Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...