Homeಮುಖಪುಟಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ...’

ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ…’

- Advertisement -
- Advertisement -

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಢಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‌ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‌ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

`ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ’ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‌ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಅವರು, ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು’ ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.

ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ ಎಂದಿರುವ ಅಗರ್ವಾಲ್ ಇದಕ್ಕೆ ಸಾಕ್ಷಿಯಾಗಿ ಸಂಘ ಪರಿವಾರದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, `300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‌ಬರೇಲಿಯಲ್ಲಿ ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.

ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ.  ಅದ್ವಾನಿಯವರನ್ನು  ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಯಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‌ವಾಲ್ ಹೇಳಿದ್ದಾರೆ.

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ’ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‌ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.

(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...