Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...