Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

ಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

- Advertisement -
- Advertisement -

ಉಪಚುನಾವಣೆಯಲ್ಲಿ ಗೆದ್ದ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರು ಯಡ್ಯೂರಪ್ಪನವರ ಸಂಪುಟದಲ್ಲಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರೋದೇನೊ ನಿಜ. ಆದರೆ ಇನ್ನೂ ಒಂದು ತಿಂಗಳ ಕಾಲ ಅವರು ಮಂತ್ರಿಗಿರಿಯಿಂದ ದೂರವೇ ಉಳಿಯಬೇಕಾದ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಅವರ ಪಾಲಿಗೆ ವಿಲನ್ ಆಗಿ ಕಾಡುತ್ತಿರೋದು ಡಿಸೆಂಬರ್ ಮಾಹೆಯ ಮಧ್ಯಂತರದಲ್ಲಿ ಶುರುವಾಗಲಿರುವ ಧನುರ್ಮಾಸವಂತೆ!

ಹೌದು, ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಯಡ್ಯೂರಪ್ಪನವರು ದಿಲ್ಲಿಗೆ ದೌಡಾಯಿಸಿ, ಅಮಿತ್ ಶಾಗೆ ವರದಿ ಒಪ್ಪಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ಬರಬೇಕಿತ್ತು. ಈ ವಾರಾಂತ್ಯದೊಳಗೆ ನೂತನ ಸಚಿವರ ಪ್ರಮಾಣ ವಚನವೂ ಮುಗಿದು ಖಾತೆ ಹಂಚಿಕೆಯಾಗಬೇಕಿತ್ತು. ಆದರೆ ಅದ್ಯಾಕೋ, ಬಂಪರ್ ಬೆಳೆ ತೆಗೆದರು ಸಹಾ ದಿಲ್ಲಿ ನಾಯಕರಿಂದ ಯಡ್ಯೂರಪ್ಪನವರಿಗೆ ಇದುವರೆಗೆ ಬುಲಾವ್ ಬಂದಿಲ್ಲ. ನವದೆಹಲಿಯ ಫರ್ಮಾನು ಇಲ್ಲದೆ ಸ್ವಂತಕ್ಕೆ ಸಂಪುಟ ವಿಸ್ತರಿಸುವ ಸ್ವಾತಂತ್ರ್ಯವೂ ಯಡ್ಯೂರಪ್ಪನವರಿಗೆ ಇಲ್ಲ. ಹಾಗಾಗಿ, ನಿನ್ನೆ ಮಾಧ್ಯಮದವರು ನೀವು ಯಾವಾಗ ದಿಲ್ಲಿಗೆ ಹೋಗುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಇನ್ನು ಮೂರ್‍ನಾಲ್ಕು ದಿನವಂತೂ ನಾನು ದಿಲ್ಲಿ ಕಡೆಗೆ ಹೋಗಲ್ಲ, ಯಾವಾಗ ರಾಷ್ಟ್ರೀಯ ಅಧ್ಯಕ್ಷರು ಕರೀತಾರೋ (ಅಮಿತ್ ಶಾ) ಆಗ ಹೋಗ್ತೀನಿ. ಬಹುಶಃ ಮುಂದಿನ ವಾರವೇ ನನಗೆ ದಿಲ್ಲಿಗೆ ಹೋಗಲು ಸಾಧ್ಯವಾಗುತ್ತೇನೊ ಎಂಬ ಉತ್ತರ ಕೊಟ್ಟಿದ್ದಾರೆ.

ಇದೇ ೧೬ರಂದು (ಬರುವ ಸೋಮವಾರದಿಂದ) ಧನುರ್ಮಾಸ ಶುರುವಾಗಲಿದೆ. ಕವಡೆ ಶಾಸ್ತ್ರ, ಜ್ಯೋತಿಷ್ಯ, ಪಂಚಾಂಗಗಳನ್ನು ವಿಪರೀತ ನಂಬುವ ಯಡ್ಯೂರಪ್ಪನವರು ಧನುರ್ಮಾಸದಲ್ಲಿ ತಮ್ಮ ಸಂಪುಟ ಪನರ್ರಚನೆಗಾಗಲಿ, ವಿಸ್ತರಣೆಗಾಗಲಿ ಕೈಹಾಕಲಾರರು ಅನ್ನೋ ಮಾತನ್ನು ಅವರ ಒಡನಾಡಿಗಳು ಹೇಳುತ್ತಿದ್ದಾರೆ. ಧನುರ್ಮಾಸದಲ್ಲಿ ಯಾವ ಶುಭಕಾರ್ಯಗಳು ನಡೆಯಬಾರದು, ನಡೆದರೆ ವಿಘ್ನ ಎದುರಾಗಲಿದೆ ಎಂಬ ಮೂಢನಂಬಿಕೆಯೇ ಇದಕ್ಕೆ ಕಾರಣ. ಈಗ ಶುರುವಾಗುವ ಇದು ಜನವರಿ ಮೂರನೇ ವಾರದಲ್ಲಿ ಮಕರ ಸಂಕ್ರಮಣದೊಂದಿಗೆ ಮುಕ್ತಾಯವಾಗಲಿದೆ. ಅಲ್ಲೀವರೆಗೂ ಯಡ್ಯೂರಪ್ಪನವರ ಸಂಪುಟದ ಗಾತ್ರ ಹಿಗ್ಗದು ಎಂದೇ ಅಂದಾಜಿಸಲಾಗಿದೆ. ಹಾಗೇನಾದರು ಆದಲ್ಲಿ ಚುನಾವಣೆಯಲ್ಲಿ ಗೆದ್ದು ಅರ್ಹರಾದರು ಮಂತ್ರಿಭಾಗ್ಯ ಕಾಣಲು ಮಾಜಿ ಅನರ್ಹರು ಒಂದು ತಿಂಗಳು ವಿರಹವೇದನೆ ಅನುಭವಿಸದೆ ವಿಧಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...