Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...