Homeರಾಜಕೀಯಮೇಲ್ಜಾತಿಗಳ `ಯಜಮಾನಿಕೆ’ ಮತ್ತು ಸಿದ್ರಾಮಯ್ಯನವರ ಸಣ್ಣಪುಟ್ಟ ಮಿಸ್ಟೇಕ್‍ಗಳು

ಮೇಲ್ಜಾತಿಗಳ `ಯಜಮಾನಿಕೆ’ ಮತ್ತು ಸಿದ್ರಾಮಯ್ಯನವರ ಸಣ್ಣಪುಟ್ಟ ಮಿಸ್ಟೇಕ್‍ಗಳು

- Advertisement -
- Advertisement -

ಕರ್ನಾಟಕದ ಮತದಾರ ಯಾರೂ ಗೆಲ್ಲದ ಮತ್ತು ಎಲ್ಲರೂ ಸೋತ ಸ್ಥಿತಿಯನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ರೂಪಿಸಿದ್ದಾನೆ. ಅದನ್ನು ಪ್ರಬುದ್ಧತೆ ಅನ್ನಬೇಕೋ? ಅಸಹಾಯಕತೆ ಅನ್ನಬೇಕೋ? ಮೂರ್ಖತನ ಅನ್ನಬೇಕೋ ಅರ್ಥವಾಗುತ್ತಿಲ್ಲ. ಎಲ್ಲವೂ ಸೇರಿದ ಕಲಸುಮೇಲೋಗರ. ಯಾವುದನ್ನು ಹೇಳಿದರೂ, ಅಂದುಕೊಂಡರೂ ಉಳಿದೆರಡು ಅದಕ್ಕೆ ಪೈಪೋಟಿ ನೀಡಲು ಮುಂದೆ ಬರುತ್ತವೆ. ಮೇಲ್ಜಾತಿಯ ಮನೋಧರ್ಮ ಮತ್ತು ಕೆಳಜಾತಿಯ ದೌರ್ಬಲ್ಯಗಳೆರಡೂ ಅನಾವರಣಗೊಂಡಿವೆ. ಕೆಳಜಾತಿಯ ನಾಯಕನೊಬ್ಬ ‘ಐದು ವರ್ಷ’ದ ಅವಧಿ ಪೂರೈಸಿದ್ದು ಸೋಕಾಲ್ಡ್ ಮೇಲ್ಜಾತಿಯ ಮನಸ್ಸುಗಳಿಗೆ ಇಷ್ಟವಾಗಲಿಲ್ಲ. ಅದು ಕೇವಲ ಇಷ್ಟಾನಿಷ್ಟದ ಪ್ರಶ್ನೆ ಮಾತ್ರ ಆಗಿ ಉಳಿಯಲಿಲ್ಲ. ‘ಸೋಲಿಸಲೇ ಬೇಕು’ ಎನ್ನುವ ಜಿದ್ದಾಜಿದ್ದಿನ ಕಣವಾಗಿ ಪರಿವರ್ತಿತವಾಯಿತು. ಚಾಮುಂಡೇಶ್ವರಿಯ ಫಲಿತಾಂಶ ಅದನ್ನು ಸ್ಪಷ್ಟವಾಗಿ ಬಿಚ್ಚಿಡುತ್ತದೆ.

ಮಗ ಯತೀಂದ್ರ ಜೊತೆ ಸಿದ್ದು

ಹಾಲಿ ಮುಖ್ಯಮಂತ್ರಿ ಹಾಗೂ ಅಷ್ಟೇನು ದುರಾಡಳಿತ ನೀಡದ, ಸಣ್ಣಪುಟ್ಟ ಲೋಪಗಳ ನಡುವೆಯೂ ‘ಬಹುಜನ ಹಿತಾಯ’ ಕೆಲಸ ಮಾಡಿದ ನಾಯಕನನ್ನು ದಯನೀಯವಾಗಿ ಸೋಲಿಸಿದ ಮತ್ತು ‘ಸೋಲಿಸಲೇಬೇಕು’ ಎಂದು ಒಗ್ಗಟ್ಟಾಗಿ ನಿಂತು, ಅದಕ್ಕೆ ಪರಿಶ್ರಮ ವಹಿಸಿ ಆಗು ಮಾಡಿದ ಕರ್ನಾಟಕದ ಉಭಯ ಸಮುದಾಯಗಳ ‘ಯಜಮಾನಿಕೆ’ಯ ಸ್ವರೂಪ ಗೋಚರವಾಗುತ್ತದೆ. ಆದರೆ, ಅದಕ್ಕಿಂತ ವಿಚಿತ್ರ ಎಂದರೆ ಸೋಕಾಲ್ಡ್ ಕೆಳಜಾತಿ ಮತ್ತು ಮಧ್ಯಮ ವರ್ಗದ ಜನ ಅಪಾಯ ಅರಿಯದೇ ಶೋಷಕರ ಜೊತೆಗೇ ಹೋಗುವ ‘ದೌರ್ಬಲ್ಯ’. ವರುಣಾ ವಿಧಾನಸಭಾ ಕ್ಷೇತ್ರವನ್ನ ಮಗನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿಯತ್ತ ಮುಖ ಮಾಡುವ ‘ಸ್ವಾರ್ಥ’ ಸಿದ್ದರಾಮಯ್ಯನವರ ತಲೆಗೆ ಹೇಗೆ? ಯಾಕೆ ಹೊಕ್ಕಿತೋ ಗೊತ್ತಿಲ್ಲ. ಅದು ಅವರನ್ನು ಮತ್ತು ಅವರ ಪಕ್ಷವನ್ನು ಸೋಲಿನ ಬಾಗಿಲಿಗೆ ತಂದು ನಿಲ್ಲಿಸಿದೆ. ಸಿದ್ದರಾಮಯ್ಯ ಸ್ವಲ್ಪ ಉದಾರವಾಗಿ ವರ್ತಿಸಿದ್ದರೆ ಇಂತಹ ಸ್ಥಿತಿ ಉದ್ಭವ ಆಗುವ ಸಾಧ್ಯತೆಗಳು ಕಡಿಮೆ ಆಗಿರುತ್ತಿದ್ದವು. ಭಾವನಾತ್ಮಕ ಮೇಲುಗೈ ಸಾಧಿಸುವುದಕ್ಕೆ ಸ್ವತಃ ಸಿದ್ದರಾಮಯ್ಯ ಅವಕಾಶ ಮಾಡಿಕೊಟ್ಟರು. ಅದಕ್ಕೆ ಸ್ವತಃ ಅವರೂ ಸೇರಿದಂತೆ ಕಾಂಗ್ರೆಸ್ ಅದಕ್ಕಿಂತ ಹೆಚ್ಚಾಗಿ ರಾಜ್ಯದ ಜನ ತುಂಬಾ ದುಬಾರಿ ಬೆಲೆ ತೆರ ಬೇಕಾಗಿದೆ. ರಾಜಕೀಯವೂ ಒಂದು ಆಟ.

ಇಲ್ಲಿ ಎಲ್ಲವೂ ನನ್ನದೇ ಆಗಬೇಕೆಂದರೆ ಆಗುವುದಿಲ್ಲ. ಕೆಲವೊಮ್ಮೆ ಬಿಟ್ಟು ಕೊಡುವ ದೊಡ್ಡ ಮನಸ್ಸೂ ಮಾಡಬೇಕಾಗುತ್ತದೆ. ಎಂದೂ ಇಲ್ಲದ ರಾಜಕೀಯಕ್ಕೆ ಮಗನನ್ನು ತರುವ ಆಸೆ, ಪುತ್ರ ವ್ಯಾಮೋಹ ಯಾಕೆ ಬೇಕಿತ್ತು? ಕಾಂಗ್ರೆಸ್‍ನ ಕುಟುಂಬ ರಾಜಕಾರಣವನ್ನು ಟೀಕೆ ಮಾಡುವ ಸ್ಥಿತಿಯನ್ನು ಯಾವ ರಾಜಕೀಯ ಪಕ್ಷವೂ, ನಾಯಕರೂ ಇಂದು ಉಳಿಸಿಕೊಂಡಿಲ್ಲ. ಸ್ವತಃ ಸಮಾಜವಾದಿ ಎಂದು ಭಾವಿಸಿರುವ ಸಿದ್ದರಾಮಯ್ಯ ಸೈದ್ಧಾಂತಿಕವಾಗಿ ಕುಟುಂಬ ರಾಜಕಾರಣ ವಿರೋಧಿ ನೆಲೆಯವರು. ಕುಟುಂಬ ರಾಜಕಾರಣದ ಕಾರಣಕ್ಕಾಗಿಯೇ ಅಪಾರ ಪ್ರಮಾಣದ ನಷ್ಟ ಅನುಭವಿಸಿದವರು. ಕೈ ಸುಟ್ಟುಕೊಂಡವರು. ‘ಬೆಂಕಿ’ಯ ಅನುಭವ ಪಾಠ ಕಲಿಸದಿದ್ದರೆ- ಕಲಿಯದಿದ್ದರೆ ಹೇಗೆ?

ಸೋಲುವುದಕ್ಕಿಂತ ಸೋಲಿನ ಭೀತಿ ಹೆಚ್ಚು ಅಪಾಯಕಾರಿ. ಚಾಮುಂಡೇಶ್ವರಿಯ ಅಪಾಯದ ಮುನ್ಸೂಚನೆಗೆ ಇದ್ದ ಕಾರಣ ತುಂಬಾ ಸ್ಪಷ್ಟ. ಮೇಲ್ಜಾತಿ- ಮೇಲ್ವರ್ಗಗಳು ಸೋಲಿಸಲು ಕಟಿಬದ್ಧವಾಗಿವೆ ಎಂಬುದರ ವಾಸನೆ ಬಂದಿತ್ತು. ಅದು ರಾಜ್ಯದಾದ್ಯಂತ ಇದ್ದ- ಇರಬಹುದಾದ ಅತೃಪ್ತಿಯ ಮೇಲೆ ಎಂದು ಅರ್ಥಮಾಡಿಕೊಳ್ಳದೇ ಇದ್ದರೆ ಹೇಗೆ? ಯಡಿಯೂರಪ್ಪ- ದೇವೇಗೌಡರು ತೋರಿದ ಧಾಷ್ಟ್ರ್ಯವನ್ನು ಸಿದ್ದರಾಮಯ್ಯ ಕೂಡ ತೋರಿಸಿದ್ದು ‘ಹುಂಬತನ’ ಎನ್ನದೇ ವಿಧಿಯಿಲ್ಲ. ಉಭಯ ನಾಯಕರಿಗೆ ಇದ್ದ ಜಾತಿಯ ಬಲ ಹಾಗೂ ಅದೇ ಪ್ರಮಾಣದಲ್ಲಿ ಇದ್ದ- ಇರುವ ಇಮೇಜ್ ಬಗ್ಗೆ ‘ಕ್ಯಾರೇ’ ಅನ್ನದ ಮನೋಭಾವ ಸಿದ್ದರಾಮಯ್ಯಗೆ ಇಲ್ಲ. ಮತ್ತು ಅದು ಬರುವುದೂ ಇಲ್ಲ.

ಎದುರಾಳಿಗೆ ಕೈಕಟ್ಟಲು ಅವಕಾಶ ಮಾಡಿಕೊಟ್ಟದ್ದು ಸಿದ್ದರಾಮಯ್ಯನವರ ಲೋಪ. ರಾಜಕೀಯ ಆಟದಲ್ಲಿ ಸಂದೇಶ- ಸೂಚನೆಗಳೇ ಪ್ರಾಬಲ್ಯ ಮೆರೆಯುತ್ತವೆ. ಅದು ನಲವತ್ತು ವರ್ಷ ರಾಜಕಾರಣ ಮಾಡಿದವರಿಗೆ ಅರ್ಥ ಆಗಿಲ್ಲ ಎಂದರೆ ಹೇಗೆ ನಂಬುವುದು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಖ್ಯಾಬಲವೇ ಮುಖ್ಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಬಹುಜನರು ‘ಒಗ್ಗಟ್ಟು’ ಆಗಲು ಸಾಂಸ್ಕೃತಿಕ-ಸಾಮಾಜಿಕ ಕಾರಣಗಳಿಲ್ಲ. ಆದರೆ, ಪ್ರಬಲರಿಗೆ ಸಂಖ್ಯಾಬಲದ ಕೊರತೆ ಇದ್ದರೂ ‘ಪ್ರಾಬಲ್ಯ’ ತೋರಿಸುವುದಕ್ಕೆ ಹಿಂದೆ ಬೀಳುವುದಿಲ್ಲ. ಬೇಟೆಯಾಡುವ ಹುಲಿ ತಾನು ದುರ್ಬಲನಾದರೂ ಹಾಗೆ ಭಾವಿಸುವುದಿಲ್ಲ. ಅದು ಭೀತಿ ಉಂಟು ಮಾಡುವ ಮೂಲಕವೇ ಮೇಲುಗೈ ಸಾಧಿಸಲು ಬಯಸುತ್ತದೆ. ಮೇಲ್ಜಾತಿ-ಮೇಲ್ವರ್ಗಗಳ ತಂತ್ರ ಕೂಡ. ಹುಲಿ ಕಳೆಗುಂದಿದೆ ಎಂದು ಗೊತ್ತಾದರೆ ಜಿಂಕೆಗಳು ಸವಾರಿ ಮಾಡುತ್ತವೆ ಎಂಬ ಮನೋಭಾವವೇ ಆಕ್ರಮಣಾತ್ಮಕ ಧೋರಣೆಗೆ ಕಾರಣವಾಗುತ್ತದೆ. ಹುಲಿಗಳು ಒಂದಾಗುವುದು ದಾಳಿ ಮಾಡುವುದಕ್ಕಾದರೆ, ಜಿಂಕೆಗಳು ಒಂದಾಗುವುದು ರಕ್ಷಣೆಗಾಗಿ. ಜಿಂಕೆಗಳು ಒಂದಾಗಿಯೂ ಹುಲಿಯ ಮೇಲೆ ‘ಸವಾರಿ’ ಮಾಡಲು ಆಗುವುದಿಲ್ಲ. ಹುಲಿ-ಜಿಂಕೆಯ ನೈಸರ್ಗಿಕ ಆಟ- ಜೀವನ್ಮರಣದ ಹೋರಾಟ ಸಿದ್ದರಾಮಯ್ಯನವರಿಗೆ ಗೊತ್ತಿರದ ಸಂಗತಿಯೇನಲ್ಲ. ಪ್ರಬಲ ಸಮುದಾಯಗಳ ಧ್ರುವೀಕರಣದ ‘ಭಯ’ವೂ ದುರ್ಬಲರನ್ನು ಒಗ್ಗಟ್ಟಾಗಿಸಲು ಅವಕಾಶ ಕಲ್ಪಿಸುತ್ತದೆ. ಅದು ಪೊಲರೈಸೇಷನ್‍ನ ವೇಗವನ್ನು ತೀವ್ರಗೊಳಿಸುತ್ತದೆ. ಒಕ್ಕಲಿಗರು ಜನತಾದಳದ ಜೊತೆಗೆ, ಲಿಂಗಾಯತರು ಬಿಜೆಪಿಯ ಜೊತೆಗೆ ಎಂಬ ಭಾವನಾತ್ಮಕ ಸಂಗತಿ ಎಲ್ಲರಿಗೂ ಗೊತ್ತಿದ್ದ ತೆರೆದಿಟ್ಟ ಸತ್ಯವಾಗಿತ್ತು. ಕರ್ನಾಟಕದ ರಾಜಕಾರಣದ ಬಗ್ಗೆ ಗೊತ್ತಿರುವವರಿಗೆ ಇದು ಹೊಸ ಸಂಗತಿಯೇನಲ್ಲ. ‘ಜಾತಿ ಜನಗಣತಿ’ಯ ಅಸ್ತ್ರ ಬಳಸಿದರೆ ಲಿಂಗಾಯತ-ಒಕ್ಕಲಿಗರೇತರರು ಒಂದಾಗುವ ಅವಕಾಶ ಸಾಧ್ಯವಾಗುತ್ತಿತ್ತು.

ಕರ್ನಾಟಕದಲ್ಲಿ ಲಿಂಗಾಯತರು ಇದ್ದಾರೆ ಎಂದು ಭಾವಿಸಿದ್ದೇ ಸರಿಯಾಗಿರಲಿಲ್ಲ. ಬಸವಪ್ರಣೀತ ಲಿಂಗಾಯತ ನಗಣ್ಯವೆನಿಸುವಷ್ಟು ಅಲ್ಪಸಂಖ್ಯಾತ. ಇರುವವರೆಲ್ಲ ಸೈದ್ಧಾಂತಿಕವಾಗಿ- ಭಾವನಾತ್ಮಕವಾಗಿ ವೀರಶೈವರು. ಬಸವಣ್ಣ ಅವರಿಗೆ ಒಂದ ಸಾಂಸ್ಕೃತಿಕ ‘ಐಕಾನ್’. ಅದೂ 50-60ರ ದಶಕದಲ್ಲಿ ಐಡೆಂಟಿಟಿ ಕ್ರೈಸಿಸ್‍ನಿಂದ ಹೊರಬರುವುದಕ್ಕಾಗಿ ಹುಟ್ಟಿದ ಸಂಕೇತ. ಹನ್ನೆರಡನೇ ಶತಮಾನದ ಬಸವಣ್ಣನನ್ನು 2008ರ ವೇಳೆಗಾಗಲೇ ಕೈಬಿಟ್ಟು ‘ದೂರ’ ನಡೆದುಬಿಟ್ಟಿದ್ದರು. ದೀನ-ದುರ್ಬಲರ ಪರವಾಗಿ ಮಾತನಾಡುವ ಬಸವ ‘ಪ್ರಾಬಲ್ಯ’ ಮೆರೆಯುವುದಕ್ಕೆ ಅಗತ್ಯ ಎಂದು ಅನ್ನಿಸಿರಲಿಲ್ಲ. ಅದೇ ಕಾರಣಕ್ಕಾಗಿಯೇ ಬಸವಣ್ಣ ಮೇಲಿನ ಪ್ರೀತಿಗಿಂತ ‘ಜಾತಿ’ಯ ಪ್ರೇಮ ಹೆಚ್ಚಾಗಿ ಅದು ಬಿಜೆಪಿ ಪರವಾದ ನಿಲುವು ಆಗಿ ಪರಿವರ್ತನೆಗೊಂಡಿತ್ತು.

ಮೇಲ್ಜಾತಿಯವರಿಗೆ ಮಾತ್ರ. ಸ್ವಜನ ಪಕ್ಷಪಾತ ಮಾಡುವ- ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುವ ‘ಅಧಿಕಾರ’ ಮತ್ತು ‘ಹಕ್ಕು’ ಆಯಾಚಿತವಾಗಿ ದೊರೆತಿದೆ. ಅದನ್ನೇ ಸಿದ್ದರಾಮಯ್ಯ ಕೂಡ ಮಾಡಿದರೆ ಪಾಪಾ ಮೇಲ್ಜಾತಿಗಳು ಹೇಗೆ ತಾನೆ ಸಹಿಸಿಕೊಂಡಾವು? ಮೇಲ್ಜಾತಿಯ ಜನ ಜಾತಿಯ ಜನ ಒಂದೆಡೆ ಸೇರಿದರೆ ‘ಸಾಂಸ್ಕೃತಿಕ’ ಕಾರಣಕ್ಕಾಗಿ ಎಂದು ವ್ಯಾಖ್ಯಾನಿಸಲಾಗುತ್ತದೆ. ಅದೇ ‘ಕೆಳಜಾತಿ’ (ಪ್ರಬಲರಲ್ಲದ ಸಮುದಾಯ)ಯ ಜನ ಸೇರಿದರೆ ಅದು ‘ಜಾತೀಯತೆ’ ಆಗುತ್ತದೆ. ಶಬ್ದಗಳು ರೂಲ್ ಮಾಡುತ್ತವೆ. ಹೌದು. ಅಲ್ಲಮ ಹೇಳಿದಂತೆ ಭಾಷೆಯೆಂಬುದು ‘ಪ್ರಾಣ ಘಾತಕ’. ಭಾವನೆಗಳಿಗಿಂತ ಭಾಷೆಗೇ ಹೆಚ್ಚು ಮಹತ್ವ.

ಸಿದ್ಧರಾಮಯ್ಯ ಎಡವಿದರು. ಕರ್ನಾಟಕದ ಬಹುಜನರು ‘ಆತಂಕ’ಕ್ಕೆ ಒಳಗಾಗಿದ್ದಾರೆ. ಇರುವಾಗ ‘ವಸ್ತು’ವಿನ ಮಹತ್ವ ಗೊತ್ತಾಗುವುದಿಲ್ಲ. ಅರಸು ಜೊತೆ ಹೋಲಿಕೆ ಮಾಡಬಾರದು ಎಂದು ಎಷ್ಟೇ ಹಠ ಹಿಡಿದರೂ ಮಾಡದೇ ಇರಲು ಸಾಧ್ಯವಾಗುತ್ತಿಲ್ಲ. ಹಿಂದೆ ಅರಸು ಇದ್ದಾಗಲೂ ಹೀಗೆಯೇ ಆಗಿತ್ತು. ಈಗ ಸಿದ್ದರಾಮಯ್ಯ ಅವರಿಗೆ ಕೂಡ ಅದೇ ಆಗಿದೆ. ನಮಗೆ ಅದು ಇತಿಹಾಸ-ಚರಿತ್ರೆಯ ಪುಟ. ಆದರೆ, ಸ್ವತಃ ಅರಸು ರಾಜಕಾರಣ ಮತ್ತು ಅದಕ್ಕಾಗಿ ದೊರೆತ ಪ್ರತಿಫಲ ಸಿದ್ಧರಾಮಯ್ಯನವರಿಗೆ ವರ್ತಮಾನದ ಅನುಭವ ಆಗಿತ್ತು. ಸಿದ್ದರಾಮಯ್ಯನವರ ವಿರುದ್ಧದ ಅಲೆ ಸುಪ್ತವಾಗಿ, ಜೀವಂತವಾಗಿ ಉಳಿಯುವಂತೆ ಮಾಡುವಲ್ಲಿ ಪ್ರಬಲ ಸಮುದಾಯಗಳು ಯಶ ಕಂಡಿವೆ ಎಂಬುದೇ ಸದ್ಯದ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...