Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...