Homeರಾಜಕೀಯಮೋದಿ ಸರ್ಕಾರದ ಮತ್ತೊಂದು ವಿದ್ರೋಹ

ಮೋದಿ ಸರ್ಕಾರದ ಮತ್ತೊಂದು ವಿದ್ರೋಹ

- Advertisement -
- Advertisement -

2014ರ ಚುನಾವಣೆಯಲ್ಲಿ ಯುಪಿಎ ಸರ್ಕಾರ ಮಕಾಡೆ ಮಲಗಿದ್ದು ತಾನು ಮಾಡಿಕೊಂಡಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳಿಂದ. ಆ ಭ್ರಷ್ಟಾಚಾರಗಳು ಹೊರಬಂದದ್ದು, ಅದೇ ಯುಪಿಎ ತಂದಿದ್ದ ಆರ್‍ಟಿಐ ಕಾಯ್ದೆಯಿಂದ! ಯುಪಿಎದ ಲಫಡಾಗಳು ಅದೇನೆ ಇರಲಿ, ಆರ್‍ಟಿಐನಂತಹ ಕಾಯ್ದೆಯನ್ನು ಜಾರಿಗೆ ತಂದು ಭ್ರಷ್ಟಾಚಾರವನ್ನು ವಿರೋಧಿಸುವ ಭಾರತೀಯರ ಕೈಗೆ ಒಂದು ಮಹಾ ಅಸ್ತ್ರವನ್ನು ಕೊಟ್ಟುಹೋಗಿದೆ. ಸರ್ಕಾರಗಳನ್ನೆ ಬುಡಮೇಲು ಆಗಿಸುವಷ್ಟರ ಮಟ್ಟಿಗೆ ಪ್ರಬಲವಾದ ಕಾಯ್ದೆ ಆರ್‍ಟಿಐ. ಆದರೀಗ ಮೋದಿ ಸರ್ಕಾರ ಅಂತಹ ಜನಪರ ಕಾಯ್ದೆಯನ್ನೇ ರದ್ದು ಮಾಡುವ ಹುನ್ನಾರ ನಡೆಸುತ್ತಿದೆ. ದುರಂತವೆಂದರೆ, ಆರ್‍ಟಿಐ ಕಾಯ್ದೆ ರದ್ದು ಮಾಡಲು ಹೊರಟಿರುವ ಮೋದಿ ಅಧಿಕಾರಕ್ಕೇರಿದ್ದು, ತಾನು ಪ್ರಧಾನಿಯಾದರೆ ಭ್ರಷ್ಟಾಚಾರ ಮಟ್ಟ ಹಾಕುತ್ತೇನೆ, ಬ್ಲ್ಯಾಕ್ ಮನಿ ವಾಪಾಸ್ ತರುತ್ತೇನೆ, ಲಂಚಕೋರರ ಜನ್ಮ ಜಾಲಾಡುತ್ತೇನೆ ಎಂದೆಲ್ಲ ಬಲೂನು ಹಾರಿಸಿಯೇ!
ಆರ್‍ಟಿಐ, ನಿಜಕ್ಕೂ ಭ್ರಷ್ಟಾಚಾರಿಗಳನ್ನು ಕಾಡಿದ ಕಾಯ್ದೆ. ಆದರೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಕೇವಲ ಆರ್‍ಟಿಐ ಮಾತ್ರವೇ ಸಾಲದು, ಅದರ ಜೊತೆಗೆ ಲೋಕಪಾಲ್ ಬಿಲ್, ಪಿ ನೋಟ್ (ಪಾರ್ಟಿಸಿಪೇಟರಿ ನೋಟ್) ಪಾರದರ್ಶಕೀಕರಣದಂತಹ ಜಬರ್‍ದಸ್ತ್ ಕಾನೂನುಗಳೂ ಜಾರಿಯಾಗಬೇಕು ಅನ್ನೋದು ಭ್ರಷ್ಟಾಚಾರದ ವಿರುದ್ಧದ ಹೋರಾಡುತ್ತಿದ್ದವರ ಅಳಲಾಗಿತ್ತು. ಮೋದಿಯ ಆಶ್ವಾಸನೆಗಳನ್ನು ಕೇಳಿದ ಜನ, ಬಿಜೆಪಿ ಅಧಿಕಾರಕ್ಕೇರಿದರೆ ಇಂತಹ ಇನ್ನಷ್ಟು ಟಫ್ ಕಾನೂನುಗಳು ಜಾರಿಗೆ ಬಂದು ಭ್ರಷ್ಟರ ಹೆಡೆಮುರಿ ಕಟ್ಟಲಿವೆ ಎಂದು ನಂಬಿದ್ದರೇ ವಿನಾಃ ಇರೋ ಆರ್‍ಟಿಐ ಅಸ್ತ್ರವನ್ನೇ ಕಿತ್ತುಕೊಳ್ಳಲಿದ್ದಾರೆ ಅಂತ ಎಣಿಸಿರಲಿಲ್ಲ.
ವಾಸ್ತವದಲ್ಲಿ ಆರ್‍ಟಿಐ ಎಷ್ಟು ಪರಿಣಾಮಕಾರಿ ಅಸ್ತ್ರವಾಗಿತ್ತೆಂದರೆ, ಹಲವು ಆರ್‍ಟಿಐ ಕಾರ್ಯಕರ್ತರನ್ನು ಭ್ರಷ್ಟರು ಕೊಲೆಯನ್ನೇ ಮಾಡಿಸಿದ್ದಾರೆ. ಹೀಗಾಗಿ ‘ಭ್ರಷ್ಟಾಚಾರ ವಿರೋಧಿ ಹೋರಾಟಗಾರರನ್ನು ರಕ್ಷಿಸುವ ಕಾಯ್ದೆ (Whisಣಟebಟoತಿeಡಿ ಚಿಛಿಣ)’ ತರಬೇಕೆಂಬ ಒತ್ತಾಯ ಕೇಳಿಬಂದಿತು. ಆದರೆ, ಈಗ ಎಲ್ಲವೂ ಉಲ್ಟಾ ಹೊಡೆಯಲು ಶುರುವಾಗಿದೆ. ಆರ್‍ಟಿಐ ಅರ್ಜಿ ಹಾಕಿದ ವ್ಯಕ್ತಿ ಸತ್ತರೆ, ಆ ಅರ್ಜಿಯನ್ನೂ ಕೈ ಬಿಡಬೇಕೆಂಬ ತಿದ್ದುಪಡಿ ತರಲಾಗುತ್ತಿದೆಯೆಂಬ ಸುದ್ದಿ ಇದೆ. ಅಂದರೆ, ನಿಮ್ಮ ಭ್ರಷ್ಟಾಚಾರವನ್ನು ಬಯಲುಗೊಳಿಸಬಹುದಾದ ಅರ್ಜಿ ಬಂದರೆ, ಅರ್ಜಿದಾರನನ್ನೇ ಮುಗಿಸಿ ಎಂಬ ಸಂದೇಶ ಅದರಿಂದ ಹೊರಡುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಪ್ರಧಾನ ಆಪಾದಿತನಾಗಿರುವ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಬಿಐ ಜಡ್ಜ್ ಜಸ್ಟೀಸ್ ಲೋಯಾ ನಿಗೂಢವಾಗಿ ಸಾವನ್ನಪ್ಪಿದ್ದು, ಅದೇ ಪ್ರಕರಣದ ಮತ್ತೊಬ್ಬ ಇತ್ತೀಚೆಗೆ ಸಂಶಯಾಸ್ಪದವಾಗಿ ಸತ್ತದ್ದು, ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ನೂರಕ್ಕು ಹೆಚ್ಚು ಜನ ಸತ್ತು ಹೋದದ್ದನ್ನೆಲ್ಲ ಮೋದಿ ಸರ್ಕಾರ ನಗಣ್ಯವೆಂದು ಪರಿಗಣಿಸುತ್ತಿರೋದು ನೋಡಿದರೆ, ಇಂದು ಆರ್‍ಟಿಐ ಕಾಯ್ದೆಯೇ ಇಲ್ಲವಾಗುವಂತೆ ಅಥವಾ ದುರ್ಬಲವಾಗುವಂತೆ ಮಾಡಲು ಹೊರಟಿದ್ದಾರೆಂಬ ಆರೋಪವು ಗಂಭೀರವಾಗಿ ಕಾಡುತ್ತೆ. ಈ ಆರೋಪ ಮತ್ತು ಹೋರಾಟದ ಕುರಿತ ಕೆಲವು ವಿವರಗಳನ್ನು ನಮ್ಮ ಪತ್ರಿಕೆಯ ಓದುಗರಿಗೆ ತಲುಪಿಸಬೇಕಿದೆ.
ಜುಲೈ 18ರಿಂದ ಆರಂಭವಾಗಿರುವ ಲೋಕಸಭೆಯ ಮಳೆಗಾಲದ ಅಧಿವೇಶನದಲ್ಲಿ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ತಿದ್ದುಪಡಿಯ ನಿರ್ದಿಷ್ಟ ಅಂಶಗಳ ಬಗ್ಗೆ ಸಾರ್ವಜನಿಕವಾಗಿ ಯಾವ ಮಾಹಿತಿಯನ್ನು ಸಹ ಬಿಟ್ಟುಕೊಟ್ಟಿಲ್ಲ. ತಿದ್ದುಪಡಿಯ ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂಬ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಮೇಲ್ನೋಟಕ್ಕೆ ಮುಖ್ಯ ಮಾಹಿತಿ ಆಯುಕ್ತರ ಸಂಬಳ ನೀಡುವ ಅಧಿಕಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವ ತಿದ್ದುಪಡಿ ಮಾತ್ರವೇ ಎಂದು ಹೇಳುತ್ತಿದ್ದರೂ, ಅಧಿಕೃತ ಪ್ರಕಟಣೆ ಮಾಡದೇ ಇಷ್ಟೊಂದು ಗೌಪ್ಯತೆ ಕಾಪಾಡುತ್ತಿರುವುದರಿಂದ ಸಹಜವಾಗಿಯೇ ಗುಮಾನಿ ಹೆಚ್ಚಾಗಿದೆ.
ಮಾಹಿತಿ ಹಕ್ಕು ಕಾಯ್ದೆ ನಿಸ್ಸಂಶಯವಾಗಿ ದೇಶದ ಪ್ರತಿಯೊಬ್ಬ ಜನರ ಪ್ರಶ್ನಿಸುವ ಹಕ್ಕನ್ನು ಸಶಕ್ತಗೊಳಿಸುವ ಜನಪರ ಕಾಯ್ದೆಯಾಗಿದೆ. ಒಂದು ಅಂದಾಜಿನ ಪ್ರಕಾರ ಪ್ರತಿವರ್ಷ ಸುಮಾರು 6 ಮಿಲಿಯನ್ ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗುತ್ತವೆ. ಪ್ರಪಂಚದಲ್ಲೇ ವ್ಯಾಪಕವಾದ ಪಾರದರ್ಶಕತೆಗೆ ಹೆಸರಾದ ಕಾಯ್ದೆ ಇದಾಗಿದೆ. ಬಡ ಗ್ರಾಮೀಣ ಮತ್ತು ನಗರ ನಿವಾಸಿಗಳು ತಮ್ಮ ಮೂಲಭೂತ ಅಧಿಕಾರವನ್ನು ತಿಳಿಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆರ್‍ಟಿಐ ಅರ್ಜಿ ಸಲ್ಲಿಸಿದ್ದಾರೆಂದು ರಾಷ್ಟ್ರೀಯ ಮೌಲ್ಯಮಾಪನ ಸರ್ವೇ ಗುರುತಿಸಿದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ದೇಶದ ದೊಡ್ಡ ದೊಡ್ಡ ಸಂಸ್ಥೆಗಳನ್ನು ಪ್ರಶ್ನಿಸುವ, ಪಾರದರ್ಶಕತೆಯನ್ನು ಕೇಳುವ ಮತ್ತು ಯಾವುದೇ ಮಾಹಿತಿ ಪಡೆಯುವ ಅತ್ಯುತ್ತಮ ಕಾಯ್ದೆ ಇದಾಗಿದೆ.
ಮೊದಲ ಬಾರಿಗೆ 2017ರ ಏಪ್ರಿಲ್‍ನಲ್ಲಿ ಈ ಸರ್ಕಾರವು ತಿದ್ದುಪಡಿಯಾಗಬೇಕಿರುವ ಕರಡು ನಿಯಮಗಳನ್ನು ಮುಂದಿಟ್ಟಿತು. ಅದರಲ್ಲಿ ಅರ್ಜಿ ಸಲ್ಲಿಸಿದ ವ್ಯಕ್ತಿ ಒಂದು ವೇಳೆ ಮರಣ ಹೊಂದಿದ್ದಲ್ಲಿ ಆ ಅರ್ಜಿಯನ್ನು ವಜಾ ಮಾಡುವ ಅಧಿಕಾರವನ್ನು ನೀಡುವುದು ಒಂದಾಗಿದೆ. ಎರಡನೆಯದಾಗಿ, ಮಾಹಿತಿ ಆಯೋಗದ ಮುಖ್ಯಾಧಿಕಾರಿಗಳಿಗೆ ಸಂಬಳ ನೀಡುವ ನಿರ್ಧಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡಿದರೆ ಆಯೋಗದ ಸ್ವಾಯತ್ತತೆಗೆ ಧಕ್ಕೆ ಬರುವುದಲ್ಲದೇ ಅವರ ಸ್ವಾತಂತ್ರ್ಯವನ್ನು ನಿಯಂತ್ರಣದಲ್ಲಿಟ್ಟಂತಾಗುತ್ತದೆ. ಈಗಾಗಲೇ ರಾಷ್ಟ್ರೀಯ ಭದ್ರತೆ, ವೈಯಕ್ತಿಕ ಗೌಪ್ಯತೆ, ಕಾಪಿರೈಟ್ ಇತ್ಯಾದಿಗಳ ನೆಪದಲ್ಲಿ 2016-17ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ.35ರಷ್ಟು ಅರ್ಜಿಗಳನ್ನು ಮಾಹಿತಿ ನೀಡದೇ ವಜಾ ಮಾಡಲಾಗಿದೆ. ಇದೇ ರೀತಿಯ ತಿದ್ದುಪಡಿಗಳಾದಲ್ಲಿ ಶೇ.100ರಷ್ಟು ಅರ್ಜಿಗಳು ವಜಾಗೊಳ್ಳುವ ಕಾಲ ದೂರವಿಲ್ಲ.
ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಕಾರ್ಪೊರೇಟ್ ಕುಳಗಳ ದೊಡ್ಡ ದೊಡ್ಡ ಹಗರಣಗಳು ಬೆಳಕಿಗೆ ಬಾರದಂತೆ ತಡೆಯುವ ದುರುದ್ದೇಶದಿಂದಲೇ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಹಲವು ಸಂಘಟನೆಗಳು ಆರೋಪ ಮಾಡಿವೆ. ಜೊತೆಗೆ ದೇಶಾದ್ಯಂತ ನೂರಾರು ಭ್ರಷ್ಟಾಚಾರ ವಿರೋಧಿ ಮತ್ತು ಜನಪರ ಸಂಘಟನೆಗಳು ಈ ತಿದ್ದುಪಡಿಯ ವಿರುದ್ಧ ಹೋರಾಟಕ್ಕಿಳಿದಿವೆ. ಎನ್‍ಸಿಪಿಆರ್‍ಐ (ಜನರ ಮಾಹಿತಿ ಹಕ್ಕಿಗಾಗಿ ರಾಷ್ಟ್ರೀಯ ಆಂದೋಲನ) ಈ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದು ಎನ್‍ಎಪಿಎಂ, ಎಸಿಟಿ, ಎನ್‍ಆರ್‍ಪಿಸಿ, ಎನ್‍ಎಫ್‍ಐಡಬ್ಲೂ ಮುಂತಾದ ಸಂಘಟನೆಗಳು ಜುಲೈ 18ರಂದು ಅಧಿವೇಶನದ ಆರಂಭದ ದಿನವೇ ದೆಹಲಿಯಲ್ಲಿ ಬೃಹತ್ ರ್ಯಾಲಿ ಮತ್ತು ‘ಜನ್ ಮಂಚ್’ ಹೋರಾಟ ನಡೆಸಿವೆ.
ಉದ್ದೇಶಿತ ತಿದ್ದುಪಡಿಯನ್ನು ಕೈಬಿಡುವುದು ಮತ್ತು ವಿಶಲ್ ಬ್ಲೋಯರ್ಸ್ ಪ್ರೊಟೆಕ್ಷನ್ ಆಕ್ಟ್ ತಕ್ಷಣದಿಂದ ಜಾರಿಗೆ ತರುವುದು, ಚುನಾವಣಾ ಬಾಂಡ್ (ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಮಾಹಿತಿಯನ್ನು ಸಾರ್ವಜನಿಕಗೊಳಿಸದಿರುವುದು) ಪದ್ದತಿಯನ್ನು ಕೈಬಿಡುವುದು ಮತ್ತು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳಿಗೆ ಕೂಡಲೇ ಮುಖ್ಯಸ್ಥರನ್ನು ನೇಮಿಸುವಂತೆ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಈ ಹೋರಾಟದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತರಾಗಿ ದುಡಿದು ಕೊಲೆಯಾದ ನೂರಾರು ಕುಟುಂಬಗಳ ಸದಸ್ಯರು ಭಾಗವಹಿಸುತ್ತಿರುವುದು ಮಹತ್ವದ ಸಂಗತಿಯಾಗಿದೆ. ಇತ್ತೀಚೆಗೆ ಬಿಹಾರದಲ್ಲಿ ಭ್ರಷ್ಟಾಚಾರವನ್ನು ಬಯಲುಗೊಳಿಸಿದ್ದಕ್ಕಾಗಿ ಕೊಲೆಗೀಡಾದ ರಾಜೇಂದರ್ ಸಿಂಗ್ ಮತ್ತು ವಾಲ್ಮೀಕಿ ಯಾದವ್‍ರವರ ಕುಟುಂಬ ಕೂಡ ಜನ್ ಮಂಚ್‍ನಲ್ಲಿ ಭಾಗವಹಿಸಿದೆ. ವ್ಯಾಪಂ ಹಗರಣವನ್ನು ಬೆಳಕಿಗೆ ತರುವಲ್ಲಿ ಮುಖ್ಯ ಪಾತ್ರ ವಹಿಸಿದ ಆಶಿಶ್ ಚತುರ್ವೇದಿ ಕೂಡ ಹೋರಾಟದಲ್ಲಿದ್ದಾರೆ.
ಕರ್ನಾಟಕವೂ ಈ ನಿಟ್ಟಿನಲ್ಲಿ ಕ್ರಿಯಾಶೀಲಗೊಳ್ಳುವ ಅಗತ್ಯವಿದೆ.

– ಮುತ್ತುರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...