಪೊಲೀಸರು ಮತ್ತು ಹೋರಾಟಗಾರರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಮರಗಳ ಮಾರಣಹೋಮ ವಿರೋಧಿಸಿ, ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, 100ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 353ರಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗುವುದು. ಆರೇ ಪ್ರದೇಶಕ್ಕೆ ಹೋಗುವ ದಾರಿಗೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಆರೇ ಪ್ರದೇಶದ ಸುತ್ತಮುತ್ತ 144 ಸೆಕ್ಷನ್ ಜಾರಿಯಾಗಿದ್ದು, ಜನರನ್ನು ಒಟ್ಟುಗೂಡದಂತೆ ತಡೆಯಲಾಗುತ್ತಿದೆ. ಆರೇ ಪ್ರದೇಶದಲ್ಲಿ ಹೋರಾಟಗಾರರನನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಶಿವಸೇನೆ ನಾಯಕ ಆದಿತ್ಯ ಠಾಕರೆ, ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿದಂತೆ ಅನೇಕ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಆದಿತ್ಯ ಠಾಕರೆ, ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿ, ಮರಗಳನ್ನು ಕಡಿಯುವ ನೀತಿ ಅನುಸರಿಸುವವರು, ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ ಮಾತನಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. ಇತ್ತ ಯೋಗೇಂದ್ರ ಯಾದವ್ ಟ್ವೀಟ್ ಮಾಡಿ, ಮುಂದೆ ಜಲಕಂಟಕ ಎದುರಾಗುವಲ್ಲಿ ಯಾವುದೇ ಅನುಮಾನವಿಲ್ಲ. ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮಕ್ಕೆ ಪುಷ್ಠಿ ನೀಡುತ್ತಿರುವುದು ಚಿಂತಾಜನಕ ವಿಷಯ ಎಂದು ಟ್ವೀಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...