Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...