Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...