Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...