Homeಸಿನಿಮಾಕ್ರೀಡೆಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

ಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

- Advertisement -
- Advertisement -

ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ವಿಶ್ವಕಪ್‌ನ ಮೊದಲ ಸೆಮಿಫೈನಲ್ಸ್ ಮಳೆಯಿಂದಾಗಿ ತಾತ್ಕಾಲಿಕವಾಗಿ ರದ್ಧಾಗಿದ್ದು ಬುಧವಾರಕ್ಕೆ ಪಂದ್ಯವನ್ನು ಮುಂದೂಡಲಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಸಧ್ಯ 46.1 ಓವರ್‌ಗೆ ತನ್ನ 5 ವಿಕೆಟ್‌ಗಳನ್ನು ಕಳೆದುಕೊಂಡು 211 ರನ್ ಗಳಿಸಿದೆ. ಬಿರುಸಿನ ಆಟಗಾರ ರಾಸ್ ಟೇಲರ್ ಔಟಾಗದೆ 67 ರನ್ ಗಳಿಸಿ ಇನ್ನೂ ಕ್ರೀಸ್‌ನಲ್ಲಿ ಇದ್ದಾರೆ. ಈಗ ಮಳೆಯ ಕಾರಣಕ್ಕೆ ಆಟ ತಾತ್ಕಲಿಕವಾಗಿ ರದ್ಧಾಗಿದ್ದು ಮುಂದಿನ ಸಾಧ್ಯತೆಯ ಕುರಿತು ICC ಹಾಗೂ BCCI ಸರಣಿ ಟ್ವೀಟ್‌ಗಳನ್ನು ಮಾಡಿದೆ. ಅವರ ಪ್ರಕಾರ ಪಂದ್ಯ ಎಲ್ಲಿಗೆ ನಿಂತಿದ್ದೆಯೋ ಅಲ್ಲಿಂದಲೇ ಬುಧವಾರ ಮುಂದುವರೆಯಲಿದೆ.

 

ICC ಪ್ರಕಾರ ಈ ಪಂದ್ಯದ ಫಲಿತಾಂಶ ಪ್ರಕಟವಾಗುವುದು ಬಹಳ ಮುಖ್ಯವಾಗಿದ್ದು, ಫಲಿತಾಂಶ ಪ್ರಕಟವಾಗಲೇಬೇಕಾದರೆ ಭಾರತ ಕನಿಷ್ಠ 20 ಓವರ್‌ಗಳ ಪಂದ್ಯವನ್ನು ಆಡಲೇಬೇಕಿದೆ. ಹಾಗೊಂದು ವೇಳೆ ಎರಡನೇ ದಿನವೂ ಮಳೆ ಬಂದು ಒಂದೂ ಬಾಲ್ ಆಡಲು ಸಾಧ್ಯವಾಗಿಲ್ಲ ಎಂದಾದರೆ ಭಾರತವನ್ನು ಫೈನಲ್‌ಗೆ ಕಳಿಸಬಹುದಾಗಿದೆ. (ಈ ಸಾಧ್ಯತೆ ಬಹಳ ಕಡಿಮೆ) ಇದರ ಹೊರತಾಗಿ ಇರುವ ಬೇರೆ ಸಾಧ್ಯತೆಗಳು ಹೀಗಿವೆ.

  1. ಬುಧವಾರ ಮಳೆ ಬಾರದಿದ್ದರೆ ನ್ಯೂಝಿಲೆಂಡ್ ತಂಡ ಮತ್ತೆ ತಾನು ನಿಲ್ಲಿಸಿದ 211/5 (46.1) ರಿಂದ ಶುರು ಮಾಡಬೇಕಿರುತ್ತದೆ‌.
  2. ಬುಧವಾರವೂ ನ್ಯೂಝಿಲೆಂಡ್ ಬ್ಯಾಟ್ ಮಾಡದೇ ಇದ್ದರೆ DLS ಪ್ರಕಾರ ಪಂದ್ಯವನ್ನು 46 ಓವರ್‌ಗೆ ಸೀಮಿತಗೊಳಿಸಿ ಭಾರತಕ್ಕೆ 237 ರನ್ ನ ಗುರಿ ನೀಡಲಾಗುತ್ತದೆ. ಅಥವಾ
  3. ಪಂದ್ಯವನ್ನು 20 ಓವರ್‌ಗೆ ಇಳಿಸಿ 148 ರನ್ ಪೂರ್ಣಗೊಳಿಸುವ ಗುರಿಯನ್ನು ಭಾರತಕ್ಕೆ ನೀಡಲಾಗುತ್ತದೆ.

ನಾಳಿನ ಪಂದ್ಯಕ್ಕೂ ಪ್ರಕ್ಷಕರು ಅದೇ ಟಿಕೆಟ್‌ನಿಂದ ಕ್ರೀಡಾಂಗಣ ಪ್ರವೇಶ ಮಾಡಬಹುದು ಆದರೆ ಅದನ್ನು ಬೇರೆಯವರಿಗೆ ಮಾರಾಟ/ಹಸ್ತಾಂತರ ಮಾಡಲು ಸಾಧ್ಯವಿಲ್ಲ ಎಂದು ICC ತಿಳಿಸಿದೆ‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...