Homeಅಂಕಣಗಳುಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

ಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

- Advertisement -
 ಯಾಹೂ |
ನೇರ ನಡೆ ನುಡಿಗೆ ಹೆಸರಾಗಿದ್ದ ಜಿ. ಮಾದೇಗೌಡರು, ಜೆಡಿಎಸ್ ಕಡೆಯಿಂದ ಹಣ ಬರುತ್ತದೆಂದು ಮಂಡ್ಯದ ಗಾಂಧಿಭವನದ ಎದುರು ಕುಳಿತು ಕಾದು ಸಾಕಾಗಿ, ಕಡೆಗೆ ಪುಟ್ಟರಾಜನಿಗೆ ಫೋನು ಮಾಡಿ ‘ಎಲ್ಲೊದುಡ್ಡು’ ಎಂದರಂತಲ್ಲಾ, ಪುಟ್ಟರಾಜನಿಗೆ ಮಾದೇಗೌಡರಿಂದ ಸಾಲ ಪಡೆದು ಬಡ್ಡಿಯನ್ನು ಕೊಡದೆ ಕುಂತವನ ದನಿಯಲ್ಲಿ, “ಅಪ್ಪಾಜಿಆರೇಂಜ್ ಮಾಡ್ತಿನಿ” ಎಂದುಗೋಗರೆದಂತರಲ್ಲಾ.ಮಾದೇಗೌಡರು, ಮಂಡ್ಯದ ಸೊಗಡಿಗೆ ಹೆಸರಾದವರು, ಗಾಂಧಿಮಾರ್ಗಿ ಬೇರೆ, ಅದಕ್ಕಾಗಿ ಗಾಂಧಿ ಭವನ ನಿರ್ಮಿಸಿ ಇಳಿ ಹೊತ್ತಿನಲ್ಲಿ ಅದರ ಮುಂದೆ ಕುಳಿತು ಈ ನಾಡಿನ ಬಗ್ಗೆ ಚಿಂತಿಸದವರು. ಆದರೆ ಸ್ವಂತದ ಬಗ್ಗೆ ತುಂಬಾ ಯೋಚಿಸಿ ದವರು. ಈ ಹಿಂದೆ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ದೂರಿ ಕಾಂಗ್ರೆಸ್ ತೊರೆದು ಬಿ.ಜೆ.ಪಿ ಅವರಿಗೆ ಒಗ್ಗಲಿಲ್ಲ. ಮತ್ತೆ ಕಾಂಗ್ರೆಸ್‍ಗೆ ಮರಳಿ ಮಗನ ಕೈಲಿ ಹಣ ಕಳಿದು. ಇಲ್ಲ ಯಾರು ಕೊಡ್ತಾರೊ ಅವುರೆಸರೇಳು ನಾವೇ ವಸೂಲು ಮಾಡ್ತಿವಿ” ಎಂದಿರೋದು .ವಯಸ್ಸಾದಂತೆ ತಲೆಯೊಳಗಿನ ಸಿದ್ಧಾಂತಗಳು ಸಾಯುತ್ತ, ಕುಟುಂಬದ ವ್ಯಾಮೋಹ ಅಮರಿಕೊಳ್ಳುವುದು, ಈ ಮಾದೇಗೌಡನನ್ನ ಬಿಡಲಿಲ್ಲವಲ್ಲಾ. ಅದೇನಾದರಾಗಲಿ. ಕಡೇಗಳಿಗೆಯಲ್ಲಿ ಚಿಲ್ಲರೆ ಕಾಸಿಗೆ ಪುಟ್ಟರಾಜನನ್ನ ಕೇಳಿ ಮಾದೇಗೌಡನ ಮಾನ ಮೂರು ಕಾಸಿಗೆ ಹರಾಜಾಯ್ತಲ್ಲಾ ಥೂತ್ತೆರಿ.
ಮಂಡ್ಯ ಚುನಾವಣೆಯ ರಂಗು ತಾರಕಕ್ಕೇರಿರುವುದರ ದ್ಯೋತಕವಾಗಿ, ಎನ್.ಡಿ.ಟಿ.ವಿ.ಯ ಮಾಯಾ ಶರ್ಮಾ ಸುಮಲತಾರ ಹಿಂದೆತಿರುಗುತ್ತಿರುವುದು ಗೊತ್ತಾಗಿ, ಮಾಯಾಗೆ ಫೋನ್ ಮಾಡಿದರೆ ಅವರು ಫೋನ್ ತೆಗೆಯಲಿಲ್ಲ. ಎನ್.ಡಿ ಟಿವಿ ಮಾಯಾ ಇವರಿಗಿಂತಲೂ ನಮ್ಮ ವಾಟಿಸ್ಸೆ ಸರಿಯಾಗಿ ಸುದ್ದಿ ನೀಡಲು ಸೂಕ್ತ ವ್ಯಕ್ತಿಯೆಂದು ಫೋನ್ ಮಾಡಲಾಗಿರಿಂಗಾಯ್ತು, ರಿಂಗ್‍ಟೂನ್ “ಬಲೆ ಚಾನ್ಸಿದೆ, ಲಕ್ಕಿ ಚಾನ್ಸಿದೆ, ಬಲೆ ಚಾನ್ಸಿದು’ ‘ಗುಡ್‍ಯುವುನಿಂಗ್ ಸಾರ್’
“ಎಲ್ಲಿದ್ದಿ ವಾಟಿಸ್ಸೆ”
“ಬಿಂಡಿಗನವಿಲೆ ಹೆಸರು ಕೇಳಿದ್ದಿರ ಸಾರ್.”
“ಗೊತ್ತು ಗರುಡಾಚಾರ್ರೂರು”
“ಅಷ್ಟೆ ಅಲ್ಲ ಸಾರ್. ಅಣು ವಿಜ್ಞಾನಿ, ರಾಜಾರಾಮಣ್ಣನ ಊರು. ಸಿನಿಮಾ ಡೈರೆಕ್ಟರು, ಬಿ.ಎಸ್.ರಂಗನ್‍ಊರಿದು”
“ಹೌದಾ”
“ಇಂತ ಪ್ರತಿಭಾವಂತ್ರೆ ಒಂದು ಡಜನ್ ಇರೊ ಊರಿದು”
“ಅಷ್ಟೊಂದು ಪ್ರತಿಭಾವಂತ್ರಿದ್ದರ”
“ನಾವಲ್ಲ ಸಾ ಅವುರ್ಯಲ್ಲ ಅಯ್ಯಂಗಾರ್ರು”
“ಸರಿ ಬುಡು”
“ಈ ಊರಿಗೆ ನಿಖಿಲ್ ಬತ್ತನೆಅಂತ ಭಾರಿಜನ ಸೇರ್ಯವುರೆ”
“ಅಷ್ಟೊಂದು ಜನ ಬಂದವುರಾ”
“ಪರೆಡ್‍ಗೆ ತವುಜೆಂಡಿಂದ ತ್ರೀ ಅಂಡ್ರೆಡ್‍ವರಿಗೂ ಬಟಾವಡೆ ಆಗ್ಯದೆ ಸಾ”
“ಇನ್ನ ಓಟಿಗೆಷ್ಟು ಕೊಡ್ತಾರಪ್ಪ”
“ಅದ ಹೇಳಕ್ಕೆ ಬರದಿಲ್ಲ ಸಾರ್. ಪ್ರತಿಎಮ್ಮೆಲ್ಲೆಗೂ 25 ಕೋಟಿ ಟಾರ್ಗೆಟ್ ಕೊಟ್ಟವುನಂತೆ ಕುಮಾರಣ್ಣ”
“ಅಂದ್ರೆ ಅವುರು ಕೈಯಿಂದ ಖರ್ಚು ಮಾಡಬೇಕಾ”
“ಪುಟ್ಟರಾಜ ತಮ್ಮಣ್ಣ ನಾವೇ ಹಾಯ್ಕಂಡು ಖರ್ಚು ಮಾಡ್ತಿವಿ ಅಂದಿದ್ದರಂತೆ”
“ಅನ್ನಲೇಬೇಕು ಬುಡು. ಇದೇ ತಮ್ಮಣ್ಣನ ಆಸ್ತಿ ವಿಷಯದಲ್ಲಿ ಮಾದೇಗೌಡ್ರು ಹಿಂದೆನೆ ಹೋರಾಡಿದ್ರು”
“ಮಾದೇಗೌಡ ಬುಡಿ ಸಾ. ಅವುನು ಮಾತಾಡಿದ್ರೆ ಅಂಬರೀಶು “ಲೇ ಮುದುಕ ಸುಮ್ಮನಿರು ಇಲ್ಲ ಅಂದ್ರೆ ನಿನ್ನ  ಕತ್ತಿಸಗತಿನಿ ಅಂತಿದ್ನಂತೆ”
“ತಮಾಸಿಗೆ ಅಂಗಂತಿದ್ರು”
“ತಮಾಸಿನೆ ಆದ್ರು ಈ ಮುದುಕ ಹಾಳಾದನಲ್ಲ ಸಾ”
“ಏನು ಹಾಳಾಗಿಲ್ಲ. ಚುನಾವಣೆ ಕರ್ಚಿಗೆ ದುಡ್ಡು ಕೇಳ್ಯವುರೆ ಅಷ್ಟೆ”
“ಮಾದೇಗೌಡ ಪುಟ್ಟರಾಜನ್ನ ಕೇಳಿದಕ್ಕಿಂತ, ಕುಮಾರಣ್ಣನ್ನ ಕೇಳಬೇಕಾಗಿತ್ತು ಸಾ”
“ಕುಮಾರಣ್ಣ ಯಮ್ಮೆಲ್ಲೆಗಳಿಗೆ ವಯಿಸಿಬುಟ್ಟವುನೆ”
“ಮಗನ್ನ ಗೆಲ್ಲಿಸಿಕೊಂಡು ಬರೊ ಜವಾಬ್ದಾರಿಯ ಎಮ್ಮೆಲ್ಲೆಗಳೇ ವಯಿಸಿಕೊಂಡವಂತಲ್ಲ ಸಾ. ಪಾಪ ಆ ಹುಡುಗನಿಗೆ ಬಾಸಣ ಬರವಿಲ್ಲ”
“ವ ಪರವಾಗಿಲ್ಲ ಮಾತಾಡ್ತನೆ”
“ಏನು ಮಾತಾಡ್ತನೆ ಸಾ. ನಾನು ಕುಮಾರಸ್ವಾಮಿ ಹೊಟ್ಟೆಲುಟ್ಟಕ್ಕೆ ಪುಣ್ಯ ಮಾಡಿದ್ದೆಅಂತದೆ.ನಮ್ಮಪ್ಪ ಮಂಡ್ಯಕೆಎಂಟು ಸಾವುರ ಕೋಟಿ ಕೊಟ್ಟವುನೆ ಅಂತದೆ. ನಮ್ಮ ಪಾರ್ಟಿ ಕಾರ್ಯಕರ್ತರಿಗೆ ಯಾರಾದ್ರು ಮೈ ಮುಟ್ಟಿದ್ರೆ ಹುಶಾರು ಅಂದರೆ. ಎಲ್ಲಿತ್ತು ಈ ಕರ್ಮ”
“ಇನ್ನು ಮುಂದೈತೆ ನಿಮಗ್ಯಲ್ಲ”
“ಯಾಕೊ ಅಂಗೆ ಕಾಣ್ತದೆ ಸಾ. ಈ ದ್ಯಾವೇಗೌಡ ಮಕ್ಕಳು ಮರಿನ್ಯಲ್ಲ ರಾಜಕಾರಣಕ್ಕೆ ತರದೇ ಆಗಿದ್ರೆ, ಅವುಕೆ ಒಳ್ಳೆ ಮಾತು, ನಡವಳಿಕೆ, ವಿದ್ಯೆ, ಬುದ್ಧಿ, ಕಲಿಸಿ ಕಳಿಸಬೇಕಾಗಿತ್ತು ಸಾ”
“ದ್ಯಾವೇಗೌಡ್ರೆ ಅಂಗಿದ್ದ ಮೇಲೆ ಅವುಕೆಲ್ಲಿ ಕಲಿಸ್ಯಾರು”
“ಅದು ಸರಿನೆ ಬುಡಿ, ಗೌಡ್ರು ಪಾರ್ಟಿ ಸಿದ್ಧಾಂತಕ್ಕೆ ಒಗ್ಗಿಕಳೊ ಬದ್ಲು ಪಾರ್ಟಿನೆತನಿಗೆ ಬೇಕಾದಂತೆ ಬಗ್ಗಿಸಿಗಂಡ್ರು”
“ಪರವಾಗಿಲ್ಲ ಗೌಡ್ರು ಬಗ್ಗೆ ತಿಳಿಕಂಡಿದ್ದಿ”
“ಯಾವುದಾದ್ರು ಯೂನಿವರ್ಸಿಟಿ ಪರಮಿಷನ್ ಕೊಟ್ರೆ ಡಾಕ್ಟರೇಟ್ ಮಾಡನ ಅಂತ ಇದ್ದಿನಿ ಸಾ”
“ಹಂಪೆ ಯೂನಿವರ್ಸಿಟಿಲಿ ನೊಂದಾಯಿಸಿ ಮಾಡು”
“ಹಂಪೆ ಅಂದೇಟಿಗೆ ಗೆಪ್ತಿಗೆ ಬತ್ತು ಸಾ. ಅಲ್ಲೊಬ್ಬಳು ಮಲ್ಲಿಕಾಗಂಟಿ ಅಂತ ಇದ್ಲು ಈಗ್ಲು ಇದ್ದಳಾ”
“ಇಲ್ಲ ಹೋದ್ಲು. ವಿಶಭಟ್ಟಗೊತ್ತ ನಿಂಗೆ”
“ಗೊತ್ತು ಸಾ. ಇಲ್ಲೆ ನಮ್ಮ ನಾಗ್ತಳ್ಳಿ ಚಂದ್ರನ ಬಗ್ಗೆ ಮಾತಾಡಕ್ಕೆರ ಬಂದಿದ್ದ. ಹುಟ್ಟ ಕಳ್ಳಿದ್ದಂಗಿದ್ದ”
“ಅವುನ್ನ ಈ ನಿಮ್ಮಗಂಟೆ ಸಮಾರಂಭಕ್ಕೆ ಕರೆದಿದ್ಲು”
“ಕರಿಬಾರ್ದ”
“ಕಳ್ಳನಂಗಿದ್ದ ಅಂತಿ ಕರಿಬಾರ್ದ ಅಂತಿ ಯಲ್ಲಯಾ. ಆ ಹುಟ್ಟು ಸುಳ್ಳಪ್ಪ ಕ್ಯಟ್ಟಚೆಡ್ಡಿ”
“ಚೆಡ್ಡಿಲಿ ವಳ್ಳೆ ಚೆಡ್ಡಿನೂ ಇದ್ದವಾ”
“ಅವೆ ಆದ್ರೆ ಇವುನು ಮಾತ್ರ ವಿಶಪಾತಕ .ಇಂಥೊನ್ನ ಆ ಗಂಟಿ ಸಮಾರಂಬಕ್ಕೆ ಕರಿಸಿಗಂಡು ಸರಿಯಾಗಿ ಉಗಿಸಿಗಂಡ್ಳು”
“ನಾವು ಯಾರ ಪರನೂ ಮಾತಾಡಂಗಿಲ್ಲ ಸಾ. ಯಾರು ಯಾವಟೈಮಲ್ಲಿ ಬದ್ಲಾಯ್ತಾರೊ ಏನೊ”
“ಬದಲಾವಣೆ ಕಾಲದ ನಿಯಮ”
“ಅದು ಮನುಸುನ ಮನಸಿಗೂ ಅನ್ವಯಿಸ್ತದಾ”
“ಊ ಮತ್ತೆ ಕರ್ನಾಟಕದಲ್ಲಿ ಈಗ ಯಂತ ಬದಲಾವಣೆ ಆಗ್ಯದೆಗೊತ್ತ”
“ಗೊತ್ತು ಸಾ. ಈ ಡಿಕೆಶಿ, ಕುಮಾರಸ್ವಾಮಿ ಹೊಡದಾಡಿಕಂಡೆ ಸತ್ತೊಯ್ತರೆ ಅನಕಂಡಿದ್ದೆ. ಈಗ ನೋಡಿದ್ರೆ ದ್ಯಾವೇಗೌಡನ ಹಣೆಗೆ ಅಕ್ಷತೆ ಆಗ್ಯವುರೆ”
“ಅಕ್ಷತೆನೆ”
“ಊ ಸಾ. ಡಿಕೆಶಿ ಹರಸಣ ಅಕ್ಕಿ ಸೇರಿದ್ರೆ ಅಕ್ಷತೆ ಅಂದ. ಅದ ಯಾರಿಗಿಡಬೇಕು ದ್ಯಾವೇಗೌಡನಿಗೆ ತಾನೆ”
“ನಿಜಕಣಯ್ಯ”
“ಇನ್ನ ಅಹಿಂದ ಸಭೆಲಿ ಈ ಸಿದ್ದರಾಮಯ್ಯ ದ್ಯಾವೇಗೌಡರನ್ನ ಬೋದಿದ್ದ ನೋಡಿದ್ರೆ, ಇನ್ನ ಮುಗಿತು. ಈ ಜಲುಮದಲ್ಲಿ ಇವುರು ಹಿಂಗೇ ಸತ್ತೋಯ್ತರೆ ಅನ್ನಕಂಡಿದ್ದೆ. ತೀರ ಇತ್ತೀಚಿಗೆ, ಈ ಸಿದ್ದರಾಮಯ್ಯನಂತ ನೀಚ ಮುಕ್ಯಮಂತ್ರಿನ ನೋಡೇ ಇಲ್ಲ ಅಂದ ದ್ಯಾವೇಗೌಡ, ಈಗ ನೋಡಿದ್ರೆ ಜಾತ್ರೆಗೆ ರೆಡಿಯಾಗಿರೋ ಜೋಡೆತ್ತಿನಂಗೆ ಜ್ವತೆಲೆ ನಿಂತವುರೆ ಇದಕೇನೇಳ್ತಿರಿ”
“ಒಳ್ಳೆ ಬದಲಾವಣೆ”
“ಯಾಕೆ ಸಾರ್’
“ಮೋದಿ ಟೀಮಂಗೆ ಯಲ್ಲ ಒಂದಾಗಬೇಕಾಗಿದೆ”
“ಅದೇನೂ ನಿಜಸಾ. ಈ ಹಾಳು ಚೆಡ್ಡಿಗಳು ಈಗ ಏನೇಳ್ತ ಅವುರೆಗೊತ್ತೆ, ಮೋದಿ ಏನಾರ ಸೋತ್ರೆ ಆ ಪಾಕೀಸ್ತಾನದೋರು ನಮ್ಮ ಮ್ಯಾಲೆ ಬಿದ್ದು ಇಚಿಡಿ ಯಾದೇಸನೆಗೆದ್ದ ಕತ್ತರಂತೆ”
“ವಳ್ಳೆದಾಯ್ತಲ್ಲಯ್ಯ”
“ಇದೇನ್ ಸಾ ಹಿಂಗೇಳ್ತಿರಿ”
“ಪಾಕಿಸ್ತಾನ ದೂರು ಇಂಡಿಯಾಗೆದ್ದು ಕೂಡ್ಳೆ ಅದೂ ಇಂಡಿಯಾ ಆಯ್ತದಲ್ಲಯ್ಯ”
“ಅಂಗಾದ್ರೆ ಗೆದ್ಕಳ್ಳಿ ಬುಡಿ ಸಾ”
“ಥೂತ್ತೆರಿ”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...