HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...