Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...