Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

ಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

- Advertisement -
- Advertisement -

ಉಪಚುನಾವಣೆಯಲ್ಲಿ ಗೆದ್ದ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರು ಯಡ್ಯೂರಪ್ಪನವರ ಸಂಪುಟದಲ್ಲಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರೋದೇನೊ ನಿಜ. ಆದರೆ ಇನ್ನೂ ಒಂದು ತಿಂಗಳ ಕಾಲ ಅವರು ಮಂತ್ರಿಗಿರಿಯಿಂದ ದೂರವೇ ಉಳಿಯಬೇಕಾದ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಅವರ ಪಾಲಿಗೆ ವಿಲನ್ ಆಗಿ ಕಾಡುತ್ತಿರೋದು ಡಿಸೆಂಬರ್ ಮಾಹೆಯ ಮಧ್ಯಂತರದಲ್ಲಿ ಶುರುವಾಗಲಿರುವ ಧನುರ್ಮಾಸವಂತೆ!

ಹೌದು, ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಯಡ್ಯೂರಪ್ಪನವರು ದಿಲ್ಲಿಗೆ ದೌಡಾಯಿಸಿ, ಅಮಿತ್ ಶಾಗೆ ವರದಿ ಒಪ್ಪಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ಬರಬೇಕಿತ್ತು. ಈ ವಾರಾಂತ್ಯದೊಳಗೆ ನೂತನ ಸಚಿವರ ಪ್ರಮಾಣ ವಚನವೂ ಮುಗಿದು ಖಾತೆ ಹಂಚಿಕೆಯಾಗಬೇಕಿತ್ತು. ಆದರೆ ಅದ್ಯಾಕೋ, ಬಂಪರ್ ಬೆಳೆ ತೆಗೆದರು ಸಹಾ ದಿಲ್ಲಿ ನಾಯಕರಿಂದ ಯಡ್ಯೂರಪ್ಪನವರಿಗೆ ಇದುವರೆಗೆ ಬುಲಾವ್ ಬಂದಿಲ್ಲ. ನವದೆಹಲಿಯ ಫರ್ಮಾನು ಇಲ್ಲದೆ ಸ್ವಂತಕ್ಕೆ ಸಂಪುಟ ವಿಸ್ತರಿಸುವ ಸ್ವಾತಂತ್ರ್ಯವೂ ಯಡ್ಯೂರಪ್ಪನವರಿಗೆ ಇಲ್ಲ. ಹಾಗಾಗಿ, ನಿನ್ನೆ ಮಾಧ್ಯಮದವರು ನೀವು ಯಾವಾಗ ದಿಲ್ಲಿಗೆ ಹೋಗುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಇನ್ನು ಮೂರ್‍ನಾಲ್ಕು ದಿನವಂತೂ ನಾನು ದಿಲ್ಲಿ ಕಡೆಗೆ ಹೋಗಲ್ಲ, ಯಾವಾಗ ರಾಷ್ಟ್ರೀಯ ಅಧ್ಯಕ್ಷರು ಕರೀತಾರೋ (ಅಮಿತ್ ಶಾ) ಆಗ ಹೋಗ್ತೀನಿ. ಬಹುಶಃ ಮುಂದಿನ ವಾರವೇ ನನಗೆ ದಿಲ್ಲಿಗೆ ಹೋಗಲು ಸಾಧ್ಯವಾಗುತ್ತೇನೊ ಎಂಬ ಉತ್ತರ ಕೊಟ್ಟಿದ್ದಾರೆ.

ಇದೇ ೧೬ರಂದು (ಬರುವ ಸೋಮವಾರದಿಂದ) ಧನುರ್ಮಾಸ ಶುರುವಾಗಲಿದೆ. ಕವಡೆ ಶಾಸ್ತ್ರ, ಜ್ಯೋತಿಷ್ಯ, ಪಂಚಾಂಗಗಳನ್ನು ವಿಪರೀತ ನಂಬುವ ಯಡ್ಯೂರಪ್ಪನವರು ಧನುರ್ಮಾಸದಲ್ಲಿ ತಮ್ಮ ಸಂಪುಟ ಪನರ್ರಚನೆಗಾಗಲಿ, ವಿಸ್ತರಣೆಗಾಗಲಿ ಕೈಹಾಕಲಾರರು ಅನ್ನೋ ಮಾತನ್ನು ಅವರ ಒಡನಾಡಿಗಳು ಹೇಳುತ್ತಿದ್ದಾರೆ. ಧನುರ್ಮಾಸದಲ್ಲಿ ಯಾವ ಶುಭಕಾರ್ಯಗಳು ನಡೆಯಬಾರದು, ನಡೆದರೆ ವಿಘ್ನ ಎದುರಾಗಲಿದೆ ಎಂಬ ಮೂಢನಂಬಿಕೆಯೇ ಇದಕ್ಕೆ ಕಾರಣ. ಈಗ ಶುರುವಾಗುವ ಇದು ಜನವರಿ ಮೂರನೇ ವಾರದಲ್ಲಿ ಮಕರ ಸಂಕ್ರಮಣದೊಂದಿಗೆ ಮುಕ್ತಾಯವಾಗಲಿದೆ. ಅಲ್ಲೀವರೆಗೂ ಯಡ್ಯೂರಪ್ಪನವರ ಸಂಪುಟದ ಗಾತ್ರ ಹಿಗ್ಗದು ಎಂದೇ ಅಂದಾಜಿಸಲಾಗಿದೆ. ಹಾಗೇನಾದರು ಆದಲ್ಲಿ ಚುನಾವಣೆಯಲ್ಲಿ ಗೆದ್ದು ಅರ್ಹರಾದರು ಮಂತ್ರಿಭಾಗ್ಯ ಕಾಣಲು ಮಾಜಿ ಅನರ್ಹರು ಒಂದು ತಿಂಗಳು ವಿರಹವೇದನೆ ಅನುಭವಿಸದೆ ವಿಧಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...