Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...