HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...