Homeಕರ್ನಾಟಕಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ...

ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ ಟಿವಿ!

- Advertisement -
| ನಾನುಗೌರಿ ಡೆಸ್ಕ್ |
ಕಳೆದ ನಾಲ್ಕೈದು ವರ್ಷಗಳಿಂದ ಮಾಧ್ಯಮಗಳು ಬಿಜೆಪಿ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿರುವುದು ಸರ್ವೇಸಾಮಾನ್ಯವಾಗೊ ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕನ್ನಡ ಮಾಧ್ಯಮಗಳಂತೂ ತಮಗೆ ಸರಿಸಾಟಿ ಯಾರು ಇಲ್ಲವೆಂಬಂತೆ ಮೋದಿಯ ಗುಣಗಾನ ಮಾಡುವುದಕ್ಕೆ ಪೈಪೋಟಿಗೆ ಬಿದ್ದಿವೆ. ಬೆಳಗ್ಗೆಯ ಸಮಯದಲ್ಲಿ ಸುಪ್ರಭಾತ, ಭಕ್ತಿದೇಗುಲಗಳಂತ ಮೌಢ್ಯತುಂಬುವ ಕಾರ್ಯಕ್ರಮ ಕೊಡುತ್ತಿದ್ದ ಮಾಧ್ಯಮಗಳು ಈಗ ಮೋದಿಯ ಮೌಢ್ಯವನ್ನು ತುಂಬಲು ಶುರುವಿಟ್ಟಿವೆ. ಇದರಲ್ಲಿ ಸುವರ್ಣ ಟಿವಿಯಂತೂ ಮೋದಿಯ ಹೆಸರನೇ ಜಪಿಸುವುದರಲ್ಲಿ ತಲ್ಲೀನವಾಗಿವೆ.
ಅಂದಹಾಗೆ ಮೊನ್ನೆ ಸುವರ್ಣ ನ್ಯೂಸ್‍ನಲ್ಲಿ ರಾತ್ರಿಯ ಸುವರ್ಣ ಫೋಕಸ್ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ಇಂದಲೇ ಜಾಹೀರಾತು ನೀಡಲು ಆರಂಭಿಸಿದ್ದರು. ಅಂತದ್ದೇನಿದೆ ಎಂದು ನೋಡಿದ್ರೆ ಅದರ ಟೈಟಲ್ ‘ಬಾಹುಬಲಿ ಮೋದಿ’ ಎಂದಿತ್ತು.
ಅಬ್ಬಾ… ನಮ್ ಪ್ರಧಾನಿ ಮೋದಿ ಏನಾದ್ರು ಬಾಹುಬಲಿ 3 ಸಿನಿಮಾ ಏನಾದ್ರು ಮಾಡಿದ್ದಾರ ಅಥವಾ ಬಂಡೆ ಮೇಲೆ ಮಲಗಿ ಯೋಗ ಮಾಡ್ತಿದ್ದೋರು ಆ ಬಂಡೆನೇನಾದ್ರು ಎತ್ತಿ ಹೆಗಲ ಮೇಲೆ ಇಟ್ಕೊಬಿಟ್ರಾ ಅಂತ ರಾತ್ರಿವರೆಗೆ ಕಾದು ನೋಡಿದ್ವಿ. ಅಲ್ಲಿ ನೋಡಿದ್ರ ಆ ವಿಷ್ಯಕ್ಕೂ ಮೋದಿಗೂ ಸಂಬಂಧನೇ ಇರಲಿಲ್ಲ. ಆದ್ರು ಮೋದಿ ಕಾರ್ಯಕ್ರಮದ ಹೀರೋ ಆಗಿದ್ದು ಸೋಜಿಗ.
ಆ ಕಾರ್ಯಕ್ರಮದ ವಿಷಯ ಬಾಹ್ಯಾಕಾಶ ಸಮರದ ಬಗ್ಗೆ ಇತ್ತು. ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ. ಸೂಪರ್ ಸುಪ್ರಿಂ ರಾಷ್ಟ್ರಗಳಿಗೆ ಮೋದಿ ಹಾಕ್ತಿದ್ದಾರೆ ಚಾಲೆಂಜ್ ಎಂದೆಲ್ಲಾ ಬಿಲ್ಡಪ್ ಕೊಡಲಾಗುತ್ತಿತ್ತು. ನೋಡುಗರಲ್ಲಿ ಅದೆಂತಾ ಬಟನ್ ಇರಬಹುದು ಅದು, ಮೋದಿ ಏನಾದ್ರು ಕಂಡುಹಿಡಿದ್ರಾ ಎಂಬ ಕುತೂಹಲ ಕೆರಳಿಸಿತ್ತು.
ಮೊದಲನೆಯದಾಗಿ ಇಂದು ಎಲ್ಲಾ ದೇಶಗಳು ಯುದ್ಧ ಸಾಮಗ್ರಿಗಳಿಗೆ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದು ಗೊತ್ತೇ ಇದೆ. ಅದರಲ್ಲಿ ಭಾರತವೂ ಒಂದು. ಭಾರತವು ಪ್ರಾನ್ಸ್, ರಷ್ಯಾದಂತಹ ದೇಶಗಳಿಂದ ಯುದ್ಧ ವಿಮಾನಗಳು, ತಂತ್ರಜ್ಞಾನಗಳನ್ನು ಪಡೆದುಕೊಳ್ಳುತ್ತಿದೆ. ಅಂತದ್ದೇ ವಿಮಾನ ಖರೀದಿಯ ಡೀಲ್‍ನಲ್ಲಿ ಮೋದಿ ಸಾಹೇಬರ ಪಾತ್ರ ಎಂತದ್ದು ಅಂತ ಇಡೀ ಜಗತ್ತೇ ನೋಡಿದೆ.
ಇತ್ತೀಚೆಗೆ ಯುದ್ದ ತಂತ್ರಜ್ಞಾನಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು ಸಾವಿರಾರು ಕಿಲೋ ಮೀಟರ್ ದೂರದ ಸ್ಥಳಗಳಿಗೆ ತಾವಿರುವ ಜಾಗದಿಂದಲೇ ಬಾಂಬ್ ಉಡಾಯಿಸುವ ತಂತ್ರಜ್ಞಾನ ಬಂದು ವರ್ಷಗಳೇ ಕಳೆದಿವೆ. ಅಂತಹ ತಂತ್ರಜ್ಞಾನವನ್ನು ಭಾರತ ಕೂಡ ಪಡೆದುಕೊಂಡಿದೆ. ಇದರಲ್ಲಿ ಅಂತಹ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ ಅದರ ಕ್ರೆಡಿಟ್ ಕೊಡುವುದು ಸಾಮಾನ್ಯ. ಆದರೆ ಒಂದು ಬಟನ್ ಒತ್ತಿದ್ರೆ ಸಾಕು ಅಂತ ಹೇಳುವಾಗ ಅಲ್ಲಿ ಮೋದಿಯ ಪಾತ್ರವೇನೂ ಇಲ್ಲ. ಅದರ ಕ್ರೆಡಿಟ್ ಅಂತಹ ತಂತ್ರ ಸಂಶೋಧಿಸಿದವರಿಗೆ ಸೇರಿದ್ದು.
ಇನ್ನು ಸುಪ್ರಿಂ ರಾಷ್ಟ್ರಗಳಿಗೆ ಚಾಲೆಂಜ್ ಹಾಕ್ತಿದ್ದಾರೆ ಮೋದಿ ಎಂದು ಬೇರೆ ಹೇಳಲಾಗಿತ್ತು. ಇಂದಿಗೂ ನೆರೆ ರಾಷ್ಟ್ರಗಳಿಂದ ಯುದ್ದ ಅಸ್ತ್ರಗಳನ್ನ ಕೊಂಡುಕೊಳ್ಳುತ್ತಿರುವಾಗ, ಇಡೀ ವಿಶ್ವಕ್ಕೆ ಯುದ್ದಾಸ್ತ್ರಗಳನ್ನ ಸಪ್ಲೇ ಮಾಡುತ್ತಿರುವ ರಾಷ್ಟ್ರಗಳಲ್ಲಿ ಅಂತಹ ಅಸ್ತ್ರಗಳು ಅದೆಷ್ಟಿರಬಹುದು ಎಂಬ ಅರಿವೂ ಈ ಸುವರ್ಣ ಚಾನೆಲ್‍ನವರಿಗೆ ಇದ್ದಂತಿಲ್ಲ.
ಯುದ್ದ ವಿಚಾರ ನೋಡುವುದಾದರೆ ಅದರಲ್ಲಿ ಸೈನ್ಯದ ಪಾತ್ರದ ಮಹತ್ವದ್ದು, ಯುದ್ದ ಮಾಡಿ ಎಂದು ಹೇಳುವಷ್ಟು ಸುಲಭವಾಗಿ ಯುದ್ದ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಯುದ್ದವನ್ನು ಗೆಲ್ಲುವ ಸೈನಿಕರಿಗೆ ಆ ಕಾರ್ಯಕ್ರಮದಲ್ಲಿ ಯಾವ ಕ್ರೆಡಿಟ್ಟೂ ಇರಲಿಲ್ಲ.
ಇಷ್ಟೆಲ್ಲಾ ಇದ್ದರೂ ಕೂಡ ಸುವರ್ಣ ಚಾನೆಲ್ ಮೋದಿಯೇ ಯುದ್ಧಭೂಮಿಯಲ್ಲಿ ನಿಂತು ಯುದ್ಧ ಮಾಡಿ ಗೆದ್ದಿರುವಂತೆ, ಮೋದಿಯೇ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಂತೆ ಮೋದಿಯ ಬಗ್ಗೆ ಬಿಲ್ಡಪ್ ಕೊಡುತ್ತಿರುವುದು ಸೈನ್ಯಕ್ಕೆ ಮಾಡುವ ಅವಮಾನವೂ ಹೌದು. ವಿಶ್ಲೇಷಣೆ, ಮೌಲ್ಯಮಾಪನ, ಪ್ರತಿಕಾ ನೀತಿಗಳನ್ನೇ ಮರೆತಿರುವ ಇಂತಹ ನ್ಯೂಸ್ ಚಾನೆಲ್‍ಗಳು ಇನ್ನೆಂಥಾ ಸುದ್ದಿಯನ್ನು ಬಿತ್ತರಿಸಲು ಸಾಧ್ಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Super news from Nanu gouri it is an excellent news paper and it should cover all district of karnataka because other papers baise papers and TV channels…..

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...