Homeಮುಖಪುಟಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ...’

ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ…’

- Advertisement -
- Advertisement -

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಢಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‌ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‌ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

`ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ’ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‌ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಅವರು, ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು’ ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.

ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ ಎಂದಿರುವ ಅಗರ್ವಾಲ್ ಇದಕ್ಕೆ ಸಾಕ್ಷಿಯಾಗಿ ಸಂಘ ಪರಿವಾರದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, `300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‌ಬರೇಲಿಯಲ್ಲಿ ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.

ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ.  ಅದ್ವಾನಿಯವರನ್ನು  ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಯಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‌ವಾಲ್ ಹೇಳಿದ್ದಾರೆ.

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ’ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‌ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.

(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...