HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...