Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...