Homeಅಂಕಣಗಳುಮೈತ್ರಿ ಸರಕಾರವ ಕೆಡವಿದ್ದು ನಾನೇ...!!!

ಮೈತ್ರಿ ಸರಕಾರವ ಕೆಡವಿದ್ದು ನಾನೇ…!!!

- Advertisement -
- Advertisement -

ಮಹಾರಾಷ್ಟ್ರದ ಶಿವಸೇನಾ ಎನ್.ಸಿ.ಪಿ ಮತ್ತು ಕಾಂಗ್ರೆಸ್ ಸಮಾಗಮ ಕರಟಕ ದಮನಕರನ್ನು ಬೆಚ್ಚಿಬೀಳಿಸಿತಂತಲ್ಲಾ. ಸದಾ ಸಂಚುಗಳನ್ನ ರೂಪಿಸುತ್ತ ಅವುಗಳನ್ನ ಕಾರ್ಯರೂಪಗೊಳಿಸುತ್ತ ಭಾರತಕ್ಕೆ ಕ್ಯಾನ್ಸರ್ ತರ ಹರಡುತ್ತಿದ್ದ ಬಿಜೆಪಿಗೆ ಮಹಾರಾಷ್ಟ್ರದ ಮುಲಾಮು ಕಂಗಾಲಾಗಿಸಿದೆ. ಆದರೇನು ಕೆಟ್ಟಜನ ಎಂದೂ ಸುಮ್ಮನೆ ಕೂರುವವರಲ್ಲ. ಕೀಡೆ ಹಾಕುತ್ತಲೇ ಇರುತ್ತಾರೆ. ಸದ್ಯ ಮಹಾರಾಷ್ಟ್ರದಲ್ಲಿನ ಐತಿಹಾಸಿಕ ತ್ರಿವೇಣಿ ಸಂಗಮವನ್ನು ಸ್ವಾದಭರಿತ ಮದ್ಯಕ್ಕೆ ಹೋಲಿಸುವುದಾದರೆ, ಶಿವಸೇನೆ ರಾ ಡ್ರಿಂಕ್ಸಿನಂತಿತ್ತು. ಅದಕ್ಕೀಗ ಎನ್‍ಸಿಪಿ ಎಂಬ ಸೋಡ ಮತ್ತು ಕಾಂಗ್ರೆಸ್ ನೀರು ಬೆರೆತಿದೆ. ಈ ರೂಪದಲ್ಲಿ ಸಿದ್ಧಗೊಂಡ ಪಾನೀಯ ಮಹಾರಾಷ್ಟ್ರೀಯರಿಗೆ ಹಿತವಾಗಬಹುದು. ಇದರಲ್ಲಿ ಯಾವುದೇ ಹೆಚ್ಚಾದರೂ ರುಚಿ ಹದಗೆಡಬಹುದು ಆ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು. ಈ ಡ್ರಿಂಕ್ಸಿಗೆ ಏನಾದರೂ ಬೆರೆಸಿ ಹಾಳುಮಾಡಲು ಬಿಜೆಪಿಗಳು ಹಗಲಿರುಳೂ ಹೊಂಚುಹಾಕುತ್ತವೆ. ಹೊಂಚುಹಾಕುವುದರಲ್ಲಿ ಅವುಗಳು ಹೈಯಿನಾಗಳಿದ್ದಂತೆ, ಆ ನಂತರ ಅವುಗಳ ಕೇಕೆಯೂ ಕೂಡ ಹೈಯಿನಾಗಳ ತರಹವೇ ಇರುತ್ತದೆಂದು ಎನ್ಸಿಪಿಗಳು ಹೇಳುತ್ತವಂತಲ್ಲಾ… ಥೂತ್ತೇರಿ.

`ಬಿ.ಸಿ.ಪಾಟೀಲನದ್ದು ಪೊಲೀಸ್ ಬುದ್ಧಿ. ಅಂದರೆ ಲಾವ್ ಲಾವ್ ಬುದ್ಧಿ’ ಎಂದು ಸಿದ್ದು ಆಡಿಕೊಂಡಿದ್ದಕ್ಕೆ ಕೆರಳಿದ ಪಾಟೀಲ್, ಸಿದ್ದು ವಿರುದ್ಧ ಇಡೀ ಪೊಲೀಸ್ ಇಲಾಖೆಯೇ ತಿರುಗಿ ಬೀಳಲು ಕರೆಕೊಟ್ಟರಲ್ಲ. ಆದರೇನು ಪೊಲೀಸರಾರು ಪಾಟೀಲನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಸಿದ್ದು ಬಳಸಿದ್ದ `ಅದರಲ್ಲಿ ಒಳ್ಳೆಯವರೂ ಇದ್ದಾರೆ’ ಎಂಬ ಪದವನ್ನ ತಮ್ಮ ಮೇಲೆ ಎಳೆದುಕೊಂಡು ಪಾಟೀಲನ ಮಾತಿಗೆ ಮೈಂಟ್ ಮಾಡಲಿಲ್ಲ. ಬಿ.ಸಿ.ಪಾಟೀಲ್ ಅಂದರೆ ದಕ್ಷ ಪೊಲೀಸ್ ಅಧಿಕಾರಿ. ಸಿನಿಮಾದಲ್ಲಿ ನಾಯಕ ನಟ ಮತ್ತು ಅಪರೂಪದ ರಾಜಕಾರಣಿ ಎಂದು ಭಾವಿಸಿರುವ ಈ ಪೊಲೀಸ್ ಪ್ಯಾರ ಮೂರರಲ್ಲೂ ತಲಹತ್ತದೆ ಬಾಂಬೆ ಪ್ಲೈಟ್ ಹತ್ತಿದವನು. ಅಂದರೆ ಒಳ್ಳೆ ಪೊಲೀಸನೂ ಆಗಲಿಲ್ಲ ಸಿನಿಮಾ ನಟನೂ ಆಗಲಿಲ್ಲ. ಉತ್ತಮ ರಾಜಕಾರಣಿಯೂ ಆಗಲಿಲ್ಲ. ಈಗ ಅನಿವಾರ್ಯವಾಗಿ ಲಿಂಗಾಯತರ ಮತಗಳು ಲಿಂಗಾಯಿತರಿಗೇ ಬೀಳಬೇಕು ಎಂಬ ಸ್ಲೋಗನ್ ಹಿಡಿದು ಹೊರಟಿದ್ದಾನೆ ಬಹು ಜನಾಂಗದ ಅಭ್ಯರ್ಥಿಯಾದ ಈತ ಗೆದ್ದರೂ ಹಿರೇಕೆರೂರು ರಾಜಕಾರಣದ ಸೋಲಂತಲ್ಲಾ….. ಥೂತ್ತೇರಿ.

ಕಾಂಗ್ರೆಸ್‍ನಲ್ಲಿ ಬದುಕನ್ನ ಆರಂಭಿಸಿ ಆಸ್ತಿ ಮಾಡಿಕೊಂಡು ಅಧಿಕಾರ ಅನುಭವಿಸಿ ಈಗ ಬಿಜೆಪಿಯ ಗೋಶಾಲೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಗೊಡ್ಡು ದನದಂತಿರುವ ಎಸ್ಸೆಂ ಕೃಷ್ಣ ಎಂಬ ವೃದ್ಧರು, ಸುಧಾಕರನ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡು `ಈ ಸರಕಾರ ಕೆಡವಿದ್ದು ನಾನೆ. ಸುಧಾಕರನ ರಾಜೀನಾಮೆ ಕೊಡಿಸಿದ್ದು ನಾನೇ’ ಎಂದುಬಿಟ್ಟಿದ್ದಾರಲ್ಲಾ. ಇದರಿಂದ ಕರ್ನಾಟಕದ ಜನ ಆಶ್ಚರ್ಯಪಡುವುದರ ಬದಲು ಈತನ ಪತನ ಕಂಡು ಮರುಗಿದ್ದಾರಂತಲ್ಲಾ. ಈ ಶತಮಾನದ ಬಹುದೊಡ್ಡ ರಾಜಕೀಯ ದ್ರೋಹವೆಸಗಿರುವ ಕೃಷ್ಣನಿಗೆ ಪಕ್ಷಾಂತರಿಗಳನ್ನ ಕಂಡರೆ ಬಲುಪ್ರೀತಿ. ಅದರಲ್ಲೂ, ಉಂಡು ತಿಂದು ಹೊಟ್ಟೆ ಮುಂದುಮಾಡಿಕೊಂಡು ಎದುರು ಕಂಡ ಪಾರ್ಟಿಗೆ ನೆಗೆಯುವ ಹನುಮಂತರನ್ನು ಕಂಡರೆ ಎಲ್ಲಿಲ್ಲದ ಅಕ್ಕರೆ. ಅದಕ್ಕೆ ಸುಧಾಕರ ರಾಜೀನಾಮೆ ಕೊಟ್ಟು ನನ್ನಂತಾಗಲು ಸೂಚಿಸಿದ್ದು ಎಂದಿರುವ ಕೃಷ್ಣನಿಗೆ ಸುಧಾಕರನನ್ನು ನೋಡಿದರೆ ತನ್ನ ತಮ್ಮನನ್ನ ನೋಡಿದಂಗಾಗುತ್ತದೆ. ಆತನೂ ನಯವಾಗಿ ಮಾತನಾಡುತ್ತಾನೆ. ನುಣ್ಣಗಿರುವ ಬುರುಡೆಗೆ ವಿಗ್ ಕೂರಿಸಲು ಒಂದು ಗಂಟೆ ತೆಗೆದುಕೊಳ್ಳುತ್ತಾನೆ. ಇಂತೆಲ್ಲಾ ಗುಣಗಳನ್ನ ಗ್ರಹಿಸಿದ ಕೃಷ್ಣ, ಮುದಿಗಾಲದಲ್ಲಿ ಗರತಿಯರನ್ನ ದಾರಿತಪ್ಪಿಸುವಂತಹ ಸಲಹೆ ಕೊಟ್ಟಿರುವುದು ಸೂಕ್ತವಾಗಿದೆಯಂತಲ್ಲಾ… ಥೂತ್ತೇರಿ.

ಈ ಉಪಚುನಾವಣೆಯಲ್ಲಿ ತುಂಬ ತಮಾಸೆ ಮಾಡಿದವರೆಂದರೆ ನಮ್ಮ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರಂತಲ್ಲಾ. ಕೆ.ಆರ್.ಪೇಟೆಗೆ ಚುನಾವಣಾ ಪ್ರಚಾರಕ್ಕೆಂದು ಬಂದ ಕುಮಾರಣ್ಣ, ಕಾಣೆಯಾದ ತಾಯಿ ನೆನೆದು ಅಳುವ ಎಮ್ಮೆಕರುವಿನಂತೆ ಅತ್ತರಲ್ಲಾ. ಎಂತಹ ವಿಷಯಕ್ಕೂ ಅಷ್ಟು ಸುಲಭವಾಗಿ ಅಳದ ಕೆ.ಆರ್.ಪೇಟೆ ಜನ ಮಗನ ಸೋಲು ನೆನೆಸಿಕೊಂಡು ಅಳುತ್ತಿರುವ ಕುಮಾರಣ್ಣ ಸ್ಥಿತಿ ಕಂಡು ನಕ್ಕರಂತಲ್ಲಾ. ನಗುವಿಗೆ ಕಾರಣ, ಮಗನ ಸೋಲಿನ ಕಾರಣವನ್ನೇ ಈವರೆಗೆ ಗ್ರಹಿಸಿಲ್ಲ ಎಂಬುದು. ಮುಖ್ಯವಾಗಿ ಮಂಡ್ಯದ ಸ್ವಾಭಿಮಾನ ಕಡೆಗಣಿಸಿ ಮಗನನ್ನ ತಂದು ನಿಲ್ಲಿಸಿದ್ದು. ಸುಮಲತಾ ಬಗ್ಗೆ ಹಗುರವಾಗಿ ಮಾತನಾಡಿದ್ದೂ ಅಲ್ಲದೆ, ಮೂರು ಜನ ಸುಮಲತಾರನ್ನ ರೆಡಿಮಾಡಿದ್ದೂ ಅಲ್ಲದೆ ಅವರ ಹೆಸರುಗಳು ಸುಮಲತರ ಜೊತೆಗೆ ಮತಯಂತ್ರದಲ್ಲಿರುವಂತೆ ಮಾಡಿದ್ದು. ಇದಲ್ಲದೆ ಕನ್ನಡ ಚಿತ್ರರಂಗದ ನಾಯಕನಟರಾದ ದರ್ಶನ್ ಮತ್ತು ಯಶ್ ಜೋಡಿಯ ¨ಗ್ಗೆ ಹಗುರವಾಗಿ ಮಾತನಾಡಿ ಯುವಜನಾಂಗದ ಓಟು ಕಳೆದುಕೊಂಡಿದ್ದು. ಇವೆಲ್ಲಾ ಸೋಲಿನ ಕಾರಣಗಳೆಂಬುದನ್ನ ಇನ್ನ ತಿಳಿದುಕೊಳ್ಳದ ಕುಮಾರಣ್ಣ ಕೆ.ಆರ್.ಪೇಟೆಯಲ್ಲಿ ಅಳುತ್ತಿರಬೇಕಾದರೆ ಜನ ತುಟಿಯಂಚಿನಲ್ಲಿ ನಕ್ಕರಂತಲ್ಲಾ….. ಥೂತ್ತೇರಿ.

ಅನಂತಕುಮಾರ್ ಹೆಗಡೆ ಎಂಬ ಕಡಲ ತೀರದ ಸಮಸ್ಯೆಯೊಂದು ಆಗಾಗ್ಗೆ ನಾವು ಸಂವಿಧಾನವನ್ನು ಬದಲಿಸುತ್ತೇವೆ. ಅದಕ್ಕಾಗಿಯೇ ಬಂದಿರುವುದು ಎಂದು ವದರುತ್ತಿತ್ತು. ಇದು ಪತ್ರಿಕೆಯಲ್ಲಿ ದೊಡ್ಡ ಸುದ್ದಿಯಾಗಿ ಪ್ರಕಟವಾದಾಗ ಅದರ ವಾರಸುದಾರರು ಪ್ರತಿಕ್ರಿಯಿಸಲಿಲ್ಲ. ಬದಲಿಗೆ ತಮ್ಮ ಬಿಜೆಪಿ ಪಾರ್ಟಿಯ ಅಜೆಂಡಾವನ್ನೇ ಘಂಟಾಘೋಷವಾಗಿ ಹೇಳುತ್ತಿದ್ದಾನೆಂದು ಒಳಗೊಳಗೆ ಮೆಚ್ಚುಗೆ ಸೂಚಿಸುತ್ತಿದ್ದರು. ಆದರೆ ಅನಂತನ ಉವಾಚ ಅರಿವಿಲ್ಲದೆ ಜಾರಿಯನ್ನ ಪಡೆಯುತ್ತಿದೆ. ಅದು ನಮ್ಮ ರಾಜ್ಯದ ಶಾಸಕರ ಅನರ್ಹತೆ ವಿಷಯದಲ್ಲಿ ಮತ್ತು ಬಾಬರಿ ಮಸೀದಿ ವಿಷಯದಲ್ಲಿ ನಮ್ಮ ನ್ಯಾಯಾಲಯಗಳು ಸಂವಿಧಾನವನ್ನ ಬದಿಗಿಟ್ಟು ವರ್ತಿಸಿದ ರೀತಿ ನೋಡಿದರೆ ಸಂವಿಧಾನ ಬದಲಾವಣೆಯೆಂಬುದು ಜರುಗುವುದು ಇದೇರೀತಿ ಎಂಬುದು ಮನವರಿಕೆ ಆಗುತ್ತಿದೆಯಂತಲ್ಲಾ. ಯಾವಕಡೆಯಿಂದ ನೋಡಿದರೂ ಈ ಬಿಜೆಪಿಗಳಿಗೆ ಗಾಂಧೀಜಿ ಮತ್ತು ಅಂಬೇಡ್ಕರ್ ಅರಗಿಸಿಕೊಳ್ಳಲಾರದ ವ್ಯಕ್ತಿತ್ವಗಳಾಗಿ ಕಂಡು, ಆಗಾಗ್ಗೆ ಈ ಎರಡೂ ಮೇರುಪರ್ವತಗಳನ್ನ ಅಲ್ಲಾಡಿಸುವ ಕೆಲಸ ಮಾಡುತ್ತಿವೆಯಂತಲ್ಲಾ… ಥೂತ್ತೇರಿ.

ಮದ್ಯ ಮಾಂಸ ಮಾರಾಟ ಕೇಂದ್ರಗಳ ಮುಂದೆ ರಾರಾಜಿಸುತ್ತಿರುವ ದೇವರ ಹೆಸರುಗಳನ್ನ ಬದಲಿಸಲು ಕೆಲಸಿಲ್ಲದ ಸರಕಾರ ಚಿಂತಿಸುತ್ತಿದೆಯಂತಲ್ಲಾ. ಈ ಬಿಜೆಪಿಗಳ ಆಲೋಚನೆಯನ್ನ ಹಗುರವಾಗಿ ಪರಿಗಣಿಸುವಂತಿಲ್ಲ. ಒಂದಲ್ಲಾ ಒಂದು ದಿನ ಬೆಳಗಿನ ಜಾವ ಎದ್ದು ತಮ್ಮ ಅಜೆಂಡಾಗಳನ್ನು ಜಾರಿ ಮಾಡಿಬಿಡುತ್ತವೆ ಎಂದು ಆತಂಕಗೊಂಡಿರುವ ಕರ್ನಾಟಕದ ಮದ್ಯ ಮಾಂಸದ ಮಳಿಗೆಗಳ ಮಾಲಿಕರು ಚೆಡ್ಡಿಗಳನ್ನ ತೃಪ್ತಿಪಡಿಸಲು ಹಲವು ಹೆಸರುಗಳನ್ನ ಹುಡುಕಿಟ್ಟುಕೊಂಡಿದ್ದಾರಂತಲ್ಲಾ. ಆ ಪೈಕಿ ಮೋದಿ ಮಟನ್ ಸ್ಟಾಲ್, ಶಾ ಪಿಶ್ ಕಾರ್ನರ್, ಈಶ್ವರಪ್ಪ ತಲೆಮಾಂಸದ ಅಂಗಡಿ, ಎಡೂರ್ ನಾನ್‍ವೆಜ್ ಮೀಲ್ಸ್, ರಾಮುಲು ಬೋಟಿ ಕಾರ್ನರ್, ಅಶೋಕ ಗ್ರಾಂಡ್ ಬಿರಿಯಾನಿ, ರೇಣುಕಾಚಾರಿ ರಂ ಸೆಂಟರ್, ಸದಾನಂದ ಬಾಂಗಡೆ ಬಜಾರ್, ಸುರೇಶ್ ಚಿಕನ್ ಸೆಂಟರ್, ರವಿ ಕಬಾಬ್ ಕಾರ್ನರ್, ಗೊಳವಾಲಕರ್ ಗೋಬಿ ಮಂಚೂರಿ, ಸಾವರ್ಕರ್ ಸಾಗರದ ಮೀನೂಟ, ಲಿಂಬಾವಳಿ ಮಸಾಜ್ ಸೆಂಟರ್ ಇತ್ಯಾದಿ ಹೆಸರುಗಳು ನೇತಾಡಲು ರೆಡಿಯಾಗುತ್ತಿವೆಯಂತಲ್ಲಾ. ಇದಲ್ಲದೆ ಬಿಜೆಪಿಯ ಮಹಿಳಾ ಮಣಿಗಳಾದ ಉಮಾ ಭಾರತಿ, ಪ್ರಜ್ಞಾ ಇಂತಹ ಸ್ತ್ರೀಲೋಕದ ಸಮಸ್ಯೆಗಳನ್ನ ಯಾವ ಅಂಗಡಿಗೆ ಇಟ್ಟರೆ ಸೂಕ್ತ ಎಂಬ ಚರ್ಚೆ ನಡೆಯುತ್ತಿದೆಯಂತಲ್ಲಾ. ಚೆಡ್ಡಿಗಳ ದೈವಭಕ್ತಿ ಇನ್ನ ಏನೇನು ಮಾಡಲಿದೆಯೋ ಏನೋ….. ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...