Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...