Homeಪ್ರಪಂಚ'ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ' - ನ್ಯೂಯಾರ್ಕ್ ಟೈಮ್ಸ್

‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

- Advertisement -
(2018 ಏಪ್ರಿಲ್ 16ರಂದು ಪ್ರಕಟವಾದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಸಂಪಾದಕೀಯದ ಆಯ್ದ ಭಾಗ)
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿರಂತರವಾಗಿ ಟ್ವೀಟ್ ಮಾಡುತ್ತ ತಮ್ಮನ್ನು ತಾವು ಒಬ್ಬ ಪ್ರತಿಭಾವಂತ ವಾಗ್ಮಿ ಎಂದು ಸಾಬೀತುಪಡಿಸುತ್ತಲೇ ಇದ್ದಾರೆ. ಆದರೆ ಭಾರತೀಯ ಜನತಾ ಪಕ್ಷದ ಅಡಿಪಾಯದಲ್ಲಿ ಸದಾ ಸನ್ನದ್ಧವಾಗಿರುವ ಅದರ ಅಂಗಸಂಸ್ಥೆಗಳಾದ ಕೋಮುವಾದಿ ಸಂಘಟನೆಗಳು, ಉಗ್ರ ರಾಷ್ಟ್ರೀಯವಾದಿಗಳು ಅಲ್ಲಿನ ಅಲ್ಪಸಂಖ್ಯಾತರನ್ನು ಮಹಿಳೆಯರನ್ನು ಕ್ರೂರವಾಗಿ ಹಿಂಸಿಸುತ್ತಿರುವಾಗ ಮಾತ್ರ ಮೋದಿಯವರ ಬಾಯಿ ಕಟ್ಟಿಬಿಡುತ್ತದೆ, ಅವರ ಧ್ವನಿ ಹೊರಡುವುದೇ ಇಲ್ಲ. ಕಳೆದ ಜನವರಿಯಲ್ಲಿ ಜಮ್ಮುವಿನ ಎಂಟು ವರ್ಷದ ಬಾಲಕಿಯನ್ನು ಆರು ಜನ ಅತ್ಯಾಚಾರ ಮಾಡಿ ಕೊಂದು ಹಾಕಿದ್ದರು… ಇಂಥಾ ಭಯಾನಕ ಘಟನೆಗೆ ಕಾರಣರಾದವರನ್ನು ಸಮರ್ಥಿಸಲು ನರೇಂದ್ರ ಮೋದಿಯವರ ಪಕ್ಷದ ಮಂತ್ರಿಗಳೇ ಮೆರವಣಿಗೆ ಹೊರಟರು. ಭಾರತದ ಜನ ತಮ್ಮದೇ ಸರಕಾರದ ಈ ಕಠೋರ ನಿಲುವನ್ನು ಖಂಡಿಸಿ ಈಗ ಬೀದಿಗಿಳಿದಿದ್ದಾರೆ. ಆದರೆ ಮಿಸ್ಟರ್ ಮೋದಿ ಮಾತ್ರ ಈ ಹೀನ ಪ್ರಕರಣಗಳ ಹಿಂದಿರುವ ತಮ್ಮದೇ ಬೆಂಬಲರಿಗರ ಕುರಿತು ಮಾತನಾಡುತ್ತಲೇ ಇಲ್ಲ.
…. ಅಲೆಮಾರಿ ಕುರಿಗಾಹಿ ಸಮುದಾಯವನ್ನು ಹೆದರಿಸಿ ಓಡಿಸಲು ಆ ಎಂಟು ವರ್ಷದ ಬಾಲಕಿ ಆಸೀಫಾಳನ್ನು ಜನವರಿಯಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಒಂದು ಹಿಂದೂ ದೇವಾಲಯದಲ್ಲಿ ಅನೇಕ ದಿನಗಳವರೆಗೆ ಕೂಡಿ ಹಾಕಿ ಅತ್ಯಾಚಾರ ಮಾಡಿ ನಂತರ ಕೊಂದು ಹಾಕಲಾಯಿತು. ಈ ಕೃತ್ಯ ಮಾನವನ ನೈತಿಕ ಭ್ರಷ್ಟತೆಯ ಅಧಃಪತನವನ್ನು ಸಂಕೇತಿಸುತ್ತದೆ. ಇಷ್ಟೆಲ್ಲ ನಡೆದರೂ, ಜನ ಬೀದಿಗೆ ಇಳಿಯುವವರೆಗೂ ಮೋದಿ ಈ ಭಯಾನಕ ಕೃತ್ಯದ ಕುರಿತು ಬಾಯಿಬಿಡಲು ಸಿದ್ಧರಿರಲಿಲ್ಲ.
…. ಜಮ್ಮು ಕಾಶ್ಮೀರದ ಸಮ್ಮಿಶ್ರ ಸರ್ಕಾರದಲ್ಲಿ ಬಿಜೆಪಿ ಪಕ್ಷದ ಇಬ್ಬರು ಮಂತ್ರಿಗಳು ಈ ಬಂಧಿತ ಆಪಾದಿತರ ಪರವಾಗಿ ನಡೆದ ರ್ಯಾಲಿಗಳಲ್ಲಿ ಪಾಲ್ಗೊಂಡು ಬೀದಿಗಿಳಿದರು. ಆಪಾದಿತರ ಪರವಾದ ಈ ರ್ಯಾಲಿಗಳ ಮುಖ್ಯ ಉದ್ದೇಶ, ಈ ಪ್ರಕರಣದ ತನಿಖೆಯನ್ನ ಸ್ಥಳೀಯ ಆಡಳಿತದಲ್ಲಿರುವ ಮುಸ್ಲಿಂ ಅಧಿಕಾರಿಗಳಿಗೆ ವಹಿಸದೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಸಿಬಿಐಗೆ ವಹಿಸಬೇಕು ಎಂಬುದೇ ಆಗಿತ್ತು. ಪೊಲೀಸರು ಸದರಿ ಪ್ರಕರಣದ ಪ್ರಥಮ ಮಾಹಿತಿ ವರದಿಯನ್ನು ಮತ್ತು ಕೋರ್ಟಿನಲ್ಲಿ ಚಾರ್ಜ್‍ಷೀಟ್ ಹಾಕುವುದನ್ನೂ ಅಲ್ಲಿನ ಹಿಂದೂ ವಕೀಲರು ತಡೆದಿದ್ದರು….
ತನ್ನದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಇನ್ನೊಂದು ಪ್ರಭಾವಿ ರಾಜ್ಯವಾದ ಉತ್ತರ ಪ್ರದೇಶದ ಉನ್ನಾವೋದಲ್ಲಿ ತನ್ನದೇ ಪಕ್ಷದ ಶಾಸಕನೊಬ್ಬ ಅತ್ಯಾಚಾರದ ಗಂಭೀರ ಪ್ರಕರಣದಲ್ಲಿ ಆಪಾದಿತನಾಗಿದ್ದರೂ ಮಿಸ್ಟರ್ ಮೋದಿ ಮಾತನಾಡಲು ಬಯಸಲಿಲ್ಲ…. ತನ್ನ ಮೇಲೆ ಸದರಿ ಶಾಸಕ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆ ಪುಟ್ಟ ಹುಡುಗಿ ಪೊಲೀಸರಿಗೆ ದೂರು ನೀಡಲು ಹೋದರೂ ಸಂಬಂಧಿಸಿದ ಠಾಣಾಧಿಕಾರಿ ಆ ಶಾಸಕನ ವಿರುದ್ಧದ  ದೂರನ್ನು ದಾಖಲಿಸಿಕೊಳ್ಳದೆ ನಿರ್ಲಕ್ಷಿಸಿದ. ಇಷ್ಟೇ ಅಲ್ಲದೆ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯನ್ನು ಸುಳ್ಳು ಕೇಸಿನ ಮೇಲೆ ಅರೆಸ್ಟ್ ಮಾಡಲಾಯಿತು. ಪೊಲೀಸ್ ಕಸ್ಟಡಿಯಲ್ಲಿದ್ದ ಬಾಲಕಿಯ ತಂದೆಯನ್ನು ಅತ್ಯಾಚಾರಿ ಶಾಸಕ ಮತ್ತು ಅವನ ತಮ್ಮ ಹೊಡೆದು ಸಾಯಿಸಿದರು.
ಹಲವು ವಾರಗಳ ನಂತರ, ಮೊನ್ನೆ ಶುಕ್ರವಾರ ಮೋದಿ `ಈ ಪ್ರಕರಣಗಳು ದೇಶಕ್ಕೆ ಒಳ್ಳೆಯ ಹೆಸರನ್ನು ತರುವುದಿಲ್ಲ, ಇವು ಅತ್ಯಂತ ನಾಚಿಕೆಗೇಡಿನ ಪ್ರಕರಣಗಳು, ನಮ್ಮ ಹೆಣ್ಣುಮಕ್ಕಳಿಗೆ ನ್ಯಾಯ ಸಿಕ್ಕೇ ಸಿಗುತ್ತದೆ’ ಎಂಬ ಲೋಕಾಭಿರಾಮದ ಮಾತುಗಳನ್ನು ಆಡಿದ್ದಾರೆ. ಗಾಳಿಯಲ್ಲಿ ಕಡ್ಡಿಯಾಡಿಸಿದಂತಹ ಮೋದಿಯ ಮಾತುಗಳು ಈ ಕ್ರೂರ ಹಿಂಸೆಯ ಪ್ರಕರಣಗಳನ್ನು ಸಾಮಾನ್ಯ ಕ್ರೈಮ್ ಮಟ್ಟಕ್ಕೆ ಇಳಿಸಿದ್ದವು. ಬಿಜೆಪಿ ಪಕ್ಷದ ಅಂಗಸಂಘಟನೆಗಳಾದ ಹಿಂದೂ ಮಿಲಿಟಂಟ್ ಗುಂಪುಗಳಿಗೆ ಸೇರಿದ ಹಂತಕರು, ತಾವು ಪವಿತ್ರವೆಂದು ಭಾವಿಸುವ ಹಸುಗಳನ್ನು ಕೊಂದು ತಿಂದಿದ್ದಾರೆ ಎಂದು ಭಾರತದ ಶ್ರೇಣೀಕರಣದ ಕೆಳಹಂತದಲ್ಲಿರುವ ದಲಿತರ ಮೇಲೆ ಮತ್ತು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸಿ ಅನೇಕರನ್ನು ಕೊಂದು ಹಾಕಿದ್ದಾರೆ. ಇಂತಹ ಭೀಕರ ಹಿಂಸಾ ಕೃತ್ಯಗಳು ನಡೆದರೂ ಮೋದಿ ತಮ್ಮ ದಿವ್ಯ ಮೌನದ ಆಚೆಗೆ ಬರುವುದಿಲ್ಲ.
ಮೋದಿಯ ಈ ಮೌನ ಅತ್ಯಂತ ಗೊಂದಲಮಯ ಮತ್ತು ಅವರ ಶೋಚನೀಯ ಮನಃಸ್ಥಿತಿಯ ದ್ಯೋತಕ. 2012-13ರಲ್ಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಮೋದಿಗಿಂತ ಹಿಂದೆ ಆಡಳಿತ ನಡೆಸುತ್ತಿದ್ದ ಸರ್ಕಾರದ ಮುಖ್ಯಸ್ಥರು ಜನ ಬೀದಿಗಿಳಿಯುವ ಮುನ್ನವೇ ಘಟನೆಯನ್ನು ಖಂಡಿಸಿದ್ದರು ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡಿದ್ದರು. ತಮ್ಮ ಹಿಂದಿನ ಸರ್ಕಾರದ ಒಳ್ಳೆಯ ನಡವಳಿಕೆಗಳನ್ನು ಮಿಸ್ಟರ್ ಮೋದಿ ಅನುಸರಿಸಲು ಮುಂದಾದ ಉದಾಹರಣೆಗಳೇ ಇಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಅನೇಕ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಮತ್ತು ಮೋದಿಯ ಬಿಜೆಪಿ ಪಕ್ಷ 2014ರ ಚುನಾವಣೆಯಲ್ಲಿ ಹಿಂದೆಂದೂ ಪಡೆಯದಷ್ಟು ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದಿತು. ಹಿಂದಿನ ಸರ್ಕಾರದ ಹೊಣೆಗೇಡಿತನ, ಪ್ರಚ್ಛನ್ನ ಭ್ರಷ್ಟಾಚಾರಗಳನ್ನು ಟೀಕಿಸುತ್ತಲೇ ಮೋದಿ ಚುನಾವಣಾ ಪ್ರಚಾರ ಮಾಡಿದರು. ಮತ್ತು ಸಾಮಾನ್ಯ ಜನರ ಉತ್ತರದಾಯಿತ್ವವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದುಕೊಂಡಿದೆ ಎನ್ನುತ್ತಲೇ ಮಿಸ್ಟರ್ ಮೋದಿ ಅಧಿಕಾರಕ್ಕೆ ಬಂದರು.
ಆದರೆ ಇಂದು ಮಿಸ್ಟರ್ ಮೋದಿಯವರು ಒಂದು ಬಗೆಯ ಆತ್ಮವಂಚಕ ಮೌನಕ್ಕೆ ಮರೆಹೋಗಿದ್ದಾರೆ. ಜಗತ್ತಿನ ಬಹುದೊಡ್ಡ ಪ್ರಜಾತಂತ್ರ ದೇಶದ ಆರೋಗ್ಯವನ್ನು ಬಯಸುವ ಎಲ್ಲರೂ ಈ ಕಾರಣಕ್ಕಾಗಿ ಚಿಂತಿತರಾಗಿದ್ದಾರೆ.
ಮಿಸ್ಟರ್ ಮೋದಿ ತನ್ನ ಬೆಂಬಲಿಗರು ನಡೆಸುವ ಎಲ್ಲ ಅಪರಾಧಗಳ ಕುರಿತು ಮಾತಾಡಲೇಬೇಕೆಂದೇನೂ ಇಲ್ಲ. ಆದರೆ ಇತ್ತೀಚೆಗೆ ನಡೆಯುತ್ತಿರುವ ಹಿಂಸಾಕೃತ್ಯಗಳು ಮತ್ತು ಅತ್ಯಾಚಾರಗಳು ವೈಯಕ್ತಿಕ ದ್ವೇಷಗಳಿಂದ ನಡೆದಂತವುಗಳಲ್ಲ ಮತ್ತು ನಿತ್ಯ ನಡೆಯಬಹುದಾದ ಮಾಮೂಲು ಕ್ರಿಮಿನಲ್ ಕೃತ್ಯಗಳೂ ಅಲ್ಲ. ಈ ಹಿಂಸಾಚಾರಗಳು ಯೋಜನಾಬದ್ಧ ಸಂಘಟಿತ ಅಪರಾಧ ಕೃತ್ಯಗಳು. ಈ ಕೃತ್ಯಗಳ ಹಿಂದೆ ಉಗ್ರ ರಾಷ್ಟ್ರವಾದಿ ಗುಂಪುಗಳ ಸ್ಪಷ್ಟ ಕೈವಾಡಗಳಿವೆ. ಈ ಸಂಘಟಿತ ಜನವಿರೋಧಿ ಗುಂಪುಗಳು ಮಹಿಳೆಯರಲ್ಲಿ, ದಲಿತರಲ್ಲಿ, ಮುಸ್ಲಿಮರಲ್ಲಿ ಮತ್ತು ಬಡವರಲ್ಲಿ ಭಯದ ವಾತಾವರಣವನ್ನು ಮೂಡಿಸಲೆಂದೇ ಕಾರ್ಯಾಚರಣೆಗಿಳಿದಿವೆ.
ಮಿಸ್ಟರ್ ಪ್ರಧಾನ ಮಂತ್ರಿಯವರು ಸುತ್ತಲು ನೆರೆದಿರುವ ತನ್ನ ರಾಜಕೀಯ ಬೆಂಬಲಿಗರ ಕೃತ್ಯಗಳನ್ನು ನೋಡಿ ಸುಮ್ಮನಿರುವುದಲ್ಲ, ದೇಶದ ಎಲ್ಲ ಜನರ ಹಿತ ಕಾಪಾಡಲು ಮಾತಾಡಬೇಕಿದೆ ಮತ್ತು ಮುಂದಾಗಬೇಕಿದೆ.
ಸಂಪಾದಕೀಯ ಮಂಡಳಿ
ನ್ಯೂಯಾರ್ಕ್ ಟೈಮ್ಸ್, ಅಮೆರಿಕ
ಅನುವಾದ: ಎ ಎಸ್ ಪ್ರಭಾಕರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...