Homeಪ್ರಪಂಚ'ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ' - ನ್ಯೂಯಾರ್ಕ್ ಟೈಮ್ಸ್

‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

- Advertisement -
(2018 ಏಪ್ರಿಲ್ 16ರಂದು ಪ್ರಕಟವಾದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಸಂಪಾದಕೀಯದ ಆಯ್ದ ಭಾಗ)
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿರಂತರವಾಗಿ ಟ್ವೀಟ್ ಮಾಡುತ್ತ ತಮ್ಮನ್ನು ತಾವು ಒಬ್ಬ ಪ್ರತಿಭಾವಂತ ವಾಗ್ಮಿ ಎಂದು ಸಾಬೀತುಪಡಿಸುತ್ತಲೇ ಇದ್ದಾರೆ. ಆದರೆ ಭಾರತೀಯ ಜನತಾ ಪಕ್ಷದ ಅಡಿಪಾಯದಲ್ಲಿ ಸದಾ ಸನ್ನದ್ಧವಾಗಿರುವ ಅದರ ಅಂಗಸಂಸ್ಥೆಗಳಾದ ಕೋಮುವಾದಿ ಸಂಘಟನೆಗಳು, ಉಗ್ರ ರಾಷ್ಟ್ರೀಯವಾದಿಗಳು ಅಲ್ಲಿನ ಅಲ್ಪಸಂಖ್ಯಾತರನ್ನು ಮಹಿಳೆಯರನ್ನು ಕ್ರೂರವಾಗಿ ಹಿಂಸಿಸುತ್ತಿರುವಾಗ ಮಾತ್ರ ಮೋದಿಯವರ ಬಾಯಿ ಕಟ್ಟಿಬಿಡುತ್ತದೆ, ಅವರ ಧ್ವನಿ ಹೊರಡುವುದೇ ಇಲ್ಲ. ಕಳೆದ ಜನವರಿಯಲ್ಲಿ ಜಮ್ಮುವಿನ ಎಂಟು ವರ್ಷದ ಬಾಲಕಿಯನ್ನು ಆರು ಜನ ಅತ್ಯಾಚಾರ ಮಾಡಿ ಕೊಂದು ಹಾಕಿದ್ದರು… ಇಂಥಾ ಭಯಾನಕ ಘಟನೆಗೆ ಕಾರಣರಾದವರನ್ನು ಸಮರ್ಥಿಸಲು ನರೇಂದ್ರ ಮೋದಿಯವರ ಪಕ್ಷದ ಮಂತ್ರಿಗಳೇ ಮೆರವಣಿಗೆ ಹೊರಟರು. ಭಾರತದ ಜನ ತಮ್ಮದೇ ಸರಕಾರದ ಈ ಕಠೋರ ನಿಲುವನ್ನು ಖಂಡಿಸಿ ಈಗ ಬೀದಿಗಿಳಿದಿದ್ದಾರೆ. ಆದರೆ ಮಿಸ್ಟರ್ ಮೋದಿ ಮಾತ್ರ ಈ ಹೀನ ಪ್ರಕರಣಗಳ ಹಿಂದಿರುವ ತಮ್ಮದೇ ಬೆಂಬಲರಿಗರ ಕುರಿತು ಮಾತನಾಡುತ್ತಲೇ ಇಲ್ಲ.
…. ಅಲೆಮಾರಿ ಕುರಿಗಾಹಿ ಸಮುದಾಯವನ್ನು ಹೆದರಿಸಿ ಓಡಿಸಲು ಆ ಎಂಟು ವರ್ಷದ ಬಾಲಕಿ ಆಸೀಫಾಳನ್ನು ಜನವರಿಯಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಒಂದು ಹಿಂದೂ ದೇವಾಲಯದಲ್ಲಿ ಅನೇಕ ದಿನಗಳವರೆಗೆ ಕೂಡಿ ಹಾಕಿ ಅತ್ಯಾಚಾರ ಮಾಡಿ ನಂತರ ಕೊಂದು ಹಾಕಲಾಯಿತು. ಈ ಕೃತ್ಯ ಮಾನವನ ನೈತಿಕ ಭ್ರಷ್ಟತೆಯ ಅಧಃಪತನವನ್ನು ಸಂಕೇತಿಸುತ್ತದೆ. ಇಷ್ಟೆಲ್ಲ ನಡೆದರೂ, ಜನ ಬೀದಿಗೆ ಇಳಿಯುವವರೆಗೂ ಮೋದಿ ಈ ಭಯಾನಕ ಕೃತ್ಯದ ಕುರಿತು ಬಾಯಿಬಿಡಲು ಸಿದ್ಧರಿರಲಿಲ್ಲ.
…. ಜಮ್ಮು ಕಾಶ್ಮೀರದ ಸಮ್ಮಿಶ್ರ ಸರ್ಕಾರದಲ್ಲಿ ಬಿಜೆಪಿ ಪಕ್ಷದ ಇಬ್ಬರು ಮಂತ್ರಿಗಳು ಈ ಬಂಧಿತ ಆಪಾದಿತರ ಪರವಾಗಿ ನಡೆದ ರ್ಯಾಲಿಗಳಲ್ಲಿ ಪಾಲ್ಗೊಂಡು ಬೀದಿಗಿಳಿದರು. ಆಪಾದಿತರ ಪರವಾದ ಈ ರ್ಯಾಲಿಗಳ ಮುಖ್ಯ ಉದ್ದೇಶ, ಈ ಪ್ರಕರಣದ ತನಿಖೆಯನ್ನ ಸ್ಥಳೀಯ ಆಡಳಿತದಲ್ಲಿರುವ ಮುಸ್ಲಿಂ ಅಧಿಕಾರಿಗಳಿಗೆ ವಹಿಸದೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಸಿಬಿಐಗೆ ವಹಿಸಬೇಕು ಎಂಬುದೇ ಆಗಿತ್ತು. ಪೊಲೀಸರು ಸದರಿ ಪ್ರಕರಣದ ಪ್ರಥಮ ಮಾಹಿತಿ ವರದಿಯನ್ನು ಮತ್ತು ಕೋರ್ಟಿನಲ್ಲಿ ಚಾರ್ಜ್‍ಷೀಟ್ ಹಾಕುವುದನ್ನೂ ಅಲ್ಲಿನ ಹಿಂದೂ ವಕೀಲರು ತಡೆದಿದ್ದರು….
ತನ್ನದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಇನ್ನೊಂದು ಪ್ರಭಾವಿ ರಾಜ್ಯವಾದ ಉತ್ತರ ಪ್ರದೇಶದ ಉನ್ನಾವೋದಲ್ಲಿ ತನ್ನದೇ ಪಕ್ಷದ ಶಾಸಕನೊಬ್ಬ ಅತ್ಯಾಚಾರದ ಗಂಭೀರ ಪ್ರಕರಣದಲ್ಲಿ ಆಪಾದಿತನಾಗಿದ್ದರೂ ಮಿಸ್ಟರ್ ಮೋದಿ ಮಾತನಾಡಲು ಬಯಸಲಿಲ್ಲ…. ತನ್ನ ಮೇಲೆ ಸದರಿ ಶಾಸಕ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆ ಪುಟ್ಟ ಹುಡುಗಿ ಪೊಲೀಸರಿಗೆ ದೂರು ನೀಡಲು ಹೋದರೂ ಸಂಬಂಧಿಸಿದ ಠಾಣಾಧಿಕಾರಿ ಆ ಶಾಸಕನ ವಿರುದ್ಧದ  ದೂರನ್ನು ದಾಖಲಿಸಿಕೊಳ್ಳದೆ ನಿರ್ಲಕ್ಷಿಸಿದ. ಇಷ್ಟೇ ಅಲ್ಲದೆ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯನ್ನು ಸುಳ್ಳು ಕೇಸಿನ ಮೇಲೆ ಅರೆಸ್ಟ್ ಮಾಡಲಾಯಿತು. ಪೊಲೀಸ್ ಕಸ್ಟಡಿಯಲ್ಲಿದ್ದ ಬಾಲಕಿಯ ತಂದೆಯನ್ನು ಅತ್ಯಾಚಾರಿ ಶಾಸಕ ಮತ್ತು ಅವನ ತಮ್ಮ ಹೊಡೆದು ಸಾಯಿಸಿದರು.
ಹಲವು ವಾರಗಳ ನಂತರ, ಮೊನ್ನೆ ಶುಕ್ರವಾರ ಮೋದಿ `ಈ ಪ್ರಕರಣಗಳು ದೇಶಕ್ಕೆ ಒಳ್ಳೆಯ ಹೆಸರನ್ನು ತರುವುದಿಲ್ಲ, ಇವು ಅತ್ಯಂತ ನಾಚಿಕೆಗೇಡಿನ ಪ್ರಕರಣಗಳು, ನಮ್ಮ ಹೆಣ್ಣುಮಕ್ಕಳಿಗೆ ನ್ಯಾಯ ಸಿಕ್ಕೇ ಸಿಗುತ್ತದೆ’ ಎಂಬ ಲೋಕಾಭಿರಾಮದ ಮಾತುಗಳನ್ನು ಆಡಿದ್ದಾರೆ. ಗಾಳಿಯಲ್ಲಿ ಕಡ್ಡಿಯಾಡಿಸಿದಂತಹ ಮೋದಿಯ ಮಾತುಗಳು ಈ ಕ್ರೂರ ಹಿಂಸೆಯ ಪ್ರಕರಣಗಳನ್ನು ಸಾಮಾನ್ಯ ಕ್ರೈಮ್ ಮಟ್ಟಕ್ಕೆ ಇಳಿಸಿದ್ದವು. ಬಿಜೆಪಿ ಪಕ್ಷದ ಅಂಗಸಂಘಟನೆಗಳಾದ ಹಿಂದೂ ಮಿಲಿಟಂಟ್ ಗುಂಪುಗಳಿಗೆ ಸೇರಿದ ಹಂತಕರು, ತಾವು ಪವಿತ್ರವೆಂದು ಭಾವಿಸುವ ಹಸುಗಳನ್ನು ಕೊಂದು ತಿಂದಿದ್ದಾರೆ ಎಂದು ಭಾರತದ ಶ್ರೇಣೀಕರಣದ ಕೆಳಹಂತದಲ್ಲಿರುವ ದಲಿತರ ಮೇಲೆ ಮತ್ತು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸಿ ಅನೇಕರನ್ನು ಕೊಂದು ಹಾಕಿದ್ದಾರೆ. ಇಂತಹ ಭೀಕರ ಹಿಂಸಾ ಕೃತ್ಯಗಳು ನಡೆದರೂ ಮೋದಿ ತಮ್ಮ ದಿವ್ಯ ಮೌನದ ಆಚೆಗೆ ಬರುವುದಿಲ್ಲ.
ಮೋದಿಯ ಈ ಮೌನ ಅತ್ಯಂತ ಗೊಂದಲಮಯ ಮತ್ತು ಅವರ ಶೋಚನೀಯ ಮನಃಸ್ಥಿತಿಯ ದ್ಯೋತಕ. 2012-13ರಲ್ಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಮೋದಿಗಿಂತ ಹಿಂದೆ ಆಡಳಿತ ನಡೆಸುತ್ತಿದ್ದ ಸರ್ಕಾರದ ಮುಖ್ಯಸ್ಥರು ಜನ ಬೀದಿಗಿಳಿಯುವ ಮುನ್ನವೇ ಘಟನೆಯನ್ನು ಖಂಡಿಸಿದ್ದರು ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡಿದ್ದರು. ತಮ್ಮ ಹಿಂದಿನ ಸರ್ಕಾರದ ಒಳ್ಳೆಯ ನಡವಳಿಕೆಗಳನ್ನು ಮಿಸ್ಟರ್ ಮೋದಿ ಅನುಸರಿಸಲು ಮುಂದಾದ ಉದಾಹರಣೆಗಳೇ ಇಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಅನೇಕ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಮತ್ತು ಮೋದಿಯ ಬಿಜೆಪಿ ಪಕ್ಷ 2014ರ ಚುನಾವಣೆಯಲ್ಲಿ ಹಿಂದೆಂದೂ ಪಡೆಯದಷ್ಟು ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದಿತು. ಹಿಂದಿನ ಸರ್ಕಾರದ ಹೊಣೆಗೇಡಿತನ, ಪ್ರಚ್ಛನ್ನ ಭ್ರಷ್ಟಾಚಾರಗಳನ್ನು ಟೀಕಿಸುತ್ತಲೇ ಮೋದಿ ಚುನಾವಣಾ ಪ್ರಚಾರ ಮಾಡಿದರು. ಮತ್ತು ಸಾಮಾನ್ಯ ಜನರ ಉತ್ತರದಾಯಿತ್ವವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದುಕೊಂಡಿದೆ ಎನ್ನುತ್ತಲೇ ಮಿಸ್ಟರ್ ಮೋದಿ ಅಧಿಕಾರಕ್ಕೆ ಬಂದರು.
ಆದರೆ ಇಂದು ಮಿಸ್ಟರ್ ಮೋದಿಯವರು ಒಂದು ಬಗೆಯ ಆತ್ಮವಂಚಕ ಮೌನಕ್ಕೆ ಮರೆಹೋಗಿದ್ದಾರೆ. ಜಗತ್ತಿನ ಬಹುದೊಡ್ಡ ಪ್ರಜಾತಂತ್ರ ದೇಶದ ಆರೋಗ್ಯವನ್ನು ಬಯಸುವ ಎಲ್ಲರೂ ಈ ಕಾರಣಕ್ಕಾಗಿ ಚಿಂತಿತರಾಗಿದ್ದಾರೆ.
ಮಿಸ್ಟರ್ ಮೋದಿ ತನ್ನ ಬೆಂಬಲಿಗರು ನಡೆಸುವ ಎಲ್ಲ ಅಪರಾಧಗಳ ಕುರಿತು ಮಾತಾಡಲೇಬೇಕೆಂದೇನೂ ಇಲ್ಲ. ಆದರೆ ಇತ್ತೀಚೆಗೆ ನಡೆಯುತ್ತಿರುವ ಹಿಂಸಾಕೃತ್ಯಗಳು ಮತ್ತು ಅತ್ಯಾಚಾರಗಳು ವೈಯಕ್ತಿಕ ದ್ವೇಷಗಳಿಂದ ನಡೆದಂತವುಗಳಲ್ಲ ಮತ್ತು ನಿತ್ಯ ನಡೆಯಬಹುದಾದ ಮಾಮೂಲು ಕ್ರಿಮಿನಲ್ ಕೃತ್ಯಗಳೂ ಅಲ್ಲ. ಈ ಹಿಂಸಾಚಾರಗಳು ಯೋಜನಾಬದ್ಧ ಸಂಘಟಿತ ಅಪರಾಧ ಕೃತ್ಯಗಳು. ಈ ಕೃತ್ಯಗಳ ಹಿಂದೆ ಉಗ್ರ ರಾಷ್ಟ್ರವಾದಿ ಗುಂಪುಗಳ ಸ್ಪಷ್ಟ ಕೈವಾಡಗಳಿವೆ. ಈ ಸಂಘಟಿತ ಜನವಿರೋಧಿ ಗುಂಪುಗಳು ಮಹಿಳೆಯರಲ್ಲಿ, ದಲಿತರಲ್ಲಿ, ಮುಸ್ಲಿಮರಲ್ಲಿ ಮತ್ತು ಬಡವರಲ್ಲಿ ಭಯದ ವಾತಾವರಣವನ್ನು ಮೂಡಿಸಲೆಂದೇ ಕಾರ್ಯಾಚರಣೆಗಿಳಿದಿವೆ.
ಮಿಸ್ಟರ್ ಪ್ರಧಾನ ಮಂತ್ರಿಯವರು ಸುತ್ತಲು ನೆರೆದಿರುವ ತನ್ನ ರಾಜಕೀಯ ಬೆಂಬಲಿಗರ ಕೃತ್ಯಗಳನ್ನು ನೋಡಿ ಸುಮ್ಮನಿರುವುದಲ್ಲ, ದೇಶದ ಎಲ್ಲ ಜನರ ಹಿತ ಕಾಪಾಡಲು ಮಾತಾಡಬೇಕಿದೆ ಮತ್ತು ಮುಂದಾಗಬೇಕಿದೆ.
ಸಂಪಾದಕೀಯ ಮಂಡಳಿ
ನ್ಯೂಯಾರ್ಕ್ ಟೈಮ್ಸ್, ಅಮೆರಿಕ
ಅನುವಾದ: ಎ ಎಸ್ ಪ್ರಭಾಕರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...