Homeಮುಖಪುಟಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ...’

ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ…’

- Advertisement -
- Advertisement -

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಢಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‌ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‌ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

`ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ’ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‌ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಅವರು, ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು’ ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.

ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ ಎಂದಿರುವ ಅಗರ್ವಾಲ್ ಇದಕ್ಕೆ ಸಾಕ್ಷಿಯಾಗಿ ಸಂಘ ಪರಿವಾರದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, `300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‌ಬರೇಲಿಯಲ್ಲಿ ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.

ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ.  ಅದ್ವಾನಿಯವರನ್ನು  ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಯಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‌ವಾಲ್ ಹೇಳಿದ್ದಾರೆ.

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ’ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‌ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.

(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...